Homeಮುಖಪುಟ1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

- Advertisement -
- Advertisement -

ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿ ದಾಖಲೆ ಸೃಷ್ಟಿಸಿವೆ. ದಿನದಲ್ಲಿ 1027 ಸಾವುಗಳು ಸಂಭವಿಸಿವೆ. ಈ ನಡುವೆಯೇ ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ ಜರುಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಮುಂಜಾನೆ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವರು. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿದೆ.

ಮಾರ್ಚ್ 11 ರಂದು ಮಹಾಶಿವರಾತ್ರಿಯಂದು ಮೊದಲ ಶಾಹಿ ಸ್ನಾನ ನಡೆದರೆ, ಎರಡನೆಯದು ಏಪ್ರಿಲ್ 12ರ ಸೋಮವಾರ ಸೋಮವತಿ ಅಮಾವಾಸ್ಯೆಯಲ್ಲಿ ನಡೆಯಿತು. ಇಂದು ಮೂರನೇ ಮತ್ತು ಅತಿ ದೊಡ್ಡ ಶಾಹಿ ಸ್ನಾನ ಜರುಗಲಿದೆ. ಹಿಂದೂಗಳ ಪವಿತ್ರ ಆಚರಣೆ ಎಂದು ಕರೆಯಲ್ಪಡುವ ಕುಂಭಮೇಳ ಪ್ರತಿ ವರ್ಷ ಮೂರ್ನಾಲ್ಕು ತಿಂಗಳು ನಡೆಯುತ್ತಿತ್ತು. ಈ ವರ್ಷ ಸಾಂಕ್ರಾಮಿಕದ ಕಾರಣದಿಂದಾಗಿ ಒಂದು ತಿಂಗಳಿಗೆ ಸೀಮಿತಗೊಳಿಸಲಾಗಿದೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಭಕ್ತರು ಮಾಸ್ಕ್ ಧರಿಸಲಿಲ್ಲ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವೆಂದು ಕಂಡುಬಂದಿದೆ. ಉತ್ತರಾಖಂಡ ಸರ್ಕಾರದ ಹೇಳಿಕೆಯ ಪ್ರಕಾರ ಸುಮಾರು 35 ಲಕ್ಷ ಜನರು ಭಾಗವಹಿಸಿದ್ದರು ಎನ್ನಲಾಗಿದೆ.

ಇನ್ನೊಂದೆಡೆ ದಿನನಿತ್ಯದ ಪ್ರಕರಣಗಳಲ್ಲಿ ಬಹುದೊಡ್ಡ ಏರಿಕೆಯಾಗಿದೆ. ಕಳೆದ ಆರು ತಿಂಗಳಲ್ಲಿಯೇ ಅತ್ಯಂತ ಹೆಚ್ಚಿನ ಸಾವುಗಳು (1,027) ಸಹ ನಿನ್ನೆ ಒಂದು ದಿನದಲ್ಲಿ ವರದಿಯಾಗಿವೆ. ಒಟ್ಟಾರೆಯಾಗಿ ಭಾರತವು 1.38 ಕೋಟಿ ಪ್ರಕರಣಗಳನ್ನು ದಾಖಲಿಸಿದ್ದು, 1,72,085 ಸಾವುಗಳನ್ನು ಕಂಡಿದೆ.

ಇದೇ ಸಂದರ್ಭದಲ್ಲಿ ಕಳೆದ ವರ್ಷದ ಮಾರ್ಚ್ ಮಧ್ಯಭಾಗದಲ್ಲಿ ತಬ್ಲಿಗಿಗಳು ಹಮ್ಮಿಕೊಂಡಿದ್ದ ಮರ್ಕಜ್ ಮತ್ತು ಈಗಿನ ಕುಂಭಮೇಳಕ್ಕೂ ಹೋಲಿಸುವುದು ಸರಿಯಲ್ಲ ಎಂದು ಉತ್ತರಖಂಡ ಸಿಎಂ ತಿರತ್ ಸಿಂಗ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರ್ಕಜ್‌ನಲ್ಲಿ ಕಿರಿದಾದ ಜಾಗದಲ್ಲಿ, ಕಟ್ಟಡದ ಒಳಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅದರಲ್ಲಿ ವಿದೇಶಿಯರೂ ಭಾಗವಹಿಸಿದ್ದರು. ಆದರೆ ಕುಂಭಮೇಳವನ್ನು ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಮತ್ತು ನಮ್ಮ ಭಕ್ತರು ಮಾತ್ರ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿದ್ದು, ಕಳೆದ ವರ್ಷ ಸಾಂಕ್ರಾಮಿಕ ಇನ್ನು ಆರಂಭಿಕ ಹಂತದಲ್ಲಿತ್ತು. ಸರ್ಕಾರಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ ಮತ್ತು ಕೇವಲ 3 ಸಾವಿರ ಜನ ಅಲ್ಲಿ ಭಾಗವಹಿಸಿದ್ದರು. ಆದರೆ ಈಗ ಕೊರೊನಾ ಎಂತಹ ಅಪಾಯಕಾರಿ ಸಾಂಕ್ರಾಮಿಕ ಎಂದು ನಮಗೆ ತಿಳಿದಿದೆ, ಆದರೂ ಕುಂಭಮೇಳದಲ್ಲಿ 35 ಲಕ್ಷ ಜನ ಭಾಗವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...