Homeಅಂತರಾಷ್ಟ್ರೀಯಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

ಭಾರತಕ್ಕೆ ಮತ್ತೆ 1 ಬಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್

- Advertisement -
- Advertisement -

ಕೋವಿಡ್-19 ವಿರುದ್ಧ ಹೋರಾಡಲು ಬೆಂಬಲವಾಗಿ ಮತ್ತು ಬಡವರಿಗೆ, ದುರ್ಬಲ ಕುಟುಂಬಗಳಿಗೆ ಸಹಾಯಹಸ್ತ ಚಾಚುವ ಉದ್ದೇಶದಿಂದ ಭಾರತಕ್ಕೆ ವಿಶ್ವಬ್ಯಾಂಕ್ ಒಂದು ಬಿಲಿಯನ್ ಡಾಲರ್ ಅನುಮೋದನೆ ನೀಡಿದೆ. ಶುಕ್ರವಾರ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ವಿಶ್ವಬ್ಯಾಂಕ್  ಭಾರತಕ್ಕೆ ಹಣಕಾಸು ನೆರವು ನೀಡಿರುವುದಾಗಿ ತಿಳಿಸಿದೆ.

ಕಳೆದ ತಿಂಗಳು ಭಾರತಕ್ಕೆ ಕೋವಿಡ್-19ರ ವಿರುದ್ದ ಹೋರಾಡಲು ವಿಶ್ವಬ್ಯಾಂಕ್ ತುರ್ತಾಗಿ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿತ್ತು. ಈಗ ಮತ್ತೆ ಒಂದು ಬಿಲಿಯನ್ ಡಾಲರ್ ಬಿಡುಗಡೆ ಮಾಡಿದ್ದು ಬಾರತಕ್ಕೆ ವಿಶ್ವಬ್ಯಾಂಕ್ 2 ಬಿಲಿಯನ್ ಡಾಲರ್ ಬಿಡುಗಡೆ ಮಾಡಿದಂತಾಗಿದೆ.

ವಿಶ್ವಬ್ಯಾಂಕ್ ನಿರ್ದೇಶಕ ಜುನೈದ್ ಅಹಮದ್ ಮಾತನಾಡಿ, ಭಾರತದೊಂದಿಗೆ ಮೂರು ಕ್ಷೇತ್ರಗಳಲ್ಲಿ ಪಾಲುದಾರನಾಗಿ ವಿಶ್ವಬ್ಯಾಂಕ್ ಕೆಲಸ ಮಾಡುತ್ತಿದೆ. ಆರೋಗ್ಯ, ಸಾಮಾಜಿಕ ರಕ್ಷಣೆ ಹಾಗೂ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕ್ಷೇತ್ರದಲ್ಲಿ ವಿಶ್ವಬ್ಯಾಂಕ್ ಪಾಲುದಾರನಾಗಿದ್ದು ಈ ಕಾರಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಸಾಮಾಜಿಕ ರಕ್ಷಣೆಗೆ ಅಂದರೆ ವಲಸೆ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರನ್ನು ವ್ಯವಸ್ಥೆಯೊಂದಿಗೆ ಸಂಯೋಜಿಸುವುದು ವಿಶ್ವಬ್ಯಾಂಕ್ ಉದ್ದೇಶವಾಗಿದೆ. ದೇಶದಲ್ಲಿ ಆಧಾರ್ ಮತ್ತು ಮೊಬೈಲ್ ಸಂಪರ್ಕ ಹೊಂದಿರುವ ಸಾರ್ವಜನಿಕ ವತರಣಾ ವ್ಯವಸ್ಥೆ, ಜನ್ ಧನ್ ಯೋಜನೆಗೆ ಸೌಲಭ್ಯವನ್ನು ಹೆಚ್ಚಿಸುವುದು ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಸಾಂಕ್ರಾಮಿ ರೋಗ ವಿಶ್ವವ್ಯಾಪಿ ಹರಡಿದ್ದು ಪ್ರತಿಯೊಂದು ದೇಶದ ಸರ್ಕಾರಗಳು ಕೂಡ ಲಾಕ್ ಡೌನ್ ಮುಂದುವರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಜುನೈದ್ ಅಹಮದ್ ಅಭಿಪ್ರಾಯಪಟ್ಟಿದ್ದಾರೆ.

ಕೊರೊನ ಸೋಂಕು ಆರ್ಥಿಕತೆ ಮತ್ತು ಅನೌಪಚಾರಿಕ ವಲಯದ ಉದ್ಯೋಗಗಳ ಮೇಲೆ ಭಾರೀ ಪರಿಣಾಮ ಬೀರಿದ್ದು ಲಾಕ್ ಡೌನ್ ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವ ಕ್ರಮಗಳಿಂದ ಸ್ವಲ್ಪಮಟ್ಟಿಗೆ ತಡೆಯಬಹುದು. ಭಾರತವು ದೊಡ್ಡ ಪ್ರಮಾಣದಲ್ಲಿ ಲಾಕ್ ಡೌನ್ ಮಾಡಿದ್ದು ಇದರಿಂದ ಹೊರತಾಗಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ! 

ಇಂಗ್ಲಿಷ್‌ ನ್ಯೂಸ್‌ಗಳಿಗಾಗಿ ಫಾಲೋ ಮಾಡಿ: GauriLankeshNews

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...