Homeರಾಜಕೀಯ1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು 1% ಭ್ರಷ್ಟಾಚಾರ ಆರೋಪದ ಮೇಲೆ ಮಂಗಳವಾರದಂದು ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವರ ವಿರುದ್ದ ದೃಢವಾದ ಸಾಕ್ಷ್ಯಗಳು ಕಂಡುಬಂದಿದ್ದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿಜಯ್‌ ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಒಂದು ಶೇಕಡಾ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅವರನ್ನು ಪದಚ್ಯುತಗೊಳಿಸಿದ ಕೂಡಲೇ ಪಂಜಾಬ್ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳವು ಅವರನ್ನು ಬಂಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಹೋದ್ಯೋಗಿಯ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿಯಾಗಿದೆ ಎಂದು ಎಎಪಿ ಪ್ರತಿಪಾದಿಸಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಚಿವರಲ್ಲಿ ಒಬ್ಬರನ್ನು ವಜಾಗೊಳಿಸಿದ್ದರು.

“ಒಂದು ಶೇಕಡಾ ಭ್ರಷ್ಟಾಚಾರವನ್ನು ಸಹ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭಗವಂತ್‌ ಮಾನ್ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

“ಜನರು ಎಎಪಿ ಸರ್ಕಾರಕ್ಕೆ ಸಾಕಷ್ಟು ಭರವಸೆಯೊಂದಿಗೆ ಮತ ಹಾಕಿದ್ದಾರೆ. ನಾವು ಅದನ್ನು ಹಾಗೆಯೆ ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆ” ಅವರು ಹೇಳಿದ್ದಾರೆ.

ಸಚಿವ ವಿಜಯ್‌ ಸಿಂಗ್ಲಾ ಅವರು ತನ್ನ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಎಎಪಿ ತನ್ನ ಮುಖ್ಯಮಂತ್ರಿಯ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

ಎಎಪಿ ಸಂಸದ ರಾಘವ್ ಚಡ್ಡಾ ಅವರು ಮುಖ್ಯಮಂತ್ರಿಯ ನಿರ್ಧಾರವನ್ನು ಶ್ಲಾಘಿಸಿದ್ದು, ತನ್ನದೇ ಆದ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಪ್ರಾಮಾಣಿಕತೆ ಮತ್ತು ಧೈರ್ಯವನ್ನು ಹೊಂದಿರುವ ಏಕೈಕ ಪಕ್ಷವಾಗಿದೆ ಎಂದು ಅವರು ಹೇಳಿದ್ದಾರೆ.

“ಭ್ರಷ್ಟಾಚಾರದ ಆಧಾರದ ಮೇಲೆ ತಮ್ಮ ವಿರುದ್ಧವೇ ಕ್ರಮ ಕೈಗೊಳ್ಳಲು ಪ್ರಾಮಾಣಿಕತೆ ಮತ್ತು ಧೈರ್ಯ ಹೊಂದಿರುವ ಏಕೈಕ ಪಕ್ಷ ಆಮ್ ಆದ್ಮಿ ಪಕ್ಷ. ನಾವು ಈ ಹಿಂದೆ ಅದನ್ನು ದೆಹಲಿಯಲ್ಲಿ ನೋಡಿದ್ದೆವು, ಈಗ ಪಂಜಾಬ್‌ನಲ್ಲಿ ಅದನ್ನು ನೋಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ. ಸಿಎಂ ಭಗವಂತಮಾನ್ ಅವರ ಶ್ಲಾಘನೀಯ ನಿರ್ಧಾರ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾವೆಲ್ಲರೂ ಅರವಿಂದ್ ಕೇಜ್ರಿವಾಲ್ ಅವರ ಸೈನಿಕರು, ಅವರು ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೊಗೆಯುತ್ತಾರೆ ಎಂದು ಪ್ರತಿಜ್ಞೆ ಮಾಡಿದರು. ಒಂದು ಶೇಕಡಾ ಭ್ರಷ್ಟಾಚಾರಕ್ಕೂ ಅವಕಾಶವಿಲ್ಲ” ಎಂದು ಭಗವಂತಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...