Homeರಾಜಕೀಯ1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು 1% ಭ್ರಷ್ಟಾಚಾರ ಆರೋಪದ ಮೇಲೆ ಮಂಗಳವಾರದಂದು ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವರ ವಿರುದ್ದ ದೃಢವಾದ ಸಾಕ್ಷ್ಯಗಳು ಕಂಡುಬಂದಿದ್ದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿಜಯ್‌ ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಒಂದು ಶೇಕಡಾ ಕಮಿಷನ್‌ಗೆ ಬೇಡಿಕೆಯಿಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅವರನ್ನು ಪದಚ್ಯುತಗೊಳಿಸಿದ ಕೂಡಲೇ ಪಂಜಾಬ್ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳವು ಅವರನ್ನು ಬಂಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಹೋದ್ಯೋಗಿಯ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿಯಾಗಿದೆ ಎಂದು ಎಎಪಿ ಪ್ರತಿಪಾದಿಸಿದೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?

ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಚಿವರಲ್ಲಿ ಒಬ್ಬರನ್ನು ವಜಾಗೊಳಿಸಿದ್ದರು.

“ಒಂದು ಶೇಕಡಾ ಭ್ರಷ್ಟಾಚಾರವನ್ನು ಸಹ ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭಗವಂತ್‌ ಮಾನ್ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

“ಜನರು ಎಎಪಿ ಸರ್ಕಾರಕ್ಕೆ ಸಾಕಷ್ಟು ಭರವಸೆಯೊಂದಿಗೆ ಮತ ಹಾಕಿದ್ದಾರೆ. ನಾವು ಅದನ್ನು ಹಾಗೆಯೆ ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆ” ಅವರು ಹೇಳಿದ್ದಾರೆ.

ಸಚಿವ ವಿಜಯ್‌ ಸಿಂಗ್ಲಾ ಅವರು ತನ್ನ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಎಎಪಿ ತನ್ನ ಮುಖ್ಯಮಂತ್ರಿಯ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

ಎಎಪಿ ಸಂಸದ ರಾಘವ್ ಚಡ್ಡಾ ಅವರು ಮುಖ್ಯಮಂತ್ರಿಯ ನಿರ್ಧಾರವನ್ನು ಶ್ಲಾಘಿಸಿದ್ದು, ತನ್ನದೇ ಆದ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳುವ ಪ್ರಾಮಾಣಿಕತೆ ಮತ್ತು ಧೈರ್ಯವನ್ನು ಹೊಂದಿರುವ ಏಕೈಕ ಪಕ್ಷವಾಗಿದೆ ಎಂದು ಅವರು ಹೇಳಿದ್ದಾರೆ.

“ಭ್ರಷ್ಟಾಚಾರದ ಆಧಾರದ ಮೇಲೆ ತಮ್ಮ ವಿರುದ್ಧವೇ ಕ್ರಮ ಕೈಗೊಳ್ಳಲು ಪ್ರಾಮಾಣಿಕತೆ ಮತ್ತು ಧೈರ್ಯ ಹೊಂದಿರುವ ಏಕೈಕ ಪಕ್ಷ ಆಮ್ ಆದ್ಮಿ ಪಕ್ಷ. ನಾವು ಈ ಹಿಂದೆ ಅದನ್ನು ದೆಹಲಿಯಲ್ಲಿ ನೋಡಿದ್ದೆವು, ಈಗ ಪಂಜಾಬ್‌ನಲ್ಲಿ ಅದನ್ನು ನೋಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಶೂನ್ಯ ಸಹಿಷ್ಣುತೆ. ಸಿಎಂ ಭಗವಂತಮಾನ್ ಅವರ ಶ್ಲಾಘನೀಯ ನಿರ್ಧಾರ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ನಾವೆಲ್ಲರೂ ಅರವಿಂದ್ ಕೇಜ್ರಿವಾಲ್ ಅವರ ಸೈನಿಕರು, ಅವರು ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೊಗೆಯುತ್ತಾರೆ ಎಂದು ಪ್ರತಿಜ್ಞೆ ಮಾಡಿದರು. ಒಂದು ಶೇಕಡಾ ಭ್ರಷ್ಟಾಚಾರಕ್ಕೂ ಅವಕಾಶವಿಲ್ಲ” ಎಂದು ಭಗವಂತಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....