Homeಮುಖಪುಟಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

- Advertisement -
- Advertisement -

ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಗುಣ ಪಡೆದುಕೊಳ್ಳುತ್ತದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಅದು ಸುಳ್ಳು ಎಂದಿರುವ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ನಾವು ಹೇಳಿದಂತೆ ಮೈಮೇಲೆ ಸ್ಯಾನಿಟೈಸರ್ ಮಾಡಿದ ಬಳಿಕ ದೇಹ ಮ್ಯಾಗ್ನೆಟಿಕ್ ಶಕ್ತಿ ಪಡೆದಿದೆಯೆಂದು ಮತ್ತು ಲೋಹಗಳು ಅದಕ್ಕೆ ಅಂಟಿಕೊಳ್ಳುತ್ತದೆ ಎಂದು ಸಾಬೀತುಪಡಿಸಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ಸುದ್ದಿ ಹಬ್ಬಿತ್ತು. ವ್ಯಕ್ತಿಯ ಚರ್ಮದ ಮೇಲಿನ ತೇವಾಂಶವು ಮೇಲ್ಮೈ ಒತ್ತಡದಿಂದ ವಸ್ತುಗಳು ಅಂಟಿಕೊಳ್ಳುವಂತೆ ಮಾಡುತ್ತದೆ. ಇದಕ್ಕೆ ಮ್ಯಾಗ್ನೆಟಿಸಮ್ ಎಂದು ಹೇಳಬಹುದು ಎಂದು ಅದರ ಹಿಂದಿನ ಕಾರಣವನ್ನು ನರೇಂದ್ರ ನಾಯಕ್ ವಿವರಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದರಿಂದ ಜನರು ಹಿಂಜರಿಯುವಂತೆ ಮಾಡಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಲಸಿಕೆ ಮೂಲಕ ಅಥವಾ ಬೇರೆ ಯಾವುದೇ ವಿಧಾನದಿಂದ ಕಾಂತೀಯತೆಯನ್ನು ಮಾನವ ದೇಹಕ್ಕೆ ಪ್ರಚೋದಸಲು ಸಾಧ್ಯವಿಲ್ಲ. ಹೀಗೆ ಪ್ರತಿಪಾದಿಸುವವರಿಗೆ ನಾವು 10 ಸೆಕೆಂಡ್‌ಗಳ ಪರೀಕ್ಷೆಯ ಸವಾಲು ಹಾಕುತ್ತೇವೆ. ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿದೆ ಎಂದು ಹೇಳಿಕೊಳ್ಳುವ ವ್ಯಕ್ತಿಯ ದೇಹದ ಮೇಲೆ ಕರವಸ್ತ್ರದಿಂದ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಹಾಕಿ ಅದು ಒಣಗಿದ ನಂತರ ಆ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತವೆಯೇ ಎಂದು ನೋಡಬೇಕು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯಕ್ತಿಯ ಚರ್ಮದ ಮೇಲಿನ ತೇವಾಂಶದ ಮೇಲ್ಮೈ ಒತ್ತಡವನ್ನು ಕಡಿಮೆ ಮಾಡುವುದರಿಂದ ಆ ವ್ಯಕ್ತಿಯ ಮೇಲೆ ಲೋಹದ ವಸ್ತುಗಳು ಅಂಟಿಕೊಳ್ಳುವುದಿಲ್ಲ. ಒಂದು ವೇಳೆ ಅಂಟಿಕೊಳ್ಳುತ್ತದೆ ಎಂದು ಪ್ರತಿಪಾದಿಸುವವರು ಇದ್ದರೆ ನಮ್ಮ ಸವಾಲು ಸ್ವೀಕರಿಸಲು ಎಂದು ಅವರು ಘೋಷಿಸಿದ್ದಾರೆ.

ಸ್ಯಾನಿಟೈಸರ್ ಇಲ್ಲದಿದ್ದಲ್ಲಿ ಸೋಪ್ ದ್ರವದಿಂದ ಸಹ ಈ ಪರೀಕ್ಷೆ ಮಾಡಬಹುದು. ಸೋಪ್‌ ನೀರಿನಿಂದ ದೇಹವನ್ನು ತೊಳೆದ ನಂತರ ಚೆನ್ನಾಗಿ ಒಣಗಿದ ತಕ್ಷಣವೇ ಈ ಪರೀಕ್ಷೆ ಮಾಡಬೇಕು. ಯಾರಾದರೂ ಲೋಹದ ವಸ್ತುಗಳು ಅಂಟಿಕೊಳ್ಳುವುದನ್ನು ತೋರಿಸಿದರೆ ಅವರಿಗೆ 1 ಲಕ್ಷ ರೂಗಳ ಬಹುಮಾನ ನೀಡುತ್ತೇವೆ, ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಅವರು ತಮ್ಮ ಮೊಬೈಲ್ ಸಂಖ್ಯೆ (94482 16343) ನೀಡಿದ್ದಾರೆ.

ಜನ ಲಸಿಕೆ ತೆಗೆದುಕೊಳ್ಳದಂತೆ ಭಯ ಹುಟ್ಟಿಸುವ ಇಂತಹ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಪರವಾಗಿ ತಿಳಿಸಿದ್ದಾರೆ. ಈ ಕುರಿತು ಈ ಹಿಂದೆ ನಾನುಗೌರಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಲೇಖನ ಪ್ರಕಟಿಸಿದೆ. ಅದನ್ನು ಈ ಕೆಳಗೆ ಓದಬಹುದು.


ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...