Homeಮುಖಪುಟಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

- Advertisement -
- Advertisement -

ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಗುಣ ಪಡೆದುಕೊಳ್ಳುತ್ತದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಅದು ಸುಳ್ಳು ಎಂದಿರುವ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ನಾವು ಹೇಳಿದಂತೆ ಮೈಮೇಲೆ ಸ್ಯಾನಿಟೈಸರ್ ಮಾಡಿದ ಬಳಿಕ ದೇಹ ಮ್ಯಾಗ್ನೆಟಿಕ್ ಶಕ್ತಿ ಪಡೆದಿದೆಯೆಂದು ಮತ್ತು ಲೋಹಗಳು ಅದಕ್ಕೆ ಅಂಟಿಕೊಳ್ಳುತ್ತದೆ ಎಂದು ಸಾಬೀತುಪಡಿಸಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ಸುದ್ದಿ ಹಬ್ಬಿತ್ತು. ವ್ಯಕ್ತಿಯ ಚರ್ಮದ ಮೇಲಿನ ತೇವಾಂಶವು ಮೇಲ್ಮೈ ಒತ್ತಡದಿಂದ ವಸ್ತುಗಳು ಅಂಟಿಕೊಳ್ಳುವಂತೆ ಮಾಡುತ್ತದೆ. ಇದಕ್ಕೆ ಮ್ಯಾಗ್ನೆಟಿಸಮ್ ಎಂದು ಹೇಳಬಹುದು ಎಂದು ಅದರ ಹಿಂದಿನ ಕಾರಣವನ್ನು ನರೇಂದ್ರ ನಾಯಕ್ ವಿವರಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದರಿಂದ ಜನರು ಹಿಂಜರಿಯುವಂತೆ ಮಾಡಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಲಸಿಕೆ ಮೂಲಕ ಅಥವಾ ಬೇರೆ ಯಾವುದೇ ವಿಧಾನದಿಂದ ಕಾಂತೀಯತೆಯನ್ನು ಮಾನವ ದೇಹಕ್ಕೆ ಪ್ರಚೋದಸಲು ಸಾಧ್ಯವಿಲ್ಲ. ಹೀಗೆ ಪ್ರತಿಪಾದಿಸುವವರಿಗೆ ನಾವು 10 ಸೆಕೆಂಡ್‌ಗಳ ಪರೀಕ್ಷೆಯ ಸವಾಲು ಹಾಕುತ್ತೇವೆ. ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿದೆ ಎಂದು ಹೇಳಿಕೊಳ್ಳುವ ವ್ಯಕ್ತಿಯ ದೇಹದ ಮೇಲೆ ಕರವಸ್ತ್ರದಿಂದ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಹಾಕಿ ಅದು ಒಣಗಿದ ನಂತರ ಆ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತವೆಯೇ ಎಂದು ನೋಡಬೇಕು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯಕ್ತಿಯ ಚರ್ಮದ ಮೇಲಿನ ತೇವಾಂಶದ ಮೇಲ್ಮೈ ಒತ್ತಡವನ್ನು ಕಡಿಮೆ ಮಾಡುವುದರಿಂದ ಆ ವ್ಯಕ್ತಿಯ ಮೇಲೆ ಲೋಹದ ವಸ್ತುಗಳು ಅಂಟಿಕೊಳ್ಳುವುದಿಲ್ಲ. ಒಂದು ವೇಳೆ ಅಂಟಿಕೊಳ್ಳುತ್ತದೆ ಎಂದು ಪ್ರತಿಪಾದಿಸುವವರು ಇದ್ದರೆ ನಮ್ಮ ಸವಾಲು ಸ್ವೀಕರಿಸಲು ಎಂದು ಅವರು ಘೋಷಿಸಿದ್ದಾರೆ.

ಸ್ಯಾನಿಟೈಸರ್ ಇಲ್ಲದಿದ್ದಲ್ಲಿ ಸೋಪ್ ದ್ರವದಿಂದ ಸಹ ಈ ಪರೀಕ್ಷೆ ಮಾಡಬಹುದು. ಸೋಪ್‌ ನೀರಿನಿಂದ ದೇಹವನ್ನು ತೊಳೆದ ನಂತರ ಚೆನ್ನಾಗಿ ಒಣಗಿದ ತಕ್ಷಣವೇ ಈ ಪರೀಕ್ಷೆ ಮಾಡಬೇಕು. ಯಾರಾದರೂ ಲೋಹದ ವಸ್ತುಗಳು ಅಂಟಿಕೊಳ್ಳುವುದನ್ನು ತೋರಿಸಿದರೆ ಅವರಿಗೆ 1 ಲಕ್ಷ ರೂಗಳ ಬಹುಮಾನ ನೀಡುತ್ತೇವೆ, ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಅವರು ತಮ್ಮ ಮೊಬೈಲ್ ಸಂಖ್ಯೆ (94482 16343) ನೀಡಿದ್ದಾರೆ.

ಜನ ಲಸಿಕೆ ತೆಗೆದುಕೊಳ್ಳದಂತೆ ಭಯ ಹುಟ್ಟಿಸುವ ಇಂತಹ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಪರವಾಗಿ ತಿಳಿಸಿದ್ದಾರೆ. ಈ ಕುರಿತು ಈ ಹಿಂದೆ ನಾನುಗೌರಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಲೇಖನ ಪ್ರಕಟಿಸಿದೆ. ಅದನ್ನು ಈ ಕೆಳಗೆ ಓದಬಹುದು.


ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...