Homeಮುಖಪುಟಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

- Advertisement -
- Advertisement -

ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಗುಣ ಪಡೆದುಕೊಳ್ಳುತ್ತದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಅದು ಸುಳ್ಳು ಎಂದಿರುವ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ನಾವು ಹೇಳಿದಂತೆ ಮೈಮೇಲೆ ಸ್ಯಾನಿಟೈಸರ್ ಮಾಡಿದ ಬಳಿಕ ದೇಹ ಮ್ಯಾಗ್ನೆಟಿಕ್ ಶಕ್ತಿ ಪಡೆದಿದೆಯೆಂದು ಮತ್ತು ಲೋಹಗಳು ಅದಕ್ಕೆ ಅಂಟಿಕೊಳ್ಳುತ್ತದೆ ಎಂದು ಸಾಬೀತುಪಡಿಸಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ಸುದ್ದಿ ಹಬ್ಬಿತ್ತು. ವ್ಯಕ್ತಿಯ ಚರ್ಮದ ಮೇಲಿನ ತೇವಾಂಶವು ಮೇಲ್ಮೈ ಒತ್ತಡದಿಂದ ವಸ್ತುಗಳು ಅಂಟಿಕೊಳ್ಳುವಂತೆ ಮಾಡುತ್ತದೆ. ಇದಕ್ಕೆ ಮ್ಯಾಗ್ನೆಟಿಸಮ್ ಎಂದು ಹೇಳಬಹುದು ಎಂದು ಅದರ ಹಿಂದಿನ ಕಾರಣವನ್ನು ನರೇಂದ್ರ ನಾಯಕ್ ವಿವರಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದರಿಂದ ಜನರು ಹಿಂಜರಿಯುವಂತೆ ಮಾಡಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಲಸಿಕೆ ಮೂಲಕ ಅಥವಾ ಬೇರೆ ಯಾವುದೇ ವಿಧಾನದಿಂದ ಕಾಂತೀಯತೆಯನ್ನು ಮಾನವ ದೇಹಕ್ಕೆ ಪ್ರಚೋದಸಲು ಸಾಧ್ಯವಿಲ್ಲ. ಹೀಗೆ ಪ್ರತಿಪಾದಿಸುವವರಿಗೆ ನಾವು 10 ಸೆಕೆಂಡ್‌ಗಳ ಪರೀಕ್ಷೆಯ ಸವಾಲು ಹಾಕುತ್ತೇವೆ. ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿದೆ ಎಂದು ಹೇಳಿಕೊಳ್ಳುವ ವ್ಯಕ್ತಿಯ ದೇಹದ ಮೇಲೆ ಕರವಸ್ತ್ರದಿಂದ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಹಾಕಿ ಅದು ಒಣಗಿದ ನಂತರ ಆ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತವೆಯೇ ಎಂದು ನೋಡಬೇಕು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯಕ್ತಿಯ ಚರ್ಮದ ಮೇಲಿನ ತೇವಾಂಶದ ಮೇಲ್ಮೈ ಒತ್ತಡವನ್ನು ಕಡಿಮೆ ಮಾಡುವುದರಿಂದ ಆ ವ್ಯಕ್ತಿಯ ಮೇಲೆ ಲೋಹದ ವಸ್ತುಗಳು ಅಂಟಿಕೊಳ್ಳುವುದಿಲ್ಲ. ಒಂದು ವೇಳೆ ಅಂಟಿಕೊಳ್ಳುತ್ತದೆ ಎಂದು ಪ್ರತಿಪಾದಿಸುವವರು ಇದ್ದರೆ ನಮ್ಮ ಸವಾಲು ಸ್ವೀಕರಿಸಲು ಎಂದು ಅವರು ಘೋಷಿಸಿದ್ದಾರೆ.

ಸ್ಯಾನಿಟೈಸರ್ ಇಲ್ಲದಿದ್ದಲ್ಲಿ ಸೋಪ್ ದ್ರವದಿಂದ ಸಹ ಈ ಪರೀಕ್ಷೆ ಮಾಡಬಹುದು. ಸೋಪ್‌ ನೀರಿನಿಂದ ದೇಹವನ್ನು ತೊಳೆದ ನಂತರ ಚೆನ್ನಾಗಿ ಒಣಗಿದ ತಕ್ಷಣವೇ ಈ ಪರೀಕ್ಷೆ ಮಾಡಬೇಕು. ಯಾರಾದರೂ ಲೋಹದ ವಸ್ತುಗಳು ಅಂಟಿಕೊಳ್ಳುವುದನ್ನು ತೋರಿಸಿದರೆ ಅವರಿಗೆ 1 ಲಕ್ಷ ರೂಗಳ ಬಹುಮಾನ ನೀಡುತ್ತೇವೆ, ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಅವರು ತಮ್ಮ ಮೊಬೈಲ್ ಸಂಖ್ಯೆ (94482 16343) ನೀಡಿದ್ದಾರೆ.

ಜನ ಲಸಿಕೆ ತೆಗೆದುಕೊಳ್ಳದಂತೆ ಭಯ ಹುಟ್ಟಿಸುವ ಇಂತಹ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಪರವಾಗಿ ತಿಳಿಸಿದ್ದಾರೆ. ಈ ಕುರಿತು ಈ ಹಿಂದೆ ನಾನುಗೌರಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಲೇಖನ ಪ್ರಕಟಿಸಿದೆ. ಅದನ್ನು ಈ ಕೆಳಗೆ ಓದಬಹುದು.


ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...