Homeಮುಖಪುಟಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

ಲಸಿಕೆಯಿಂದ ದೇಹದಲ್ಲಿ ಅಯಸ್ಕಾಂತೀಯ ಗುಣ ಸಾಬೀತುಪಡಿಸಿದರೆ 1 ಲಕ್ಷ ಬಹುಮಾನ: ಪ್ರೊ.ನರೇಂದ್ರ ನಾಯಕ್ ಸವಾಲು

- Advertisement -
- Advertisement -

ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಗುಣ ಪಡೆದುಕೊಳ್ಳುತ್ತದೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಆದರೆ ಅದು ಸುಳ್ಳು ಎಂದಿರುವ ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟ ಅಧ್ಯಕ್ಷ ಪ್ರೊ. ನರೇಂದ್ರ ನಾಯಕ್ ನಾವು ಹೇಳಿದಂತೆ ಮೈಮೇಲೆ ಸ್ಯಾನಿಟೈಸರ್ ಮಾಡಿದ ಬಳಿಕ ದೇಹ ಮ್ಯಾಗ್ನೆಟಿಕ್ ಶಕ್ತಿ ಪಡೆದಿದೆಯೆಂದು ಮತ್ತು ಲೋಹಗಳು ಅದಕ್ಕೆ ಅಂಟಿಕೊಳ್ಳುತ್ತದೆ ಎಂದು ಸಾಬೀತುಪಡಿಸಿದವರಿಗೆ 1 ಲಕ್ಷ ರೂ ಬಹುಮಾನ ನೀಡುವುದಾಗಿ ಸವಾಲು ಹಾಕಿದ್ದಾರೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋ ವೈರಲ್ ಆದ ನಂತರ ಈ ಸುದ್ದಿ ಹಬ್ಬಿತ್ತು. ವ್ಯಕ್ತಿಯ ಚರ್ಮದ ಮೇಲಿನ ತೇವಾಂಶವು ಮೇಲ್ಮೈ ಒತ್ತಡದಿಂದ ವಸ್ತುಗಳು ಅಂಟಿಕೊಳ್ಳುವಂತೆ ಮಾಡುತ್ತದೆ. ಇದಕ್ಕೆ ಮ್ಯಾಗ್ನೆಟಿಸಮ್ ಎಂದು ಹೇಳಬಹುದು ಎಂದು ಅದರ ಹಿಂದಿನ ಕಾರಣವನ್ನು ನರೇಂದ್ರ ನಾಯಕ್ ವಿವರಿಸಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವುದರಿಂದ ಜನರು ಹಿಂಜರಿಯುವಂತೆ ಮಾಡಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಲಸಿಕೆ ಮೂಲಕ ಅಥವಾ ಬೇರೆ ಯಾವುದೇ ವಿಧಾನದಿಂದ ಕಾಂತೀಯತೆಯನ್ನು ಮಾನವ ದೇಹಕ್ಕೆ ಪ್ರಚೋದಸಲು ಸಾಧ್ಯವಿಲ್ಲ. ಹೀಗೆ ಪ್ರತಿಪಾದಿಸುವವರಿಗೆ ನಾವು 10 ಸೆಕೆಂಡ್‌ಗಳ ಪರೀಕ್ಷೆಯ ಸವಾಲು ಹಾಕುತ್ತೇವೆ. ದೇಹದಲ್ಲಿ ಅಯಸ್ಕಾಂತೀಯ ಶಕ್ತಿಯಿದೆ ಎಂದು ಹೇಳಿಕೊಳ್ಳುವ ವ್ಯಕ್ತಿಯ ದೇಹದ ಮೇಲೆ ಕರವಸ್ತ್ರದಿಂದ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಸರ್ ಹಾಕಿ ಅದು ಒಣಗಿದ ನಂತರ ಆ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತವೆಯೇ ಎಂದು ನೋಡಬೇಕು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯಕ್ತಿಯ ಚರ್ಮದ ಮೇಲಿನ ತೇವಾಂಶದ ಮೇಲ್ಮೈ ಒತ್ತಡವನ್ನು ಕಡಿಮೆ ಮಾಡುವುದರಿಂದ ಆ ವ್ಯಕ್ತಿಯ ಮೇಲೆ ಲೋಹದ ವಸ್ತುಗಳು ಅಂಟಿಕೊಳ್ಳುವುದಿಲ್ಲ. ಒಂದು ವೇಳೆ ಅಂಟಿಕೊಳ್ಳುತ್ತದೆ ಎಂದು ಪ್ರತಿಪಾದಿಸುವವರು ಇದ್ದರೆ ನಮ್ಮ ಸವಾಲು ಸ್ವೀಕರಿಸಲು ಎಂದು ಅವರು ಘೋಷಿಸಿದ್ದಾರೆ.

ಸ್ಯಾನಿಟೈಸರ್ ಇಲ್ಲದಿದ್ದಲ್ಲಿ ಸೋಪ್ ದ್ರವದಿಂದ ಸಹ ಈ ಪರೀಕ್ಷೆ ಮಾಡಬಹುದು. ಸೋಪ್‌ ನೀರಿನಿಂದ ದೇಹವನ್ನು ತೊಳೆದ ನಂತರ ಚೆನ್ನಾಗಿ ಒಣಗಿದ ತಕ್ಷಣವೇ ಈ ಪರೀಕ್ಷೆ ಮಾಡಬೇಕು. ಯಾರಾದರೂ ಲೋಹದ ವಸ್ತುಗಳು ಅಂಟಿಕೊಳ್ಳುವುದನ್ನು ತೋರಿಸಿದರೆ ಅವರಿಗೆ 1 ಲಕ್ಷ ರೂಗಳ ಬಹುಮಾನ ನೀಡುತ್ತೇವೆ, ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಅವರು ತಮ್ಮ ಮೊಬೈಲ್ ಸಂಖ್ಯೆ (94482 16343) ನೀಡಿದ್ದಾರೆ.

ಜನ ಲಸಿಕೆ ತೆಗೆದುಕೊಳ್ಳದಂತೆ ಭಯ ಹುಟ್ಟಿಸುವ ಇಂತಹ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಅವರು ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಪರವಾಗಿ ತಿಳಿಸಿದ್ದಾರೆ. ಈ ಕುರಿತು ಈ ಹಿಂದೆ ನಾನುಗೌರಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಲೇಖನ ಪ್ರಕಟಿಸಿದೆ. ಅದನ್ನು ಈ ಕೆಳಗೆ ಓದಬಹುದು.


ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...