Homeಮುಖಪುಟಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ...

ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ

- Advertisement -
- Advertisement -

ಒಂದು ದಶಕದ ಹಿಂದೆ ನಡೆದ ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕತ್ತಿಗೆ ಇರಿಯಲಾಗಿತ್ತು. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿರಲಿಲ್ಲ. ಘಟನೆ ನಡೆದು 10 ವರ್ಷಗಳಾಗುತ್ತಾ ಬಂದರೂ, ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಹಾಗಾಗಿ, ಹಂತಕರ ಸುಲಿವು ನೀಡುವವರಿಗೆ ಅಲ್ಲಿನ ಸರ್ಕಾರ ಬಹುಮಾನ ಘೋಷಿಸಿದೆ.

ಪ್ರಕರಣದ ತನಿಖೆಗಾಗಿ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿತ್ತು. ಅನೇಕ ಹಂತದಲ್ಲಿ ತನಿಖೆಯನ್ನೂ ನಡೆಸಲಾಗಿದೆ. ಹಂತಕರ ಪತ್ತೆಗಾಗಿ ಸಾರ್ವಜನಿಕರ ನೆರವನ್ನೂ ಕೋರಲಾಗಿದೆ. ಆದರೂ ಪ್ರಕರಣ ಬಗೆಹರಿಯದೆ ಉಳಿದಿದೆ. ಇದು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು, ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜೊತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ಭಾರತಕ್ಕೆ (ಬೆಂಗಳೂರಿಗೆ) ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜೊತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನವನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಸೆರೆ ಹಿಡಿದಿದ್ದವು. ಆದರೆ, ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

ಪ್ರಭಾ ಅವರ ಹತ್ಯೆ ಅಂತಾರಾಷ್ಟ್ರೀಯ ವಿಷಯವಾಗಿ ಮಾರ್ಪಟ್ಟಿದೆ. ಇದು ಜನಾಂಗೀಯ ದಾಳಿ ಎನ್ನುವುದನ್ನು ಈ ಹಿಂದೆ ತನಿಖಾಧಿಕಾರಿಗಳು ಅಲ್ಲಗಳೆದಿದ್ದರು. 2 ಸಾವಿರಕ್ಕೂ ಅಧಿಕ ಜನರನ್ನು ಪೊಲೀಸರು ಈವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಭಾ ಅವರ ಮೃತದೇಹವನ್ನು ಮಾರ್ಚ್ 14ರಂದು ಬೆಂಗಳೂರಿಗೆ ತರಲಾಗಿತ್ತು. ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಇದನ್ನೂ ಓದಿ : ಜೆರುಸಲೆಮ್‌: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...