Homeಮುಖಪುಟಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ...

ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ

- Advertisement -
- Advertisement -

ಒಂದು ದಶಕದ ಹಿಂದೆ ನಡೆದ ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕತ್ತಿಗೆ ಇರಿಯಲಾಗಿತ್ತು. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿರಲಿಲ್ಲ. ಘಟನೆ ನಡೆದು 10 ವರ್ಷಗಳಾಗುತ್ತಾ ಬಂದರೂ, ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಹಾಗಾಗಿ, ಹಂತಕರ ಸುಲಿವು ನೀಡುವವರಿಗೆ ಅಲ್ಲಿನ ಸರ್ಕಾರ ಬಹುಮಾನ ಘೋಷಿಸಿದೆ.

ಪ್ರಕರಣದ ತನಿಖೆಗಾಗಿ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿತ್ತು. ಅನೇಕ ಹಂತದಲ್ಲಿ ತನಿಖೆಯನ್ನೂ ನಡೆಸಲಾಗಿದೆ. ಹಂತಕರ ಪತ್ತೆಗಾಗಿ ಸಾರ್ವಜನಿಕರ ನೆರವನ್ನೂ ಕೋರಲಾಗಿದೆ. ಆದರೂ ಪ್ರಕರಣ ಬಗೆಹರಿಯದೆ ಉಳಿದಿದೆ. ಇದು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು, ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜೊತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ಭಾರತಕ್ಕೆ (ಬೆಂಗಳೂರಿಗೆ) ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜೊತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನವನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಸೆರೆ ಹಿಡಿದಿದ್ದವು. ಆದರೆ, ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

ಪ್ರಭಾ ಅವರ ಹತ್ಯೆ ಅಂತಾರಾಷ್ಟ್ರೀಯ ವಿಷಯವಾಗಿ ಮಾರ್ಪಟ್ಟಿದೆ. ಇದು ಜನಾಂಗೀಯ ದಾಳಿ ಎನ್ನುವುದನ್ನು ಈ ಹಿಂದೆ ತನಿಖಾಧಿಕಾರಿಗಳು ಅಲ್ಲಗಳೆದಿದ್ದರು. 2 ಸಾವಿರಕ್ಕೂ ಅಧಿಕ ಜನರನ್ನು ಪೊಲೀಸರು ಈವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಭಾ ಅವರ ಮೃತದೇಹವನ್ನು ಮಾರ್ಚ್ 14ರಂದು ಬೆಂಗಳೂರಿಗೆ ತರಲಾಗಿತ್ತು. ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಇದನ್ನೂ ಓದಿ : ಜೆರುಸಲೆಮ್‌: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...