Homeಮುಖಪುಟಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ...

ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ ಪ್ರಕರಣ : ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ

- Advertisement -
- Advertisement -

ಒಂದು ದಶಕದ ಹಿಂದೆ ನಡೆದ ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ಪ್ರಕರಣ ಬಗೆಹರಿಸಲು ಸಹಾಯ ಮಾಡುವ ವ್ಯಕ್ತಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಸರ್ಕಾರ ಘೋಷಣೆ ಮಾಡಿದೆ.

ಪ್ರಭಾ ಅರುಣ್ ಕುಮಾರ್ ಅವರನ್ನು 2015ರ ಮಾರ್ಚ್ 7ರಂದು ಸಿಡ್ನಿಯ ಪಶ್ಚಿಮದಲ್ಲಿನ ಪರಮಟ್ಟ ಪಾರ್ಕ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 41 ವರ್ಷದ ಪ್ರಭಾ ಅವರ ಕತ್ತಿಗೆ ಇರಿಯಲಾಗಿತ್ತು. ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿದಿರಲಿಲ್ಲ. ಘಟನೆ ನಡೆದು 10 ವರ್ಷಗಳಾಗುತ್ತಾ ಬಂದರೂ, ಈವರೆಗೂ ಹಂತಕರ ಸುಳಿವು ದೊರಕಿಲ್ಲ. ಹಾಗಾಗಿ, ಹಂತಕರ ಸುಲಿವು ನೀಡುವವರಿಗೆ ಅಲ್ಲಿನ ಸರ್ಕಾರ ಬಹುಮಾನ ಘೋಷಿಸಿದೆ.

ಪ್ರಕರಣದ ತನಿಖೆಗಾಗಿ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿತ್ತು. ಅನೇಕ ಹಂತದಲ್ಲಿ ತನಿಖೆಯನ್ನೂ ನಡೆಸಲಾಗಿದೆ. ಹಂತಕರ ಪತ್ತೆಗಾಗಿ ಸಾರ್ವಜನಿಕರ ನೆರವನ್ನೂ ಕೋರಲಾಗಿದೆ. ಆದರೂ ಪ್ರಕರಣ ಬಗೆಹರಿಯದೆ ಉಳಿದಿದೆ. ಇದು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ವರದಿಗಳು ಹೇಳಿವೆ.

ಬೆಂಗಳೂರಿನ ಮೈಂಡ್ ಟ್ರೀ ಕಂಪೆನಿಯ ಉದ್ಯೋಗಿಯಾಗಿದ್ದ ಪ್ರಭಾ ಅವರು, ಕರ್ತವ್ಯದ ನಿಯೋಜನೆ ಮೇರೆಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದ ಪತಿ ಅರುಣ್ ಕುಮಾರ್ ಜೊತೆ ಫೋನ್‌ನಲ್ಲಿ ಮಾತನಾಡುತ್ತಾ ತೆರಳುತ್ತಿದ್ದ ಅವರಿಗೆ ತಮ್ಮನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂಬ ಅನುಮಾನ ಮೂಡಿತ್ತು. ಅದನ್ನು ಪತಿ ಬಳಿ ಹೇಳಿದ್ದರು. ಅದೇ ವೇಳೆ ಅವರ ಮೇಲೆ ದಾಳಿ ನಡೆದಿತ್ತು. ಅವರು ವಾಸವಿದ್ದ ಸ್ಥಳದಿಂದ ಕೇವಲ 300 ಮೀಟರ್ ದೂರದಲ್ಲಿ ಈ ಹತ್ಯೆ ನಡೆದಿತ್ತು.

ಪತ್ನಿ ಶವವನ್ನು ಭಾರತಕ್ಕೆ (ಬೆಂಗಳೂರಿಗೆ) ತರುವ ಸಲುವಾಗಿ ಅರುಣ್ ಕುಮಾರ್ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ ಜೊತೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಹತ್ಯೆ ಮಾಡಿದ ವ್ಯಕ್ತಿ ಪ್ರಭಾ ಅವರಿಗೆ ಅಪರಿಚಿತನಾದರೂ, ಆಸ್ಟ್ರೇಲಿಯಾ ಅಥವಾ ಭಾರತದಲ್ಲಿರುವ ಅವರ ಪರಿಚಿತರೇ ಈ ಕೊಲೆ ಮಾಡಿಸಿರಬಹುದು ಎನ್ನುವುದು ಪೊಲೀಸರ ಅನುಮಾನವಾಗಿದೆ. ತನಿಖೆ ವೇಳೆ ಅನೇಕ ಪುರಾವೆಗಳು ದೊರಕಿದರೂ, ಹಂತಕರ ಬಂಧನಕ್ಕೆ ಅಗತ್ಯವಾದ ಪ್ರಬಲ ಸಾಕ್ಷ್ಯ ಅಥವಾ ಸುಳಿವು ಈವರೆಗೂ ಲಭ್ಯವಾಗಿಲ್ಲ.

ಪ್ರಭಾ ಅವರು ಮನೆ ಸಮೀಪದ ಉದ್ಯಾನವನದಲ್ಲಿ ನಡೆದುಕೊಂಡು ಬರುವುದನ್ನು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಸೆರೆ ಹಿಡಿದಿದ್ದವು. ಆದರೆ, ಅವರನ್ನು ಹಿಂಬಾಲಿಸುತ್ತಿದ್ದವರು ಯಾರು ಎನ್ನುವುದು ಈವರೆಗೂ ಸ್ಪಷ್ಟವಾಗಿಲ್ಲ. ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದರೂ ಪ್ರಯೋಜನವಾಗಿಲ್ಲ.

ಪ್ರಭಾ ಅವರ ಹತ್ಯೆ ಅಂತಾರಾಷ್ಟ್ರೀಯ ವಿಷಯವಾಗಿ ಮಾರ್ಪಟ್ಟಿದೆ. ಇದು ಜನಾಂಗೀಯ ದಾಳಿ ಎನ್ನುವುದನ್ನು ಈ ಹಿಂದೆ ತನಿಖಾಧಿಕಾರಿಗಳು ಅಲ್ಲಗಳೆದಿದ್ದರು. 2 ಸಾವಿರಕ್ಕೂ ಅಧಿಕ ಜನರನ್ನು ಪೊಲೀಸರು ಈವರೆಗೂ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಭಾ ಅವರ ಮೃತದೇಹವನ್ನು ಮಾರ್ಚ್ 14ರಂದು ಬೆಂಗಳೂರಿಗೆ ತರಲಾಗಿತ್ತು. ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಇದನ್ನೂ ಓದಿ : ಜೆರುಸಲೆಮ್‌: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...