Homeಮುಖಪುಟಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

ಸೆಪ್ಟೆಂಬರ್‌ 27 ರಂದು ‘ಭಾರತ ಬಂದ್‌’ ಕರೆ ನೀಡಿದ ರೈತ ಒಕ್ಕೂಟ; ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ, ರೈತರು ಪ್ರಾರಂಭಿಸುವ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ. ಈ ಹಿನ್ನಲೆಯಲ್ಲಿ ರೈತ ಹೋರಾಟದ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆಪ್ಟೆಂಬರ್ 27 ಕ್ಕೆ ‘ಭಾರತ ಬಂದ್‌’ಗೆ ಕರೆ ನೀಡಿದೆ. ಇದಕ್ಕಾಗಿ ಒಕ್ಕೂಟವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್‌ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.

“ಎಸ್‌ಕೆಎಂ ಎಲ್ಲಾ ಸಂಘಟನೆಗಳಿಗೆ ರೈತರೊಂದಿಗೆ ಕೈಜೋಡಿಸುವಂತೆ ಕೇಳಿಕೊಂಡಿದೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುಂಚಿತವಾಗಿಯೆ ‘ಭಾರತ ಬಂದ್‌’ ಅನ್ನು ಪ್ರಚಾರ ಮಾಡುವಂತೆ ಮನವಿ ಮಾಡಿದೆ. ಬಂದ್ ಶಾಂತಿಯುತವಾಗಿರುತ್ತದೆ ಹಾಗೂ ಸ್ವಯಂಪ್ರೇರಿತವಾಗಿರುತ್ತದೆ. ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಯಲಹಂಕ – ತಮ್ಮ ‘ನೆಲದ ಹಕ್ಕು’ಗಳಿಗಾಗಿ ಬಿಡಿಎ ವಿರುದ್ದ 17 ಹಳ್ಳಿಗಳ ರೈತರಿಂದ ಬೃಹತ್ ಪ್ರತಿಭಟನೆ

“ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್‌ ಆಗಲಿದೆ. ಬಂದ್‌‌ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಎಸ್‌ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕೂಡಾ ಬಂದ್‌ ಆಗಲಿದೆ ಎಂದು ಎಸ್‌ಕೆಎಂ ಹೇಳಿದ್ದು, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ಸೇವೆಗಳು ಸೇರಿದಂತೆ ತುರ್ತು ಸೇವೆಗಳು ಮಾತ್ರ ಬಂದ್ ಸಮಯದಲ್ಲಿ ಕಾರ್ಯನಿರ್ವಸಲಿದೆ ಎಂದು ಅದು ತಿಳಿಸಿದೆ.

ಬಂದ್‌ಗೆ ಸಂಬಂಧಿಸಿದಂತೆ ಮುಂದಿನ ಯೋಜನೆಗಾಗಿ ಸೆಪ್ಟೆಂಬರ್ 20 ರಂದು ಮುಂಬೈನಲ್ಲಿ “ರಾಜ್ಯ ಮಟ್ಟದ ಪೂರ್ವಸಿದ್ಧತಾ ಸಭೆ” ನಡೆಯಲಿದೆ ಎಂದು ಎಸ್‌ಕೆಎಂ ಹೇಳಿದೆ.

ಅದೇ ದಿನ ಉತ್ತರ ಪ್ರದೇಶದ ಸೀತಾಪುರದಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ ಆಯೋಜಿಸಲಾಗುವುದು ಮತ್ತು ಅದರ ನಂತರ ಸೆಪ್ಟೆಂಬರ್ 22 ರಂದು ಉತ್ತರಾಖಂಡದ ರೂರ್ಕಿಯಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಯಲಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು ನಿಜವೇ..?

ಪ್ರತಿಭಟನಾ ನಿರತ ರೈತರು ಸೆಪ್ಟೆಂಬರ್ 22 ರಿಂದ ಟಿಕ್ರಿ ಮತ್ತು ಸಿಂಘು ಗಡಿಯ ಪ್ರತಿಭಟನಾ ಸ್ಥಳಗಳಲ್ಲಿ ಐದು ದಿನಗಳ ಕಬಡ್ಡಿ ಲೀಗ್ ಅನ್ನು ಆಯೋಜಿಸಲಿದೆ. ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಲು ಸೇರಿದಂತೆ ದೇಶದ ಇತರ ಭಾಗಗಳಲ್ಲೂ ಹೋರಾಟ ಮಾಡುತ್ತಿದ್ದಾರೆ.

ರೈತರು ಒಕ್ಕೂಟ ಸರ್ಕಾರದೊಂದಿಗೆ 10 ಕ್ಕೂ ಹೆಚ್ಚು ಬಾರಿ ಮಾತುಕತೆ ನಡೆದಿದ್ದು, ಯಾವುದು ಸಫಲವಾಗಿಲ್ಲ. ಕೃಷಿ ಕಾನೂನನ್ನು ಸರ್ಕಾರ ಹಿಂಪಡೆಯುವವರೆಗೂ ಹೋರಾಟ ವಾಪಾಸು ಪಡೆಯುವುದಿಲ್ಲ ಎಂದು ರೈತ ಸಂಘಟನೆಗಳು ಹೇಳಿವೆ.

ಇದನ್ನೂ ಓದಿ: ಕರ್ನಾಲ್ ರೈತ ಹೋರಾಟಕ್ಕೆ ಜಯ: ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಒಪ್ಪಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...