Homeಮುಖಪುಟಸಿದ್ದೀಕ್ ಕಪ್ಪನ್ ಬಂಧನಕ್ಕೆ 1 ವರ್ಷ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಕಚೇರಿ ಹೊರಗೆ ಪತ್ರಕರ್ತರ...

ಸಿದ್ದೀಕ್ ಕಪ್ಪನ್ ಬಂಧನಕ್ಕೆ 1 ವರ್ಷ: ಪ್ರೆಸ್ ಕ್ಲಬ್ ಆಫ್ ಇಂಡಿಯಾ ಕಚೇರಿ ಹೊರಗೆ ಪತ್ರಕರ್ತರ ಪ್ರತಿಭಟನೆ

- Advertisement -
- Advertisement -

ಕಳೆದ ವರ್ಷ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ ನಡೆದಿತ್ತು. ಈ ಘಟನೆಯನ್ನು ವರದಿ ಮಾಡಲು ತೆರಳುತ್ತಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರ ಬಂಧನವಾಗಿತ್ತು. ಅವರನ್ನು ಬಂಧಿಸಿ ಇದೀಗ ವರ್ಷ ತುಂಬಿದೆ. ಈ ಬಂಧನವನ್ನು ವಿರೋಧಿಸಿ ಮಂಗಳವಾರಂದು ಹಲವಾರು ಸಂಘಟನೆಗಳ ಪತ್ರಕರ್ತರು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

19 ವರ್ಷದ ದಲಿತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ನಡೆದಿದ್ದಲ್ಲದೆ, ಆರೋಪಿಗಳ ಪರವಾಗಿ ಸರ್ಕಾರ ನಿಂತಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣದ ವರದಿಗಾಗಿ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದ ಸಿದ್ದೀಕ್ ಕಪ್ಪನ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಅವರು ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ಸಿದ್ದೀಕ್ ಕಪ್ಪನ್ ಮುಸ್ಲಿಮರನ್ನು ಸಂತ್ರಸ್ತ್ರರಂತೆ ಚಿತ್ರಿಸಿ, ಪ್ರಚೋದಿಸುತ್ತಿದ್ದರು: ಅವರ ಲೇಖನಗಳೆ ಚಾರ್ಜ್‌ಶೀಟ್‌ಗೆ ಆಧಾರ!

“ಕಪ್ಪನ್‌ ಅವರು ಜವಾಬ್ದಾರಿಯುತ ಪತ್ರಕರ್ತನಂತೆ ಬರೆಯುತ್ತಿರಲಿಲ್ಲ. ಮುಸ್ಲಿಮರನ್ನು ಪ್ರಚೋದಿಸಲು ಮತ್ತು ಮಾವೋವಾದಿಗಳು ಹಾಗೂ ಕಮ್ಯುನಿಸ್ಟರ ಬಗ್ಗೆ ಸಹಾನುಭೂತಿ ಹೊಂದುವ ಹಾಗೆ ಬರೆಯುತ್ತಿದ್ದರು” ಎಂದು ಪ್ರಕರಣದಲ್ಲಿ ಸಲ್ಲಿಸಲಾಗಿರುವ ಆರೋಪಪಟ್ಟಿ ಹೇಳುತ್ತದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಕಪ್ಪನ್ ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಸಂಬಂಧ ಹೊಂದಿದೆಯೆಂದು ಸೂಚಿಸಿದೆ. ಆದರೆ ಈ ಆರೋಪವನ್ನು ಕೇರಳದ ಪತ್ರಕರ್ತರ ಸಂಘಗಳು ಸ್ಪಷ್ಟವಾಗಿ ನಿರಾಕರಿಸಿವೆ.

ಅವರಿಗೆ ಪಿಎಫ್‌ಐ ಜೊತೆ ಸಂಬಂಧವಿದೆ ಎಂಬ ಆರೋಪವು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ಮಾಡಲಾಗಿದೆ ಪ್ರತಿಭಟನಾಕಾರ ಪತ್ರಕರ್ತರು ಹೇಳಿದ್ದಾರೆ. ಕಪ್ಪನ್‌ ಮೇಲಿನ ಪ್ರಕರಣಗಳನ್ನು ರದ್ದುಗೊಳಿಸಿ, ಅವರನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ನಡುವೆ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದೀಕ್ ಕಪ್ಪನ್ ಅವರನ್ನು ಯುಪಿ ಸರ್ಕಾರದ ಅಧಿಕಾರಿಗಳು ಮೇ 6 ರಂದು ಬಲವ೦ತವಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿದ್ದರು ಎ೦ದು ಆರೋಪಿಸಿದೆ. ಇದನ್ನು ವಿರೋಧಿಸಿ ಕೇರಳದ ಪತ್ರಕರ್ತರ ಒಕ್ಕೂಟವು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾ೦ಗ ನಿ೦ದನೆ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ: PFI ಸಂಬಂಧ ಆರೋಪ; ಹತ್ರಾಸ್‌ಗೆ ಹೊರಟ ಕೇರಳದ ಪತ್ರಕರ್ತ ಸೇರಿ ಮೂವರ ಬಂಧನ

ಇದನ್ನೂ ಓದಿ: ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ 1 ವರ್ಷ – ಸಂಪೂರ್ಣ ವಿವರ

ಇದನ್ನೂ ಓದಿ: ಹತ್ರಾಸ್‌: ಬಂಧಿತ ಪತ್ರಕರ್ತನ ಮೇಲೆ “ಭಯೋತ್ಪಾದನೆ ನಿಗ್ರಹ” ಕಾನೂನಿನಡಿಯಲ್ಲಿ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....