Homeಮುಖಪುಟಪರಸ್ಪರ ಒಪ್ಪಿಗೆಯ ವಿಚ್ಛೇದನಕ್ಕೆ ಒಂದು ವರ್ಷ ಕಾಯಬೇಕು ಎಂಬುದು ಅಸಾಂವಿಧಾನಿಕ: ಕೇರಳ ಹೈಕೋರ್ಟ್

ಪರಸ್ಪರ ಒಪ್ಪಿಗೆಯ ವಿಚ್ಛೇದನಕ್ಕೆ ಒಂದು ವರ್ಷ ಕಾಯಬೇಕು ಎಂಬುದು ಅಸಾಂವಿಧಾನಿಕ: ಕೇರಳ ಹೈಕೋರ್ಟ್

- Advertisement -
- Advertisement -

ಭಾರತೀಯ ಕ್ರಿಶ್ಚಿಯನ್ ವಿಚ್ಛೇದನ ಕಾಯಿದೆಯ ಸೆಕ್ಷನ್ 10A ಅಡಿಯಲ್ಲಿ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನ ಅರ್ಜಿಯನ್ನು ಸಲ್ಲಿಸುವ ಉದ್ದೇಶಕ್ಕಾಗಿ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿ ಕಾಯಬೇಕು ಎಂಬ ನಿಯಮವು ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಅಸಾಂವಿಧಾನಿಕ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಎ. ಮುಹಮ್ಮದ್ ಮುಸ್ತಕ್ ಮತ್ತು ನ್ಯಾಯಮೂರ್ತಿ ಶೋಬಾ ಅನ್ನಮ್ಮ ಈಪೆನ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಭಾರತೀಯ ವಿಚ್ಛೇದನ ಕಾಯಿದೆಯ ಸೆಕ್ಷನ್ 10A ಅನ್ನು ರದ್ದುಪಡಿಸಬೇಕೆಂದು ಆದೇಶಿಸಿದೆ.

31.10.2021 ರಂದು ಕ್ರಿಶ್ಚಿಯನ್ ವಿಧಿ ಮತ್ತು ವಿಧಿವಿಧಾನಗಳ ಪ್ರಕಾರ ಮದುವೆಯಾದ ದಂಪತಿಗಳು ತಮ್ಮಲ್ಲಿ ಹೊಂದಾಣಿಕೆ ಬಾರದ ಕಾರಣ ಪರಸ್ಪರ ಒಪ್ಪಿತ ವಿಚ್ಛೇದನಕ್ಕಾಗಿ ಎರ್ನಾಕುಲಂನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ 1869 ರ ವಿಚ್ಛೇದನ ಕಾಯಿದೆಯ ಸೆಕ್ಷನ್ 10A ಅಡಿಯಲ್ಲಿ ವಿವಾಹದ ನಂತರ ದಂಪತಿಗಳು ಸಮ್ಮತಿಯ ವಿಚ್ಛೇದನ ಬೇಕೆಂದು ಬಯಸಿದರೆ, ಅಂದಿನಿಂದ ಕನಿಷ್ಟ ಒಂದು ವರ್ಷದ ನಂತರ ಮಾತ್ರ ಅರ್ಜಿ ಸಲ್ಲಿಸಬಹುದೆಂಬ ‍ಷರತ್ತಿನಿಂದ ಅವರ ಅರ್ಜಿಯನ್ನು ಪುರಸ್ಕರಿಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಕಕ್ಷಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕಾಯಿದೆಯ ಸೆಕ್ಷನ್ 10A(1) ಅಡಿಯಲ್ಲಿ ನಿಗದಿಪಡಿಸಿದ ಒಂದು ವರ್ಷದ ಅವಧಿ ಅಸಂವಿಧಾನಿಕ ಎಂದು ರಿಟ್ ಅರ್ಜಿಯನ್ನೂ ಸಲ್ಲಿಸಿದ್ದರು.

ಈ ಕುರಿತು ಕೂಲಂಕುಷವಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಒಂದೊಂದು ಧರ್ಮದ ವಿಚ್ಛೇದನ ಕಾನೂನುಗಳಲ್ಲಿ ಒಂದೊಂದು ರೀತಿಯ ನಿಬಂಧನೆ ಇದೆ. ಆದರೆ ಅವರಿಬ್ಬರು ಒಟ್ಟಿಗೆ ಬದುಕಲು ಸಾಧ್ಯವಿರದಿದ್ದ ಮೇಲೆ ಏಕೆ ಕಾಯಬೇಕು? ಹಾಗಾಗಿ ಈ ನಿಬಂಧನೆಯನ್ನು ತೆಗೆದುಹಾಕಬೇಕೆಂದು ಆದೇಶಿಸಿ ಎರಡು ವಾರಗಳಲ್ಲಿ ಅವರ ಅರ್ಜಿ ವಿಲೇವಾರಿ ಮಾಡಲು ಸೂಚಿಸಿದೆ.

ಪೂರ್ಣ ವರದಿಯನ್ನು ಇಲ್ಲಿ ಓದಿ

ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...