Homeಅಂಕಣಗಳು10% ಮೀಸಲಾತಿಯ ಹೆಸರಲ್ಲಿ  ಮೇಲ್ಜಾತಿ ಬಡವರಿಗೆ ಮೋದಿ ಮೋಸ

10% ಮೀಸಲಾತಿಯ ಹೆಸರಲ್ಲಿ  ಮೇಲ್ಜಾತಿ ಬಡವರಿಗೆ ಮೋದಿ ಮೋಸ

- Advertisement -
‘ಮೇಲ್ಜಾತಿಯ ಬಡವರಿಗೆ 10% ಮೀಸಲಾತಿ’ ಎಂಬ ಹೆಡ್‍ಲೈನ್ ಇಂದು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಮೀಸಲಾತಿಯ ವಿಚಾರದ ಒಳಹೊಕ್ಕು ನೋಡಿದರೆ ಇದು ವಾಸ್ತವದಲ್ಲಿ ಮೇಲ್ಜಾತಿಯ ಬಡವರಿಗೆ ಮಾಡುತ್ತಿರುವ ಮೋಸ ಎಂಬುದು ಸ್ಪಷ್ಟವಾಗಿ ಅರಿವಾಗುತ್ತದೆ. ಕಾನೂನಿನ ಮತ್ತು ಸಂವಿಧಾನದ ಪರೀಕ್ಷೆಯಲ್ಲಿ ಇದು ತೇರ್ಗಡೆ ಹೊಂದುವುದಿಲ್ಲವೆಂಬುದಷ್ಟೇ ಇದಕ್ಕೆ ಕಾರಣವಲ್ಲ. ನಿಜಕ್ಕೂ ಇದರಿಂದ ಮೇಲ್ಜಾತಿ ಬಡವರಿಗೆ ಹಲವು ರೀತಿಯ ಅನ್ಯಾಯಗಳಾಗಲಿವೆ.
ಸರ್ಕಾರದ ಅಥವಾ ಸಮಾಜದಲ್ಲಿ ಲಭ್ಯವಾಗುವ ಯಾವುದೇ ಸೌಲಭ್ಯಗಳನ್ನು ಮೊದಲು ಪಡೆದುಕೊಳ್ಳಲು ಶಕ್ತವಾಗುವುದು ಯಾರಿಗೆ? ಬಲಾಢ್ಯರಿಗೆ. ಇದು ಮೀಸಲಾತಿಗೂ ಅನ್ವಯವಾಗುತ್ತದೆ. ಇಂದು ಶೋಷಿತ ಜಾತಿಗಳಿಗೆ ನೀಡಲಾಗುತ್ತಿರುವ ಮೀಸಲಾತಿಗೂ ಇದೇ ವಾಸ್ತವವೇ? ಹೌದು, ಇದೇ ವಾಸ್ತವ. ಅಸಮಾನವಾದ, ಅಪ್ರಜಾತಾಂತ್ರಿಕವಾದ ಸಾಮಾಜಿಕ ವ್ಯವಸ್ಥೆಯಲ್ಲಿ ಇದು ಸಹಜ. ಆದರೂ, ಅದು ಆಯಾ ಜಾತಿಗಳಿಗೇ ಸಿಗುತ್ತದೆ ಮತ್ತು ಆ ಜಾತಿಯಲ್ಲಿ ಹುಟ್ಟಿದ ಕಾರಣಕ್ಕೆ ತಾರತಮ್ಯ, ಶೋಷಣೆ, ದಬ್ಬಾಳಿಕೆಯನ್ನು ಯಾವುದೋ ಪ್ರಮಾಣಕ್ಕೆ ಅನುಭವಿಸಿರುವ ಅವರು ಅದಕ್ಕೆ ಅಷ್ಟರಮಟ್ಟಿಗೆ ಅರ್ಹರಿರುತ್ತಾರೆ. ಆದರೆ ಬಡವರು ಎನ್ನುವ ವ್ಯಾಖ್ಯಾನವನ್ನು ಮಾಡುವುದರಲ್ಲೇ ಹಲವು ಸಮಸ್ಯೆಗಳಿರುತ್ತವೆ. ಅಂಥದ್ದರಲ್ಲಿ ಅಧಿಕೃತವಾಗಿಯೇ ತಿಂಗಳಿಗೆ 66.66 ಸಾವಿರ ಸಂಪಾದನೆಯಿರುವವರೆಲ್ಲರಿಗೂ ಇದು ಅನ್ವಯಿಸುತ್ತದೆ ಎಂದಮೇಲೆ ಕೇಳಬೇಕೇ? ಇದು ಹೆಚ್ಚಿನ ಮುಖಬೆಲೆಯ ನೋಟುಗಳಿದ್ದರೆ ಹೆಚ್ಚೆಚ್ಚು ಕಪ್ಪುಹಣ ಸಂಗ್ರಹಣೆ ಸಾಧ್ಯವೆಂದು 500 ರೂ. 1000 ರೂ.ಗಳ ನೋಟುಗಳನ್ನು ನಿಷೇಧಿಸಿ 2000 ರೂ.ಗಳ ನೋಟು ತಂದ ರೀತಿಯದ್ದು. ಅಂದರೆ ಈಗಾಗಲೇ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದ ‘ಮೇಲ್ಜಾತಿಗಳ ಬಡವರು’ ಈಗ ಈ ಶೇ.10ರಿಂದಲೂ ವಂಚಿತರಾಗುತ್ತಾರೆ.
ಮೀಸಲಾತಿಯೇ ಸಿಗದ ಜನರಲ್ ಕೆಟಗರಿಯವರಿಗೆ ಮಾತ್ರ ಈ ಶೇ.10 ಮೀಸಲಾತಿ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಅಂಥವರು ಎಷ್ಟಿರಬಹುದು? ಶೇ.10 ಮಾತ್ರ. ಏಕೆಂದರೆ, ಗ್ರಾಮೀಣ ಒಕ್ಕಲಿಗರು ಮತ್ತು ಲಿಂಗಾಯಿತ ಉಪಪಂಗಡಗಳಿಗೂ ಕಡಿಮೆ ಆದಾಯದ ಕುಟುಂಬಗಳಿಗೆ ಮೀಸಲಾತಿ ‘3 ಎ’ಯಲ್ಲಿ ಲಭ್ಯವಿದೆ. ಅಂದರೆ, ಒಕ್ಕಲಿಗರಲ್ಲಿ ಬಹುತೇಕರು ಮತ್ತು ಲಿಂಗಾಯಿತರಲ್ಲೂ ಗಣನೀಯ ಭಾಗ ಹೊಸ ಮೀಸಲಾತಿ (ಜಾರಿಗೆ ಬಂದರೆ)ಯಿಂದ ಹೊರಗೇ ಉಳಿಯುತ್ತಾರೆ. ಇದರರ್ಥ, ತಮ್ಮ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಪಡೆದುಕೊಳ್ಳಲಾಗದ ಹಿಂದುಳಿದ ವರ್ಗಗಳಿಗಿಂತ ಜನಸಂಖ್ಯೆಗನುಗುಣವಾದ ಮೀಸಲಾತಿಯನ್ನು ಈ ಶೇ.10ರಷ್ಟು ಸಮುದಾಯಗಳು ಪಡೆದುಕೊಳ್ಳುತ್ತಾರೆ.
ಮೇಲ್ಜಾತಿಗಳ ಬಡವರು ವಾಸ್ತವದಲ್ಲಿ ಕ್ರುದ್ಧರಾಗಿದ್ದಾರೆ. ಶೋಷಿತ ಜಾತಿಗಳ ಬಡವರೂ ಸಂಕಷ್ಟದಲ್ಲಿದ್ದಾರೆ. ಏಕೆಂದರೆ, ದೇಶದಲ್ಲಿ ಸಿಗುತ್ತಿರುವ ಉದ್ಯೋಗಾವಕಾಶಗಳು, ಶಿಕ್ಷಣಾವಕಾಶಗಳು ಕಡಿಮೆಯಾಗುತ್ತಿವೆ. ವಿವಿಧ ರೀತಿಯ ಸಾರ್ವಜನಿಕ ಸಂಪನ್ಮೂಲಗಳು ಹೆಚ್ಚೆಚ್ಚು ಶ್ರೀಮಂತರ ಪಾಲಾಗುತ್ತಿವೆ. ಹಾಗಾಗಿ ಶೋಷಿತ ಜಾತಿಗಳ ಬಡವರು ತಮ್ಮನ್ನೇ ಹಳಿದುಕೊಳ್ಳುತ್ತಾರೆ ಅಥವಾ ಇಡೀ ವ್ಯವಸ್ಥೆಯನ್ನೇ ಬೈದುಕೊಳ್ಳುತ್ತಾರೆ ಅಥವಾ ಎಲ್ಲಾ ಜಾತಿಗಳಲ್ಲಿನ ಬಲಾಢ್ಯರು ಅದನ್ನು ಕಬಳಿಸಿದ್ದಾರೆಂದು ಅಸಹನೆ ಮಾಡಿಕೊಳ್ಳಬಹುದು. ಆದರೆ, ಮೇಲ್ಜಾತಿಗಳ ಬಡವರಿಗೆ ಇದೆಲ್ಲಕ್ಕೂ ಶೋಷಿತ ಜಾತಿಗಳವರೇ ಕಾರಣವೆಂದು ನಂಬಿಸುವ ಪ್ರಯತ್ನ ನಡೆಯುತ್ತಿದೆ.
ಉದಾಹರಣೆಗೆ ಕೆಲವು ವರ್ಷಗಳ ಹಿಂದೆ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಬಿ ಮತ್ತು ಸಿ ವೃಂದದ 2,500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅದಕ್ಕೆ 18,60,000 ಜನರು ಅರ್ಜಿ ಹಾಕಿದರು. ಒಂದು ವೇಳೆ ಒಬ್ಬರಿಗೂ ಮೀಸಲಾತಿ ಸಿಗದೇ ಇದ್ದರೂ, 18,57,500 ಜನರಿಗೆ ಆ ಉದ್ಯೋಗ ಸಿಗುತ್ತಿರಲಿಲ್ಲ. ಆದರೆ, ಈ ದೊಡ್ಡ ಸಮೂಹದಲ್ಲಿನ ಮೀಸಲಾತಿ ರಹಿತ ಸಮುದಾಯಗಳು (ಕರ್ನಾಟಕದಲ್ಲಿ ಬಹುತೇಕರಿಗೆ ಒಂದಲ್ಲಾ ಒಂದು ರೀತಿಯ ಮೀಸಲಾತಿಯಿದ್ದರೂ, 3 ಎ ಯಲ್ಲಿ ಇರುವ ಪಂಗಡಗಳೂ ಸೇರಿದಂತೆ ಕೆಲವರು ತಮ್ಮನ್ನು ಈ ಗುಂಪಿನ ಜೊತೆಗೆ ಗುರುತಿಸಿಕೊಳ್ಳುತ್ತಾರೆ) ಅದಕ್ಕಾಗಿ ಮೀಸಲಾತಿ ಪಡೆಯುವ ಜಾತಿಗಳನ್ನು, ಅದರಲ್ಲೂ ಪರಿಶಿಷ್ಟ ಜಾತಿ/ಪಂಗಡದ ಸಮುದಾಯದವರನ್ನು ಬೈದುಕೊಳ್ಳುತ್ತಾರೆ. ಹಾಗೆ ನೋಡಿದರೆ, ಆ ಜಾತಿಗಳ ಲಕ್ಷ ಲಕ್ಷ ಅಭ್ಯರ್ಥಿಗಳಿಗೂ ಆ ಉದ್ಯೋಗ ಸಿಕ್ಕಿರುವುದಿಲ್ಲ!
ಹಾಗಾಗಿ ಮೀಸಲಾತಿಯೆಂಬುದು ಶೋಷಿತ ಸಮುದಾಯಗಳಿಗೆ ದಕ್ಕಿಸಿಕೊಟ್ಟಿರುವುದು ಬಹಳ ಕಡಿಮೆಯೇ ಆದರೂ, ಅಸಹನೆಯನ್ನಂತೂ ಹೆಚ್ಚೆಚ್ಚು ಅನುಭವಿಸಬೇಕಿದೆ. ಈ ಅಸಹನೆಯು ತನ್ನಂತೆ ತಾನೇ ಬಂದಿತೆನ್ನುವುದಕ್ಕಿಂತ, ಇದನ್ನು ವ್ಯವಸ್ಥಿತವಾಗಿ ಬೆಳೆಸಲಾಗುತ್ತಿದೆ. ಆ ಕೆಲಸ ಮಾಡಿದವರಲ್ಲಿ ಇಂದು 10% ಮೀಸಲಾತಿಯನ್ನು ತರಲು ಹೊರಟಿರುವವರದ್ದು ಪ್ರಧಾನ ಪಾಲಿದೆ. ಸಂವಿಧಾನ ತಿದ್ದುಪಡಿ ಮಾಡದೇ ತರಲು ಸಾಧ್ಯವಿರದ, ಸಂವಿಧಾನ ತಿದ್ದುಪಡಿ ಮಾಡಲು ಬೇಕಾದಷ್ಟು ಬಹುಮತ ಹೊಂದಿರದೇ ಪ್ರಸ್ತಾಪಿಸಲಾಗುತ್ತಿರುವ ಇದರ ಹಿಂದೆ ಚುನಾವಣೆಗೆ ಮುಂಚೆ ಒಂದಷ್ಟು ಧ್ರುವೀಕರಣವನ್ನು ತರುವ, ಸಮುದಾಯಗಳ ಮಧ್ಯೆ ಒಡಕುಂಟುಮಾಡಲು ಯತ್ನಿಸುವ ಉದ್ದೇಶದ ಬಗ್ಗೆ ಯಾರಿಗೂ ಅನುಮಾನವಿಲ್ಲ.
ಆದರೆ, ಇದರಲ್ಲಿ ಮೇಲ್ಜಾತಿ ಬಡವರ ವಿರುದ್ಧದ ಹುನ್ನಾರವೇನು? ಮೇಲೆ ಹೇಳಿರುವ ಕಾರಣವಲ್ಲದೇ ಇನ್ನೊಂದು ಮುಖ್ಯ ಕಾರಣವಿದೆ. ಎಲ್ಲಾ ಬಡವರಿಗೂ ದಕ್ಕಲೇಬೇಕಾದ ಶಿಕ್ಷಣ, ಆರೋಗ್ಯ, ವಸತಿ ಇತ್ಯಾದಿ ಮೂಲಭೂತ ಅಗತ್ಯಗಳನ್ನು ಕಲ್ಪಿಸಲು ಒದಗಿಸಬೇಕಾದ ಅನುದಾನವನ್ನು ಸರ್ಕಾರಗಳು ಕಡಿಮೆ ಮಾಡುತ್ತಲಿವೆ. ಆ ವಿಚಾರದಲ್ಲಿ ಮೋದಿ ಸರ್ಕಾರವು ಮಿಕ್ಕೆಲ್ಲರಿಗಿಂತ ಒಂದು ಕೈ ಹೆಚ್ಚು ಜನವಿರೋಧಿಯಾಗಿದೆ. ದುಡಿಯುತ್ತಿರುವ ಸಮುದಾಯಗಳಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ, ಉದ್ಯೋಗ ಭದ್ರತೆ ಕಲ್ಪಿಸುವ ವಿಚಾರದಲ್ಲೂ ಈ ಸರ್ಕಾರವು ಜನವಿರೋಧಿಯೇ ಆಗಿದೆ. ರೈತರ ವಿಚಾರದಲ್ಲಂತೂ ಕೇಂದ್ರ ಸರ್ಕಾರವು ಬಹಳ ಕಟುವಾಗಿ ವರ್ತಿಸಿದೆ. ಇವೆಲ್ಲವನ್ನೂ ಸರಿಯಾಗಿ ಮಾಡಿದ್ದೇ ಆಗಿದ್ದಲ್ಲಿ ಮತ್ತು ಉದ್ಯೋಗ ಸೃಷ್ಟಿಗೆ ಬೇಕಾದ ಕ್ರಮಗಳನ್ನು ಕೈಗೊಂಡಿದ್ದಲ್ಲಿ ಮೇಲ್ಜಾತಿಗಳ ಬಡವರಿಗೆ ಬದುಕು ಕಟ್ಟಿಕೊಳ್ಳುವ ಅವಕಾಶಗಳು ಹೆಚ್ಚಾಗುತ್ತಿದ್ದವು.
ಅದನ್ನು ಮಾಡದ ಸರ್ಕಾರ ಏನು ಮಾಡಬೇಕು? ಜನರ ಗಮನವನ್ನು ಬೇರೆಡೆಗೆ ತಿರುಗಿಸಬೇಕು. ಹುಸಿ ಶತ್ರುಗಳನ್ನು ಸೃಷ್ಟಿಸಿ ಮಿಕ್ಕವರನ್ನು ಎತ್ತಿಕಟ್ಟಬೇಕು. ಈಗ ಅದನ್ನೇ ಮಾಡಲು ಹೊರಟಿದೆ. ಬಹುಶಃ ಇದು ಇಲ್ಲಿಗೇ ನಿಲ್ಲುವುದಿಲ್ಲ. ಜನರನ್ನು ಒಡೆಯಲು, ಪರಸ್ಪರ ಎತ್ತಿಕಟ್ಟಲು ಒಂದಾದ ನಂತರ ಒಂದು ಕ್ರಮಗಳು ಕೇಂದ್ರವನ್ನು ಆಳುತ್ತಿರುವ ಪಕ್ಷ ಮತ್ತು ಅದರ ಪರಿವಾರದಿಂದ ಬರುತ್ತಲೇ ಇರುತ್ತವೆ. ಚುನಾವಣೆಗೆ ಮೊದಲು ಮತ್ತು ನಂತರ ಹರಿದುಬರುವ ಈ ಕುತ್ಸಿತ ಹುನ್ನಾರಗಳನ್ನು ಎದುರಿಸಲು ಬೇಕಾದ ತಯಾರಿಯನ್ನು ದೇಶದ ಪ್ರಜ್ಞಾವಂತ ಜನರು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...