Homeಮುಖಪುಟ10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

- Advertisement -
- Advertisement -

ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸೋನಿ ಸೋರಿ ಅವರ ವಿರುದ್ಧ 2011 ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣವನ್ನು ದಾಂತೇವಾಡ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸೋನಿ ಮತ್ತು ಇತರ ಮೂವರ ಮೇಲೆ ಮಾವೋವಾದಿಗಳಿಗೆ ಹಣ ಸರಬರಾಜು ಮಾಡಿದ ಆರೋಪ ಹೊರಿಸಲಾಗಿದ್ದು, ಸೋರಿಯನ್ನು 2011 ರಲ್ಲಿ ದೆಹಲಿಯಿಂದ ಬಂಧಿಸಲಾಗಿತ್ತು.

ವಿಶೇಷ ನ್ಯಾಯಾಧೀಶ ವಿನೋದ್ ಕುಮಾರ್ ದೇವಾಂಗನ್ ಅವರು, ‘‘ಸೋನಿ ಸೊರಿ, ಅವರ ಸಹಾಯಕ ಲಿಂಗರಾಮ್ ಕೊಡೋಪಿ, ಗುತ್ತಿಗೆದಾರ ಬಿ.ಕೆ. ಲಾಲಾ ಮತ್ತು ಎಸ್ಸಾರ್ ಅಧಿಕಾರಿ ಡಿ.ವಿ.ಸಿ.ಎಸ್. ವರ್ಮಾ ಅವರು ಪ್ರಕರಣದಲ್ಲಿ ತಪ್ಪಿತಸ್ಥರಲ್ಲ” ಎಂದು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಬಸ್ತರ್ – ಹುಟ್ಟಿದ ನೆಲದಲ್ಲೇ ತಬ್ಬಲಿಗಳಾಗಿರುವ ಆದಿವಾಸಿಗಳು!

ಮಾವೋವಾದಿಗಳಿಗೆ ಹಸ್ತಾಂತರಿಸಲು ಬೇಕಾಗಿ ಎಸ್ಸಾರ್ ಪರವಾಗಿ ಲಾಲಾ ಅವರು ಸೋರಿ ಮತ್ತು ಕೊಡೋಪಿಗೆ 15 ಲಕ್ಷ ರೂ. ನೀಡಿದ್ದರು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. “ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನ್ಯಾಯಾಲಯವು ಮಾರ್ಚ್ 14 ರಂದು ಅಂಗೀಕರಿಸಿದ್ದು, ಮಾರ್ಚ್ 15 ರಂದು ಆದೇಶ ಲಭ್ಯವಾಗಿದೆ.

ಸೋನಿ ಸೋರಿ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 (ಎ) (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ನಡೆಸುವುದು, ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು, ಅಥವಾ ಯುದ್ಧ ನಡೆಸಲು ಪ್ರೇರೇಪಿಸುವುದು), 120-ಬಿ (ಅಪರಾಧ ಪಿತೂರಿ), ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ ಮತ್ತು ಛತ್ತೀಸ್ಗಢ ವಿಶೇಷ ಸಾರ್ವಜನಿಕ ಭದ್ರತಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ರಾಜ್ಯದಲ್ಲಿ ಇದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೋನಿ ಸೋರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಎಲ್ಲಾ ಪ್ರಕರಣಗಳಲ್ಲಿ ಅವರು ದೋಷಮುಕ್ತರಾಗಿದ್ದಾರೆ.

ಇದನ್ನೂ ಓದಿ: ಭಾರತದ ಫ್ಯಾಸಿಸ್ಟ್ ಪ್ರಜಾಪ್ರಭುತ್ವ

ಪ್ರಕರಣದಲ್ಲಿ ತನ್ನನ್ನು ಕಸ್ಟಡಿಗೆ ತೆಗೆದುಕೊಂಡಾಗ ಪೊಲೀಸ್ ದೌರ್ಜನ್ಯವನ್ನು ಅನುಭವಿಸಿದ್ದೇನೆ ಎಂದು ಸೋನಿ ಸೋರಿ ಹಲವು ವರ್ಷಗಳಿಂದ ಆರೋಪಿಸುತ್ತಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಅವರು, “ಅವರು ನನಗೆ 11 ವರ್ಷಗಳನ್ನು ಹಿಂದಿರುಗಿಸುತ್ತಾರೆಯೆ?” ಎಂದು ಪ್ರಶ್ನಿಸಿದ್ದಾರೆ.

“ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲಾಗಿದೆ. ನಿರಪರಾಧಿ ಎಂದು ಸಾಬೀತುಪಡಿಸಲು ನಾನು ಒಂದು ದಶಕಕ್ಕೂ ಹೆಚ್ಚು ಕಾಲ ಹೋರಾಡಬೇಕಾಯಿತು. ನಾನು ಶಾಲಾ ಶಿಕ್ಷಕಿಯಾಗಿದ್ದೆ… ಈ ಸುಳ್ಳು ಪ್ರಕರಣಗಳು ನನ್ನ ಜೀವನ, ನನ್ನ ಘನತೆ ಮತ್ತು ನನ್ನ ಕುಟುಂಬವನ್ನು ಹಾಳುಮಾಡಿದೆ” ಎಂದು ಅವರು ಹೇಳಿದ್ದಾರೆ.

“ಸುಳ್ಳು ಆರೋಪಗಳ ವಿರುದ್ಧ ಹೋರಾಡಿ ಕಳೆದುಹೋದ ನನ್ನ ಘನತೆ ಮತ್ತು ನನ್ನ ಜೀವನದ 11 ವರ್ಷಗಳನ್ನು ಮರಳಿ ಕೊಡುವವರು ಯಾರು? ರಾಜ್ಯ ಸರ್ಕಾರ ಅಥವಾ ಕೇಂದ್ರ ಅದನ್ನು ಹಿಂದಿರುಗಿಸಬಹುದೇ? ಇದು ಕೇವಲ ಸೋನಿ ಸೋರಿ ಬಗ್ಗೆ ಮಾತ್ರವಲ್ಲ, ಬಸ್ತಾರ್ ಪ್ರದೇಶದ ಹಲವಾರು ಬುಡಕಟ್ಟು ಜನಾಂಗದವರು ಇಂತಹ ಸುಳ್ಳು ಪ್ರಕರಣಗಳ ಭಾರವನ್ನು ಹೊತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಬಸ್ತಾರ್‌ನಲ್ಲಿ ನಡೆದ ದೌರ್ಜನ್ಯಗಳು, ನಕಲಿ ಎನ್‌ಕೌಂಟರ್‌ಗಳು ಮತ್ತು ಹಕ್ಕುಗಳ ಉಲ್ಲಂಘನೆಗಳ ವಿರುದ್ಧ ಸೋನಿ ಸೋರಿ ಆಗಾಗ್ಗೆ ಧ್ವನಿ ಎತ್ತುತ್ತಲೆ ಬರುತ್ತಿದ್ದಾರೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ, ಸುದ್ದಿ ವೆಬ್‌ಸೈಟ್, ಒಟಿಟಿ; ಬಗ್ಗುವ ಬೆನ್ನಿಗೆ ಗುದ್ದಲಿರುವ ಮುಷ್ಟಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...