Homeಕರ್ನಾಟಕಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

ಮಸೂದೆ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದು ಗಲಾಟೆ: ಬಿಜೆಪಿಯ 10 ಶಾಸಕರ ಅಮಾನತು

- Advertisement -
- Advertisement -

ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಮಸೂದೆಗಳ ಪ್ರತಿಗಳನ್ನು ಹರಿದು ಪೀಠದಲ್ಲಿದ್ದ ಉಪಸಭಾಧ್ಯಕ್ಷರ ಮೇಲೆಸೆದು ಕೋಲಾಹಲ ಸೃಷ್ಟಿಸಿದ ಬಿಜೆಪಿಯ 10 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ.

ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವವರೆಗೂ 10 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದ್ದಾರೆ. ಡಾ. ಅಶ್ವತ್ಥನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್​, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್. ಅಶೋಕ್, ಉಮಾನಾಥ್ ಕೋಟ್ಯಾನ್, ಅರಗ ಜ್ಞಾನೇಂದ್ರ ಹಾಗೂ ಭರತ್ ಶೆಟ್ಟಿ ಅಮಾನತಾಗಿರುವ ಬಿಜೆಪಿ ಶಾಸಕರಾಗಿದ್ದಾರೆ.

ಸಧ್ಯ ಗುರುವಾರ ಮತ್ತು ಶುಕ್ರವಾರ 2 ದಿನಗಳ ಕಾಲ ಅಧಿವೇಶನ ಬಾಕಿ ಇದ್ದು, ಈ ಹತ್ತು ಶಾಸಕರು ಸದನಕ್ಕೆ ಹಾಜರಾಗದಂತೆ ಅಮಾನತು ಮಾಡಲಾಗಿದೆ.

ಈ ಬಗ್ಗೆ ಸದನದಲ್ಲಿ ಸ್ಪೀಕರ್ ಖಾದರ್ ಮಾತನಾಡಿದ್ದು, ”ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ 10 ಶಾಸಕರ ಅಮಾನತು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಮಾರ್ಷಲ್ಸ್‌ ಸದನದೊಳಗೆ ಬಂದು ಅಮಾನತುಗೊಂಡ ಶಾಸಕರನ್ನು ಹೊರಕಳಿಸಿದರು. ಅಷ್ಟರಲ್ಲಿ ಬಿಜೆಪಿಯ ಇತರ ಶಾಸಕರು ಅಮಾನತುಗೊಂಡ ಶಾಸಕರಿಗೆ ತಡೆಗೋಡೆಯಾಗಿ ನಿಂತರು. ಅಮಾನತುಗೊಂಡ ಶಾಸಕರನ್ನು ಮಾರ್ಷಲ್​​ಗಳು ಬಲವಂತವಾಗಿ ಹೊರಗೆ ಕಳುಹಿಸದಂತೆ ತಡೆಯಲು ಬಿಜೆಪಿಯ ಇತರ ಶಾಸಕರು ಪ್ರಯತ್ನಿಸಿದರು. ಆದರೆ ಮಾರ್ಷಲ್ಸ್‌ಗಳು ಮಾತ್ರ ಶಾಸಕರನ್ನು ಬಲವಂತವಾಗಿ ಹೊತ್ತುಕೊಂಡು ಹೋಗಿ ಹೊರಗೆ ಹಾಕಿದರು.

ಏನಿದು ಘಟನೆ?:

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸಿದ್ದು, ”ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ” ಎಂದು ಹೇಳಿದ್ದರು.

ಸಿಎಂ ಉತ್ತರದಿಂದ ಸಮಾಧಾನಗೊಳ್ಳದ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದರು. ಕೆಲ ಹೊತ್ತಿನ ಬಳಿಕ ಉಪಸಭಾಪತಿಯವರು ಸಭಾಂಗಣದಲ್ಲಿ ಕುಳಿತು ಚರ್ಚೆ ಮುಂದುವರಿಸಿದ್ದರು. ಮಧ್ಯಾಹ್ನದ ಊಟಕ್ಕೆ ಸದನವನ್ನು ಮುಂದೂಡದಿರುವುದಕ್ಕೆ ಅಸಮಾಧಾನಗೊಂಡ ಬಿಜೆಪಿ ಮುಖಂಡರು ಕೆಲವು ಬಿಲ್‌ಗಳು ಸೇರಿದಂತೆ ದಾಖಲೆಗಳನ್ನು ಹರಿದು ಸಭಾಧ್ಯಕ್ಷರ ಪೀಠದ ಮೇಲೆ ಎಸೆದಿದ್ದರು. ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್​ಗೆ ದೂರು ನೀಡಿದ್ದರು. ಆನಂತರ ಸ್ಪೀಕರ್ ಖಾದರ್ ಅವರು ಅಮಾನತು ಮಾಡಿರುವುದಾಗಿ ತಿಳಿಸಿದರು.

ಶಾಸಕರನ್ನು ಅಮಾನತು ಮಾಡಿರುವುದನ್ನು ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಸೇರಿದಂತೆ ಇತರ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ‌ ಶಿವಲಿಂಗೇಗೌಡ  ಮಾತನಾಡಿ, ”ಸಣ್ಣ ವಿಚಾರಕ್ಕೆ ಬಿಜೆಪಿಯವರು ಧರಣಿ ಮಾಡುತ್ತಾರೆ. ದಲಿತ ಅಧ್ಯಕ್ಷರ ಮೇಲೆ ಪೇಪರ್ ಎಸೆಯುತ್ತಾರೆ, ಹಲ್ಲೆಗೆ ಮುಂದಾಗುತ್ತಾರೆ. ಬಿಜೆಪಿಯವರು ಕ್ಷಮೆ ಕೇಳಬೇಕು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...