Homeಮುಖಪುಟಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ಪುಣೆ ನಗರದಲ್ಲಿ ಹಿರಿಯ ಮರಾಠಿ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಬಂಧಿತ ಬಿಜೆಪಿ ಕಾರ್ಯಕರ್ತರನ್ನು ದೀಪಕ್ ಪೋಟೆ, ಗಣೇಶ್ ಘೋಷ್, ಗಣೇಶ್ ಶೆರ್ಲಾ, ರಾಘವೇಂದ್ರ ಮಾನಕರ್, ಸ್ವಪ್ನಿಲ್ ನಾಯ್ಕ್, ಪ್ರತೀಕ್ ದೇಸರ್ದಾ, ದುಶ್ಯಂತ್ ಮೊಹೋಲ್, ದತ್ತಾ ಸಾಗ್ರೆ, ಗಿರೀಶ್ ಮಾನ್ಕರ್ ಮತ್ತು ರಾಹುಲ್ ಪಾಯ್ಗುಡೆ ಎಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ), 324, 336, 427 ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸಭೆಗೆ ವಾಗ್ಲೆ ಮತ್ತು ಇತರರು ಪೊಲೀಸ್‌ ರಕ್ಷಣೆಯಲ್ಲಿ ತೆರಳುತ್ತಿರುವಾಗ ಕಾರಿನ ಮೇಲೆ ದಾಳಿ ನಡೆದ ಒಂದು ದಿನದ ನಂತರ ನಗರದ ಪಾರ್ವತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್‌ ದಾಖಲಿಸಲಾಗಿತ್ತು.

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ನರೇಂದ್ರ ಮೋದಿ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವ `ಭಾರತ ರತ್ನ’ ನೀಡಿ ಗೌರವಿಸುತ್ತಿರುವ ಕುರಿತು ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಟೀಕಿಸಿದ್ದರು ಇದರಿಂದಾಗಿ ಬಿಜೆಪಿ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಿಂಘಾಡ್ ರಸ್ತೆ ಪ್ರದೇಶದಲ್ಲಿ ರಾಷ್ಟ್ರ ಸೇವಾದಳ ಆಯೋಜಿಸಿದ್ದ ‘ನಿರ್ಭಯ್ ಬಾನೋ’ ಕಾರ್ಯಕ್ರಮಕ್ಕೆ ನಿಖಿಲ್ ವಾಗ್ಲೆ, ಅಸೀಮ್ ಸರೋದೆ ಮತ್ತು ವಿಶ್ವಂಭರ ಚೌಧರಿ ಪೊಲೀಸ್ ರಕ್ಷಣೆಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಶಾಯಿ ಎರಚಿ ಕಾರಿನ ವಿಂಡ್‌ಸ್ಕ್ರೀನ್ ಒಡೆದು ಹಾಕಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ನಿಖಿಲ್ ವಾಗ್ಲೆ (64) ವಿರುದ್ಧ  ಬಿಜೆಪಿಯ ಹಿರಿಯ ನಾಯಕ ಸುನೀಲ್ ದೇವಧರ್ ಪುಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ನಿಖಿಲ್ ವಾಗ್ಲೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 (ಮಾನನಷ್ಟ) ಮತ್ತು 505ರಡಿಯಲ್ಲಿ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದಲ್ಲದೆ ಸೆಕ್ಷನ್ 144ನ್ನು ಉಲ್ಲಂಘಿಸಿದ ಆರೋಪದಲ್ಲಿ ವಾಗ್ಲೆ, ಬಿಜೆಪಿ, ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್‌ನ ಪುಣೆ ನಗರ ಘಟಕದ ಅಧ್ಯಕ್ಷರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅನುಮತಿಯಿಲ್ಲದೆ `ನಿರ್ಭಯ್ ಬಾನೊ’ ಸಾರ್ವಜನಿಕ ಸಭೆ ನಡೆಯುತ್ತಿದ್ದರಿಂದ ಅವರ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಂಭಾಜಿ ಕದಂ ಹೇಳಿದ್ದಾರೆ.

ಖಂಡೋಜಿ ಬಾಬಾ ಚೌಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ನಿಖಿಲ್ ವಾಗ್ಲೆ ಅವರ ಕಾರನ್ನು ಗುಂಪುಗೂಡಿ  ಧ್ವಂಸಗೊಳಿಸುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದಾಳಿಯಿಂದ ಕಾರಿನ ವಿಂಡ್‌ಸ್ಕ್ರೀನ್ ಮತ್ತು ಸೈಡ್ ಪ್ಯಾನ್‌ಗಳಿಗೆ ಹಾನಿಯಾಗಿದೆ. ನಿಖಿಲ್ ವಾಗ್ಲೆ ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ತೆರಳುವಲ್ಲಿ ಯಶಸ್ವಿಯಾಗಿದ್ದರು.

‘ನಿರ್ಭಯ್ ಬಾನೋ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ವಾಗ್ಲೆ, ನನ್ನ ಮೇಲೆ ಹಲ್ಲೆ ನಡೆಸಿದ ಎಲ್ಲರನ್ನೂ ನಾನು ಕ್ಷಮಿಸುತ್ತೇನೆ. ಈ ಹಿಂದೆ ಆರು ಬಾರಿ ನನ್ನ ಮೇಲೆ ದಾಳಿ ಮಾಡಲಾಗಿದೆ ಮತ್ತು ಇದು ಏಳನೆಯದು ಎಂದು ಹೇಳಿದ್ದರು.

ಪತ್ರಕರ್ತ ನಿಖಿಲ್ ವಾಗ್ಲೆ ವಿರುದ್ಧದ ದಾಳಿಯನ್ನು ದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಖಂಡಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪುಣೆಯ ಆಡಳಿತ ಮತ್ತು ಮಹಾರಾಷ್ಟ್ರ ಸರ್ಕಾರ ತಪ್ಪಿತಸ್ಥರನ್ನು ಬಂಧಿಸುವಂತೆ ಎಡಿಟರ್ಸ್ ಗಿಲ್ಡ್ ಆಗ್ರಹಿಸಿದೆ. ವಾಗ್ಲೆ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎಡಿಟರ್ಸ್ ಗಿಲ್ಡ್ ಗಮನಿಸಿದೆ ಮತ್ತು ಪತ್ರಕರ್ತರನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನದಲ್ಲಿ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಕಾನೂನುಗಳ ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಪತ್ರಕರ್ತರ ವಿರುದ್ಧದ ದೂರುಗಳಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಕಾನೂನು ಜಾರಿ ಸಂಸ್ಥೆಗಳು ಸಂಯಮದಿಂದ ವರ್ತಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

‘ಸ್ವತಂತ್ರ ಪತ್ರಕರ್ತನ’ ಮೇಲಿನ ದಾಳಿಯು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕುಸಿತವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಕೂಡ ಆರೋಪಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ಜನಾದೇಶ ಕದಿಯುವ ಮೂಲಕ ರಚಿಸಲಾದ ಮಹಾರಾಷ್ಟ್ರ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಫೇಸ್ ಬುಕ್ ಲೈವ್‌ನಲ್ಲಿ ರಾಜಕಾರಣಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಬಿಜೆಪಿ-ಆರೆಸ್ಸೆಸ್‌ನ ಗೂಂಡಾಗಳಿಂದ ಬಹಿರಂಗವಾಗಿ ಮಾತನಾಡುವ ಪತ್ರಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ. ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಮತ್ತೊಬ್ಬ ರಾಜಕಾರಣಿ ಮೇಲೆ ಗುಂಡು ಹಾರಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಮುಂಬೈನಲ್ಲಿ ಶಿವಸೇನಾ (ಯುಬಿಟಿ) ನಾಯಕ ಅಭಿಷೇಕ್ ಘೋಸಲ್ಕರ್ ಹತ್ಯೆ ಮತ್ತು ಈ ತಿಂಗಳ ಆರಂಭದಲ್ಲಿ ಥಾಣೆ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್‌ ಪೊಲೀಸ್ ಠಾಣೆಯೊಳಗೆ ಗುಂಡು ಹಾರಿಸಿ ಶಿವಸೇನೆಯ ಕಾರ್ಯಕರ್ತನನ್ನು ಗಾಯಗೊಳಿಸಿದ ಘಟನೆಯನ್ನು ಅವರು ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...