Homeಮುಖಪುಟಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

- Advertisement -
- Advertisement -

ಪುಣೆ ನಗರದಲ್ಲಿ ಹಿರಿಯ ಮರಾಠಿ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಬಂಧಿತ ಬಿಜೆಪಿ ಕಾರ್ಯಕರ್ತರನ್ನು ದೀಪಕ್ ಪೋಟೆ, ಗಣೇಶ್ ಘೋಷ್, ಗಣೇಶ್ ಶೆರ್ಲಾ, ರಾಘವೇಂದ್ರ ಮಾನಕರ್, ಸ್ವಪ್ನಿಲ್ ನಾಯ್ಕ್, ಪ್ರತೀಕ್ ದೇಸರ್ದಾ, ದುಶ್ಯಂತ್ ಮೊಹೋಲ್, ದತ್ತಾ ಸಾಗ್ರೆ, ಗಿರೀಶ್ ಮಾನ್ಕರ್ ಮತ್ತು ರಾಹುಲ್ ಪಾಯ್ಗುಡೆ ಎಂದು ಗುರುತಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆ), 324, 336, 427 ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸಭೆಗೆ ವಾಗ್ಲೆ ಮತ್ತು ಇತರರು ಪೊಲೀಸ್‌ ರಕ್ಷಣೆಯಲ್ಲಿ ತೆರಳುತ್ತಿರುವಾಗ ಕಾರಿನ ಮೇಲೆ ದಾಳಿ ನಡೆದ ಒಂದು ದಿನದ ನಂತರ ನಗರದ ಪಾರ್ವತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್‌ ದಾಖಲಿಸಲಾಗಿತ್ತು.

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ನರೇಂದ್ರ ಮೋದಿ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಗೌರವ `ಭಾರತ ರತ್ನ’ ನೀಡಿ ಗೌರವಿಸುತ್ತಿರುವ ಕುರಿತು ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಟೀಕಿಸಿದ್ದರು ಇದರಿಂದಾಗಿ ಬಿಜೆಪಿ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಸಿಂಘಾಡ್ ರಸ್ತೆ ಪ್ರದೇಶದಲ್ಲಿ ರಾಷ್ಟ್ರ ಸೇವಾದಳ ಆಯೋಜಿಸಿದ್ದ ‘ನಿರ್ಭಯ್ ಬಾನೋ’ ಕಾರ್ಯಕ್ರಮಕ್ಕೆ ನಿಖಿಲ್ ವಾಗ್ಲೆ, ಅಸೀಮ್ ಸರೋದೆ ಮತ್ತು ವಿಶ್ವಂಭರ ಚೌಧರಿ ಪೊಲೀಸ್ ರಕ್ಷಣೆಯಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಶಾಯಿ ಎರಚಿ ಕಾರಿನ ವಿಂಡ್‌ಸ್ಕ್ರೀನ್ ಒಡೆದು ಹಾಕಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ನಿಖಿಲ್ ವಾಗ್ಲೆ (64) ವಿರುದ್ಧ  ಬಿಜೆಪಿಯ ಹಿರಿಯ ನಾಯಕ ಸುನೀಲ್ ದೇವಧರ್ ಪುಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ನಿಖಿಲ್ ವಾಗ್ಲೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 500 (ಮಾನನಷ್ಟ) ಮತ್ತು 505ರಡಿಯಲ್ಲಿ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದಲ್ಲದೆ ಸೆಕ್ಷನ್ 144ನ್ನು ಉಲ್ಲಂಘಿಸಿದ ಆರೋಪದಲ್ಲಿ ವಾಗ್ಲೆ, ಬಿಜೆಪಿ, ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್‌ನ ಪುಣೆ ನಗರ ಘಟಕದ ಅಧ್ಯಕ್ಷರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಅನುಮತಿಯಿಲ್ಲದೆ `ನಿರ್ಭಯ್ ಬಾನೊ’ ಸಾರ್ವಜನಿಕ ಸಭೆ ನಡೆಯುತ್ತಿದ್ದರಿಂದ ಅವರ ವಿರುದ್ಧ ಕೂಡ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಂಭಾಜಿ ಕದಂ ಹೇಳಿದ್ದಾರೆ.

ಖಂಡೋಜಿ ಬಾಬಾ ಚೌಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ನಿಖಿಲ್ ವಾಗ್ಲೆ ಅವರ ಕಾರನ್ನು ಗುಂಪುಗೂಡಿ  ಧ್ವಂಸಗೊಳಿಸುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದಾಳಿಯಿಂದ ಕಾರಿನ ವಿಂಡ್‌ಸ್ಕ್ರೀನ್ ಮತ್ತು ಸೈಡ್ ಪ್ಯಾನ್‌ಗಳಿಗೆ ಹಾನಿಯಾಗಿದೆ. ನಿಖಿಲ್ ವಾಗ್ಲೆ ಪೊಲೀಸ್ ರಕ್ಷಣೆಯಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ತೆರಳುವಲ್ಲಿ ಯಶಸ್ವಿಯಾಗಿದ್ದರು.

‘ನಿರ್ಭಯ್ ಬಾನೋ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ವಾಗ್ಲೆ, ನನ್ನ ಮೇಲೆ ಹಲ್ಲೆ ನಡೆಸಿದ ಎಲ್ಲರನ್ನೂ ನಾನು ಕ್ಷಮಿಸುತ್ತೇನೆ. ಈ ಹಿಂದೆ ಆರು ಬಾರಿ ನನ್ನ ಮೇಲೆ ದಾಳಿ ಮಾಡಲಾಗಿದೆ ಮತ್ತು ಇದು ಏಳನೆಯದು ಎಂದು ಹೇಳಿದ್ದರು.

ಪತ್ರಕರ್ತ ನಿಖಿಲ್ ವಾಗ್ಲೆ ವಿರುದ್ಧದ ದಾಳಿಯನ್ನು ದಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಖಂಡಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪುಣೆಯ ಆಡಳಿತ ಮತ್ತು ಮಹಾರಾಷ್ಟ್ರ ಸರ್ಕಾರ ತಪ್ಪಿತಸ್ಥರನ್ನು ಬಂಧಿಸುವಂತೆ ಎಡಿಟರ್ಸ್ ಗಿಲ್ಡ್ ಆಗ್ರಹಿಸಿದೆ. ವಾಗ್ಲೆ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎಡಿಟರ್ಸ್ ಗಿಲ್ಡ್ ಗಮನಿಸಿದೆ ಮತ್ತು ಪತ್ರಕರ್ತರನ್ನು ಬೆದರಿಸುವ ಮತ್ತು ಕಿರುಕುಳ ನೀಡುವ ಪ್ರಯತ್ನದಲ್ಲಿ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಕಾನೂನುಗಳ ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಪತ್ರಕರ್ತರ ವಿರುದ್ಧದ ದೂರುಗಳಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಕಾನೂನು ಜಾರಿ ಸಂಸ್ಥೆಗಳು ಸಂಯಮದಿಂದ ವರ್ತಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

‘ಸ್ವತಂತ್ರ ಪತ್ರಕರ್ತನ’ ಮೇಲಿನ ದಾಳಿಯು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಕುಸಿತವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಕೂಡ ಆರೋಪಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ಜನಾದೇಶ ಕದಿಯುವ ಮೂಲಕ ರಚಿಸಲಾದ ಮಹಾರಾಷ್ಟ್ರ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಫೇಸ್ ಬುಕ್ ಲೈವ್‌ನಲ್ಲಿ ರಾಜಕಾರಣಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಬಿಜೆಪಿ-ಆರೆಸ್ಸೆಸ್‌ನ ಗೂಂಡಾಗಳಿಂದ ಬಹಿರಂಗವಾಗಿ ಮಾತನಾಡುವ ಪತ್ರಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ. ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಮತ್ತೊಬ್ಬ ರಾಜಕಾರಣಿ ಮೇಲೆ ಗುಂಡು ಹಾರಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಮುಂಬೈನಲ್ಲಿ ಶಿವಸೇನಾ (ಯುಬಿಟಿ) ನಾಯಕ ಅಭಿಷೇಕ್ ಘೋಸಲ್ಕರ್ ಹತ್ಯೆ ಮತ್ತು ಈ ತಿಂಗಳ ಆರಂಭದಲ್ಲಿ ಥಾಣೆ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್‌ ಪೊಲೀಸ್ ಠಾಣೆಯೊಳಗೆ ಗುಂಡು ಹಾರಿಸಿ ಶಿವಸೇನೆಯ ಕಾರ್ಯಕರ್ತನನ್ನು ಗಾಯಗೊಳಿಸಿದ ಘಟನೆಯನ್ನು ಅವರು ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...