Homeಕರ್ನಾಟಕಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ - ದಲಿತ ಮುಖಂಡರ ಮೇಲೆ...

ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

- Advertisement -
- Advertisement -

ಹಲವು ಪ್ರಕರಣಗಳ ಆರೋಪದ ಮೇಲೆ ದಲಿತ ಮುಖಂಡ, ಚಿತ್ರದುರ್ಗದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಅವರನ್ನು ‘ಗೂಂಡಾ ಕಾಯ್ದೆ’ಯಡಿ ಜೈಲಿಗೆ ಕಳಿಸಲಾಗಿದೆ. ಈ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಎಸ್‌ಡಿಪಿಐ ಪಕ್ಷವು, ಚಿತ್ರದುರ್ಗದಲ್ಲಿ ದಲಿತ ಮಹಾಗಣಪತಿ ಕೂರಿಸುವುದು, ಮಧುಗಿರಿ ಮೋದಿ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರನ್ನು ಟೀಕಿಸಿದ್ದು, ಟಿಪ್ಪು ಜಯಂತಿ ಪರ ಕರಪತ್ರ ಹಂಚಿಕೆ ಮಾಡಿದ್ದು ಅಪರಾಧವೇ? ಇದಕ್ಕೆ ಗೂಂಡಾ ಕಾಯ್ದೆ ಹಾಕುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ. ಇದು ಪಟ್ಟಭದ್ರರ ರಾಜಕೀಯ ಶಡ್ಯಂತ್ರಕ್ಕೆ ತಲೆಬಾಗಿ, ಪಿತೂರಿ ಮಾಡಿ, ಗೂಂಡಾ ಕಾಯ್ದೆ ಹಾಕಲಾಗಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾಯನ್ನು ಮುಸ್ಲಿಂ ಪಕ್ಷವೆಂದು ಉಲ್ಲೇಖಿಸಿರುವ ಚಿತ್ರದುರ್ಗ ಕೋಟೆ ಠಾಣೆ ಪೊಲೀಸರು, ಶ್ರೀನಿವಾಸ್ ಅವರ ಮೇಲಿನ ಪ್ರಕರಣ ಪಟ್ಟಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಸಲ್ಲಿಸಿ ಬಂಧಿಸಲು ಅನುಮತಿ ಕೋರಿದ್ದರು. ಜಿಲ್ಲಾಧಿಕಾರಿಗಳು ಬಂಧನಕ್ಕೆ ಅನುಮತಿ ನೀಡಿದ ನಂತರ ಶ್ರೀನಿವಾಸ್‌ ಅವರನ್ನು ಜೈಲಿಗೆ ಕಳಿಸಲಾಗಿದೆ.

ಪ್ರಕರಣಗಳು ಮತ್ತು ಸಂಕ್ಷಿಪ್ತ ವಿವರ

1. ದಸಂಸ (ಎಸ್‌.ಎಸ್.ಬಣ) ವತಿಯಿಂದ ದಲಿತ ಮಹಾ ಗಣಪತಿ ಪ್ರತಿಷ್ಠಾಪನೆ ಹಾಗೂ ಸಮಾನತೆ ಯಾತ್ರೆ ಮಾಡಿದ್ದು, ಜಿಲ್ಲಾಡಳಿತ ಆದೇಶದ ವಿರುದ್ಧವಾಗಿ ಮೆರವಣಿಗೆ ವೇಳೆ ಡಿ.ಜೆ.ಸೌಂಡ್‌ ಬಳಸಿದ್ದು ಮೊದಲನೇ ಪ್ರಕರಣವಾಗಿದೆ.

2. ದಲಿತ ಗಣಪತಿ ಸಮಾನತಾ ಯಾತ್ರೆಯ ಸಂಬಂಧ ನಿಷೇಧಿತ ಪ್ರದೇಶಗಳಲ್ಲಿ ನೀಲಿ ಬಣ್ಣದ ಬಟ್ಟೆ ಮತ್ತು ಪ್ಲೆಕ್ಸ್‌ಗಳನ್ನು ಹಾಕಿಸಿ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದ ಪ್ರಕರಣ.

3. ಟಿಪ್ಪು ಜಯಂತಿ ಸಂಬಂಧ ಪರ, ವಿರೋಧದ ಕರಪತ್ರಗಳ ಹಂಚುವ ವಿಚಾರವಾಗಿ ಚಿತ್ರದುರ್ಗ ನಗರದ ಗಾಂಧಿ ಸರ್ಕಲ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದು ಇದೇ ವಿಚಾರವಾಗಿ ಪರ ಮತ್ತು ವಿರೋಧ ವ್ಯಕ್ತಪಡಿಸುವ ಎರಡೂ ಗುಂಪುಗಳು ಸೇರಿಕೊಂಡು ಚಿತ್ರದುರ್ಗ ನಗರದಲ್ಲಿ ಇರುವ ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದ ಪ್ರಕರಣ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹೊರಿಸಲಾಗಿರುವ ಪ್ರಕರಣ ಇದಾಗಿದೆ.

4. ಚಿತ್ರದುರ್ಗ ನಗರದ ಚೇಳುಗಡ್ಡ ಏರಿಯಾದಲ್ಲಿ ಬಸವರಾಜ್‌ ಎಂಬವರೊಂದಿಗೆ ಆದ ಜಗಳದ ಪ್ರಕರಣ. ಚರಂಡಿ ಮೇಲೆ ಇರುವ ಗೋಡೆಯನ್ನು ತೆಗೆಯಲು ಶ್ರೀನಿವಾಸ್‌ ಹೇಳಿದಾಗ ಆಗಿರುವ ಗಲಾಟೆ ಇದಾಗಿದೆ.

5. ಮಧುಗಿರಿ ಮೋದಿ ಎಂಬವರು ಮಾಡಿದ್ದ ವಿಡಿಯೊಗೆ ವಿರುದ್ಧವಾಗಿ ಮಾತನಾಡಿ ಹಿಂದೂ ಮತ್ತು ಮುಸ್ಲಿಂ ಧರ್ಮಗಳ ವಿಚಾರವನ್ನು ಪ್ರಸ್ತಾಪಿಸಿ ಮುಸ್ಲಿಂ ಧರ್ಮದ ಪರ ಮಾತನಾಡಿದ ಪ್ರಕರಣ. ಮುಸ್ಲಿಂ ಧರ್ಮದ ಪರ ಮಾತನಾಡಿದ್ದರಿಂದ ಜನರ ನಡುವೆ ಭೇದ ಹಾಗೂ ವೈಶಮ್ಯ ಹರಡಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಇದಾಗಿದೆ.

6. ಚಿತ್ರದುರ್ಗ ನಗರದ ಚೇಳೂಗುಡ್ಡದ ಈಶ್ವರನ ಕಲ್ಲು ದೇವಸ್ಥಾನದ ಮುಂಭಾಗ ಗೋಡೆಯ ಮೇಲೆ ಬರೆಯಿಸಿದ್ದ ಶ್ರೀ ವಿಶ್ವ ಹಿಂದೂ ಪರಿಷತ್‌ ಭಜರಂಗದಳ ಶಿವಕೇಸರಿ ಚೇಳುಗುಡ್ಡ ಚಿತ್ರದುರ್ಗ ಎಂಬ ಬೋರ್ಡ್‌‌ಗೆ ಕಪ್ಪುಬಣ್ಣ ಬಳಿದ ಪ್ರಕರಣ.

7. ಅಪಘಾತ ಪ್ರಕರಣದಲ್ಲಿ ಮೋಟಾರ್‌ ಸೈಕಲ್‌ ಬೋರ್ಡ್ ಬದಲಿಸಿದ ಪ್ರಕರಣ.

8. ಆರೋಪಿಯು ಸಾಕ್ಷಿದಾರರನ್ನು ಬೆದರಿಸುವ ಉದ್ದೇಶ ಹೊಂದಿರುವ ಆರೋಪ ಹೊರಿಸಲಾಗಿದೆ.  ಆ ಮೂಲಕ ನ್ಯಾಯಾಲಯದ ಶಿಕ್ಷೆಗಳಿಂದ ಪಾರಾಗುವ ತಂತ್ರಗಳನ್ನು ಅನುಸರಿಸುತ್ತಿರುವುದಾಗಿ ಶ್ರೀನಿವಾಸ್ ಮೇಲೆ ದೂರಲಾಗಿದೆ. ಶ್ರೀನಿವಾಸ್‌ ಮುಸ್ಲಿಂ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸೇರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

9. ಎಸ್‌ಡಿಪಿಐನಿಂದ ಸಂವಿಧಾನ ದೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಂಡ ಪ್ರಕರಣ. ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ಅನುಮತಿ ಇಲ್ಲದೆ ರಸ್ತೆ ಮಧ್ಯೆಯಲ್ಲಿ ಶಾಮಿಯಾನ ಹಾಕಿ, ಧ್ವನಿವರ್ಧಕ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ. ಎಸ್‌ಡಿಪಿಐನ 50-60 ಜನರನ್ನು ಒಂದೆಡೆ ಸೇರಿಸಿ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಆರೋಪ ಮಾಡಲಾಗಿದೆ.

10. ಎಸ್‌ಡಿಪಿಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಿದ ಪ್ರಕರಣ. ಅನುಮತಿ ಇಲ್ಲದೆ ಕಾರ್ಯಕ್ರಮ ಮಾಡಿದ ಆರೋಪ ಹೊರಿಸಲಾಗಿದೆ. 70-80 ಜನರನ್ನು ಒಂದೆಡೆ ಸೇರಿಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

New Doc 01-19-2022 21.21-compressed

ಶ್ರೀನಿವಾಸ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವುದನ್ನು ದಲಿತ ಮುಖಂಡ, ಎಸ್‌ಡಿಪಿಐ ನಾಯಕ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಖಂಡಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಚಿತ್ರದುರ್ಗ ಕೋಟೆ ಪೋಲಿಸ್ ಠಾಣೆಯ ಪೊಲೀಸ್‌ ನಿರೀಕ್ಷಕರು ಒಟ್ಟು 10 ಕಾರಣಗಳನ್ನು ನೀಡಿ, ಬಾಳೆಕಾಯಿ ಶ್ರೀನಿವಾಸ್ ಅವರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲು ಜಿಲ್ಲಾಧಿಕಾರಿಗಳ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಅವರು ಪೋಲಿಸ್ ನಿರೀಕ್ಷಕರು ಸಲಿಸಿದ ಅರ್ಜಿಯನ್ನು ಪರಿಶೀಲಿಸಿ ಶ್ರೀನಿವಾಸ್ ಅವರನ್ನು ಜೈಲಿಗೆ ಕಳಿಸಲು ಆದೇಶಿಸಿದ್ದಾರೆ. ಚಿತ್ರದುರ್ಗದ ಸೂಪರಿಂಟೆಂಡೆಂಟ್ ಪೋಲಿಸ್ ರಾಧಿಕಾ ಇದೆಲ್ಲವನ್ನು ನೋಡಿಯೂ, ಇಲ್ಲಿ ಅನ್ಯಾಯ ಆಗ್ತಾ ಇದೆ ಎಂದು ಗೊತ್ತಿದ್ದೂ, ತಮ್ಮ‌ಇಲಾಖೆಯ ಸಿಬ್ಬಂದಿ ರಾಜಕೀಯ ದಾಳಗಳಾಗಿ ಶ್ರೀನಿವಾಸ್ ಅವರನ್ನು ಬಲಿ ಪಡೆಯುತ್ತಿದ್ದಾರೆ ಎಂದು ಪ್ರತ್ಯಕ್ಷವಾಗಿ ಗೋಚರಿಸುತ್ತಿದ್ದರೂ, ಅದ್ಯಾರ ಮರ್ಜಿಗೂ ಒಳಗಾದಂತೆ ತಮ್ಮ‌ ಇಲಾಖೆಯ ನಡೆಯನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ಒಬ್ಬ ದೊಡ್ಡ ಗ್ಯಾಂಗ್ಸ್ಟರ್ ಎಂದು ಬಿಂಬಿಸಲು ಪಣ ತೊಟ್ಟು ನಿಂತು ಬಿಟ್ಟಿದ್ದಾರೆ” ಎಂದು ದೂರಿದ್ದಾರೆ.

ಪೊಲೀಸರು ನೀಡಿರುವ ಕಾರಣಗಳು ನಿಜಕ್ಕೂ ಅಪರಾಧಗಳೋ ಅಥವಾ ಹೋರಾಟದ ಕೆಚ್ಚೆದೆಯ ಹೆಜ್ಜೆಗಳೋ. ನಿಜಕ್ಕೂ ಇವೆಲ್ಲಾ ಗೂಂಡಾ ಕಾಯ್ದೆ ಅಡಿ ಬಂದು, ಜೈಲು ಶಿಕ್ಷೆ ಆಗುವುದೇ ಆಗಿದ್ದರೆ ಇವತ್ತು ಯಾವೊಬ್ಬ ರಾಜಕಾರಣಿಯೂ ಜೈಲಿನಿಂದ ಹೊರಗೆ ಇರುತ್ತಲೇ ಇರಲಿಲ್ಲ. ಆದರೇ ಜನರ ಪರವಾಗಿ ಹೋರಾಟ ಮಾಡಿದ ಶ್ರೀನಿವಾಸ್ ಇವತ್ತು ಜೈಲಿನಲ್ಲಿದ್ದಾರೆ‌. ಇದೇನಾ ನ್ಯಾಯ? ಇದೇನಾ ನೀತಿ? ಇದೇನಾ ಸತ್ಯ, ಧರ್ಮ? ಇವತ್ತು ಶ್ರೀನಿವಾಸ್‌ ಅವರಿಗೆ ಆಗಿದ್ದು ನಾಳೆ ಯಾರಿಗೂ ಆಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಕೋಟೆನಾಡು ಚಿತ್ರದುರ್ಗಕ್ಕೆ ಇವತ್ತು ಕಳಂಕ ಹತ್ತಿಕೊಳ್ತಾ ಇದೆ. ಯಾರೋ ಕೆಲವರ ರಾಜಕೀಯ ಸ್ವಾರ್ಥ ಮತ್ತು ದುರಾಸೆಗಳಿಗೆ ಚಿತ್ರದುರ್ಗದ ಹೋರಾಟಗಾರರು ಮತ್ತು ಸಾಮಾನ್ಯ ಜನ ಬೆಲೆ ತೆರಬೇಕಾಗುತ್ತಿದೆ. ಪೊಲೀಸರ ರಾಜಕೀಯ ಪಿತೂರಿ ಮತ್ತು ಅಧಿಕಾರಿಗಳ ಭ್ರಷ್ಟಾಚಾರದಿಂದಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇವತ್ತು ನಾವು, ನಾಳೆ ಯಾರು ಅನ್ನುವ ಹಾಗಾಗಿದೆ. ಈ ಅನ್ಯಾಯ ಅಕ್ರಮ ದೌರ್ಜನ್ಯ ದಬ್ಬಾಳಿಕೆಗಳ ವಿರುದ್ದ ನಿಲ್ಲದೇ ಹೋದರೇ, ಇವನ್ನು ತಡೆಯದೆ ಹೋದರೆ, ಮುಂದಿನ‌ ನಮ್ಮ‌ ತಲೆಮಾರು ಖಂಡಿತಾ ನಮ್ಮನ್ನು ಕ್ಷಮಿಸುವುದಿಲ್ಲ. ಬನ್ನಿ ನ್ಯಾಯ ಕೇಳೋಣ ಎಂದು ಕೋರಿದ್ದಾರೆ.

ಈ ಕುರಿತು ‘ನಾನುಗೌರಿ.ಕಾಂ’ ಕೋಟೆ ಠಾಣೆಯ ಪಿಎಸ್‌‌ಐರವರನ್ನು ಸಂಪರ್ಕಿಸಿತು. “ಈ ಹಿಂದೆ ನಡೆದಿರುವ ಪ್ರಕರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘ಗೂಂಡಾ ಕಾಯ್ದೆಯಡಿ ಇತ್ತೀಚಿನ ವರ್ಷಗಳಲ್ಲಿ ಬಂಧನಕ್ಕೊಳಗಾದವರು ಇವರೊಬ್ಬರೇ. ದಲಿತ ಮುಖಂಡ ಎಂಬ ಕಾರಣಕ್ಕೆ ಅವರನ್ನು ಬಂಧಿಸಿಲ್ಲ. ಈ ಹಿಂದೆ ದಾಖಲಾಗಿದ್ದ ಪ್ರಕರಣಗಳನ್ನು ಆಧರಿಸಿ ಬಂಧಿಸಲಾಗಿದೆ’ ಎಂದು ತಿಳಿಸಿದರು.

‘ಎಸ್‌ಡಿಪಿಐ’ ಒಂದು ಮುಸ್ಲಿಂ ಪಕ್ಷವೆಂದು ಅರ್ಜಿಯಲ್ಲಿ ಪ್ರಸ್ತಾಪಿಸಿರುವುದು ಎಷ್ಟು ಸರಿ? ಮಹಾಗಣಪತಿ ಕೂರಿಸಿದ್ದು ಅಪರಾಧವೇ ಎಂಬ ಪ್ರಶ್ನೆಗಳಿಗೆ ಪೊಲೀಸ್ ಅಧಿಕಾರಿ ಸ್ಪಷ್ಟ ಉತ್ತರ ನೀಡಿಲ್ಲ.

ಬಾಳೇಕಾಯಿ ಶ್ರೀನಿವಾಸ್‌ರವರನ್ನು ಅನ್ಯಾಯಯುತವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿರುವ ಎಸ್‌ಡಿಪಿಐ ಪಕ್ಷವು ಅವರ ಬಿಡುಗಡೆಗೆ ಒತ್ತಾಯಿಸಿ ಇಂದು ಸಂಜೆಗೆ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ.


ಇದನ್ನೂ ಓದಿರಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜನಪರ ಹೋರಾಟಗಾರ ಶ್ರೀನಿವಾಸ್ ಅವರನ್ನು ಗೂಂಡಾಕಾಯ್ದೆ ಅಡಿ ಬಂದಿಸಿರುವುದು ಕಂಡನಾರ್ಹ.

  2. rss rajakiya kutantra dc hagu police ilakege kappu chukke aagide, samanya praje ge arivu ide , janara rakshakara hesari nalli bhkshakaragi iddare, samaya inthavarige buddhi kalisuttade, Deena dalitaru shoshanege valapattavaru echchettakulla bekagi vinanti
    jai Hind, jai bheem

  3. ಜನರನ್ನು ಹತ್ಯೆ ಮಾಡುವಂತೆ ಕರೆ ನೀಡಿ ದ್ವೇಷವನ್ನು ಹರಡಿ, ಶಾಂತಿ ಕದಡುವ ಅನೇಕ ಜನರು ರಾಜಾರೋಷವಾಗಿ ಕರೆನೀಡುವವರನ್ನು ಬಂಧಿಸದೆ ಅವರ ಹೇಳಿಕೆ ಖಂಡಿಸುವವರನ್ನೇ ಗುರಿಯಾಗಿಸಿ ಬಂಧಿಸುತ್ತಿರುವುದನ್ನು ದೇಶವು ಪ್ರಜಾಪ್ರಭುತ್ವದಿಂದ ಸವಾ೯ಧಿಕಾರತ್ವಕ್ಕೆ ಸಾಗುತ್ತಿದೆಯೇನೋ….?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...