Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...