Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...