Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...