Homeಕರ್ನಾಟಕಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಬೆಂಗಳೂರಿನ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ 10 ಕೋವಿಡ್ ಕೇಸ್

ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಅನಿವಾರ್ಯ ಎಂದು ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ಒಂದರ 10 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಅಪಾರ್ಟ್‌ಮೆಂಟ್‌ಗೆ ಹೊಂದಿಕೊಂಡ 6 ಬ್ಲಾಕ್‌ಗಳನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ.

1,500 ನಿವಾಸಿಗಳೊಂದಿಗೆ ಒಂಬತ್ತು ಬ್ಲಾಕ್‌ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ 10 ಕೋವಿಡ್ ಪ್ರಕರಣಗಳು ಫೆಬ್ರವರಿ 15 ಮತ್ತು 22 ರ ನಡುವೆ ಕಂಡುಬಂದಿವೆ ಎಂದು ಬಿಬಿಎಂಪಿಯ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ದಿನದ ಹಿಂದೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಸಂಕೀರ್ಣವನ್ನು 113 ಪಾಸಿಟಿವ್ ಕೇಸ್ ಕಂಡು ಬಂದ ನಂತರ ಕಂಟೇನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿತ್ತು.
ಕೋವಿಡ್ ಸುರಕ್ಷತಾ ನಿರ್ಬಂಧಗಳನ್ನು ಅನುಸರಿಸುವಲ್ಲಿ ಜನರು ನಿರ್ಲಕ್ಷ್ಯ ಮಾಡುವುದನ್ನು ಮುಂದುವರೆಸಿದರೆ, ಲಾಕ್‌ಡೌನ್ ಹೇರುವುದು ಮಾತ್ರ ಉಳಿದಿರುವ ಆಯ್ಕೆಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು, ವೈದ್ಯರು ಮತ್ತು ಜಂಟಿ ಮತ್ತು ವಿಶೇಷ ಆಯುಕ್ತರು ಭಾಗವಹಿಸಿದ್ದ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿ ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಒಂದು ನರ್ಸಿಂಗ್ ಕಾಲೇಜ್ ಮತ್ತು ಇನ್ನೆರಡು ವಸತಿ ಸಂಕೀರ್ಣಗಳು ಸೇರಿ ಒಟ್ಟು ಮೂರು ಕೋವಿಡ್ ಕ್ಲಸ್ಟರ್‌ಗಳನ್ನು ಗುರುತಿಸಿದೆ.

ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್ ಹಾಕುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು, “ಕೋವಿಡ್ ಪ್ರೋಟೋಕಾಲ್‌ಗಳನ್ನು ಮೇಲ್ವಿಚಾರಣೆ ಮಾಡಲು ಹೆಚ್ಚಿನ ಸಂಖ್ಯೆಯ ಮಾರ್ಷಲ್‌ಗಳನ್ನು ತೊಡಗಿಸಿಕೊಳ್ಳಲು ನಾನು ನಮ್ಮ ಎಲ್ಲ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಪಾಸಿಟಿವ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಇದು ಶೇಕಡಾ 1.27 ರಷ್ಟಿದೆ, ಇದು ಆತಂಕಕಾರಿಯಲ್ಲ ಈ ಸಮಯದಲ್ಲಿ, ಕರ್ನಾಟಕದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಅಗತ್ಯವಿಲ್ಲ” ಎಂದಿದ್ದಾರೆ.

ಕೊವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸದಿದ್ದರೆ ಬೆಂಗಳೂರು ಮತ್ತೆ ತೊಂದರೆಗೆ ಒಳಗಾಗಬಹುದು ಎಂದು ಬಿಬಿಎಂಪಿ ಆಯುಕ್ತ ಸೋಮವಾರ ಎನ್‌ಡಿಟಿವಿಗೆ ತಿಳಿಸಿದ್ದಾರೆ.
“ನಗರದಲ್ಲಿ 1 ಕೋಟಿ 30 ಲಕ್ಷ ಜನಸಂಖ್ಯೆಯಿದ್ದು, ನಾವು ದಿನಕ್ಕೆ 200 ರಿಂದ 300 ರಷ್ಟು ಪ್ರಕರಣಗಳ ಏರಿಕೆಯನ್ನು ನೋಡುತ್ತಿದ್ದೇವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಪ್ರಕರಣಗಳಲ್ಲಿ ಹೆಚ್ಚಳವಿದೆ ಮತ್ತು ಈ ಎರಡು ರಾಜ್ಯಗಳೊಂದಿಗೆ ನಾವು ಗಡಿಗಳನ್ನು ಹಂಚಿಕೊಂಡಿದ್ದೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗಣನೀಯ ಸಂಖ್ಯೆಯಲ್ಲಿ ಗಡಿ ಪ್ರದೇಶಗಳಿಂದ ಬಂದವರಿದ್ದಾರೆ. ನಗರದ ಜನರು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿಲ್ಲ. ಜನರು ಕೋವಿಡ್-ಸೂಕ್ತವಾದ ನಡವಳಿಕೆಯನ್ನು ಅನುಸರಿಸದಿದ್ದರೆ, ಮುಂದಿನ ಕೆಲವು ದಿನಗಳಲ್ಲಿ ನಾವು ತೊಂದರೆಯಲ್ಲಿರಲಿದ್ದೇವೆ ಎಂದು ನಾವು ಒತ್ತಿ ಹೇಳುತ್ತಿದ್ದೇವೆ “ಎಂದು ಅವರು ಹೇಳಿದರು.
ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಶೇ 70 ರಷ್ಟು ಏರಿಕೆ ಕಂಡಿದೆ.


ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭಾರಿ ಸ್ಫೋಟ- 6 ಕಾರ್ಮಿಕರು ಸಾವು; ಮೂವರು ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...