Homeಕರ್ನಾಟಕಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

- Advertisement -
- Advertisement -

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದು ಧರ್ಮಸ್ಥಳ ಸೌಜನ್ಯ ಪ್ರಕರಣದ ಇಂಚಿಂಚೂ ಮಾಹಿತಿ ಹೊರಹಾಕಿದ ಸಮೀರ್ ಎಂಡಿ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ದೊಡ್ಡ ಸುದ್ದಿ ಮಾಡಿದ್ದರು. ದಿನ ಕಳೆದಂತೆ ಈ ವಿಡಿಯೋ ಸೆನ್ಸೇಷನ್ ಸೃಷ್ಟಿ ಮಾಡಿ ಕೋಟಿಗಟ್ಟಲೆ ವೀಕ್ಷಣೆ ಪಡೆದುಕೊಂಡಿತ್ತು. ಆ ನಂತರ ಕೆಲವು ದಿನಗಳ ಬಳಿಕ ಅದೇ ಧರ್ಮಸ್ಥಳದ ಕುರಿತಾಗಿ ಅಲ್ಲಿ ನಡೆದ ಕೊಲೆ ಅತ್ಯಾಚಾರ, ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಿಡಿಯೋ ಮಾಡಲಾಗಿತ್ತು.

ಈ ಎರಡನೇ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಧರ್ಮಸ್ಥಳ ಹಾರರ್‌ ಎಂಬ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಿದ್ದ ಸಮೀರ್‌ ಕೊಲೆಗಡುಕರು, ಅತ್ಯಾಚಾರಿಗಳ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ. ಆದರೆ ಇದೀಗ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಎಂಬ ವ್ಯಕ್ತಿಗಳು ಹತ್ತು ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಧರ್ಮಸ್ಥಳ ಹಾರರ್‌ ಹೆಸರಿನ ವಿಡಿಯೋವನ್ನು ಕೋರ್ಟ್‌ ಆದೇಶ ಉಲ್ಲೇಖಿಸಿ ಯೂಟ್ಯೂಬ್‌ ನಿಂದ ತೆಗೆದುಹಾಕಲಾಗಿತ್ತಾದರೂ, ಅದು ಭಾರತದಿಂದ ಹೊರಗಿನ ದೇಶಗಳಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆ. ಇದರ ಬೆನ್ನಲ್ಲೇ ಸಾಕ್ಷ್ಯ ನಾಶ ಎಂಬ ಎರಡನೇ ವಿಡಿಯೋವನ್ನು ಸಮೀರ್‌ ಬಿಡುಗಡೆ ಮಾಡಿದ್ದರು.

ಈ ವಿಡಿಯೋದಲ್ಲೂ ಕೊಲೆಗಡುಕರ, ಅತ್ಯಾಚಾರಿಗಳ ಹೆಸರುಗಳನ್ನು ಸಮೀರ್‌ ಉಲ್ಲೇಖಿಸಿರಲಿಲ್ಲ. ಆದರೆ ಡಿ.ಹರ್ಷೇಂದ್ರ ಕುಮಾರ್‌, ನಿಶ್ಚಲ್‌ ಡಿ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿರುವುದು ಅಚ್ಚರಿ ಮೂಡಿಸಿದೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದು, ವಿಡಿಯೋವನ್ನು ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಉಲ್ಲಂಘನೆ ನಂತರ 400,000 ಪ್ಯಾಲೆಸ್ಟೀನಿಯನ್ನರ  ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...