Homeಕರ್ನಾಟಕಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

- Advertisement -
- Advertisement -

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದು ಧರ್ಮಸ್ಥಳ ಸೌಜನ್ಯ ಪ್ರಕರಣದ ಇಂಚಿಂಚೂ ಮಾಹಿತಿ ಹೊರಹಾಕಿದ ಸಮೀರ್ ಎಂಡಿ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ದೊಡ್ಡ ಸುದ್ದಿ ಮಾಡಿದ್ದರು. ದಿನ ಕಳೆದಂತೆ ಈ ವಿಡಿಯೋ ಸೆನ್ಸೇಷನ್ ಸೃಷ್ಟಿ ಮಾಡಿ ಕೋಟಿಗಟ್ಟಲೆ ವೀಕ್ಷಣೆ ಪಡೆದುಕೊಂಡಿತ್ತು. ಆ ನಂತರ ಕೆಲವು ದಿನಗಳ ಬಳಿಕ ಅದೇ ಧರ್ಮಸ್ಥಳದ ಕುರಿತಾಗಿ ಅಲ್ಲಿ ನಡೆದ ಕೊಲೆ ಅತ್ಯಾಚಾರ, ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಿಡಿಯೋ ಮಾಡಲಾಗಿತ್ತು.

ಈ ಎರಡನೇ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಧರ್ಮಸ್ಥಳ ಹಾರರ್‌ ಎಂಬ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಿದ್ದ ಸಮೀರ್‌ ಕೊಲೆಗಡುಕರು, ಅತ್ಯಾಚಾರಿಗಳ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ. ಆದರೆ ಇದೀಗ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಎಂಬ ವ್ಯಕ್ತಿಗಳು ಹತ್ತು ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಧರ್ಮಸ್ಥಳ ಹಾರರ್‌ ಹೆಸರಿನ ವಿಡಿಯೋವನ್ನು ಕೋರ್ಟ್‌ ಆದೇಶ ಉಲ್ಲೇಖಿಸಿ ಯೂಟ್ಯೂಬ್‌ ನಿಂದ ತೆಗೆದುಹಾಕಲಾಗಿತ್ತಾದರೂ, ಅದು ಭಾರತದಿಂದ ಹೊರಗಿನ ದೇಶಗಳಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆ. ಇದರ ಬೆನ್ನಲ್ಲೇ ಸಾಕ್ಷ್ಯ ನಾಶ ಎಂಬ ಎರಡನೇ ವಿಡಿಯೋವನ್ನು ಸಮೀರ್‌ ಬಿಡುಗಡೆ ಮಾಡಿದ್ದರು.

ಈ ವಿಡಿಯೋದಲ್ಲೂ ಕೊಲೆಗಡುಕರ, ಅತ್ಯಾಚಾರಿಗಳ ಹೆಸರುಗಳನ್ನು ಸಮೀರ್‌ ಉಲ್ಲೇಖಿಸಿರಲಿಲ್ಲ. ಆದರೆ ಡಿ.ಹರ್ಷೇಂದ್ರ ಕುಮಾರ್‌, ನಿಶ್ಚಲ್‌ ಡಿ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿರುವುದು ಅಚ್ಚರಿ ಮೂಡಿಸಿದೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದು, ವಿಡಿಯೋವನ್ನು ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಉಲ್ಲಂಘನೆ ನಂತರ 400,000 ಪ್ಯಾಲೆಸ್ಟೀನಿಯನ್ನರ  ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...