Homeಕರ್ನಾಟಕಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

- Advertisement -
- Advertisement -

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದು ಧರ್ಮಸ್ಥಳ ಸೌಜನ್ಯ ಪ್ರಕರಣದ ಇಂಚಿಂಚೂ ಮಾಹಿತಿ ಹೊರಹಾಕಿದ ಸಮೀರ್ ಎಂಡಿ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ದೊಡ್ಡ ಸುದ್ದಿ ಮಾಡಿದ್ದರು. ದಿನ ಕಳೆದಂತೆ ಈ ವಿಡಿಯೋ ಸೆನ್ಸೇಷನ್ ಸೃಷ್ಟಿ ಮಾಡಿ ಕೋಟಿಗಟ್ಟಲೆ ವೀಕ್ಷಣೆ ಪಡೆದುಕೊಂಡಿತ್ತು. ಆ ನಂತರ ಕೆಲವು ದಿನಗಳ ಬಳಿಕ ಅದೇ ಧರ್ಮಸ್ಥಳದ ಕುರಿತಾಗಿ ಅಲ್ಲಿ ನಡೆದ ಕೊಲೆ ಅತ್ಯಾಚಾರ, ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಿಡಿಯೋ ಮಾಡಲಾಗಿತ್ತು.

ಈ ಎರಡನೇ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಧರ್ಮಸ್ಥಳ ಹಾರರ್‌ ಎಂಬ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಮಾಡಿದ್ದ ಸಮೀರ್‌ ಕೊಲೆಗಡುಕರು, ಅತ್ಯಾಚಾರಿಗಳ ಹೆಸರನ್ನು ಪ್ರಸ್ತಾಪ ಮಾಡಿರಲಿಲ್ಲ. ಆದರೆ ಇದೀಗ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಎಂಬ ವ್ಯಕ್ತಿಗಳು ಹತ್ತು ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಧರ್ಮಸ್ಥಳ ಹಾರರ್‌ ಹೆಸರಿನ ವಿಡಿಯೋವನ್ನು ಕೋರ್ಟ್‌ ಆದೇಶ ಉಲ್ಲೇಖಿಸಿ ಯೂಟ್ಯೂಬ್‌ ನಿಂದ ತೆಗೆದುಹಾಕಲಾಗಿತ್ತಾದರೂ, ಅದು ಭಾರತದಿಂದ ಹೊರಗಿನ ದೇಶಗಳಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆ. ಇದರ ಬೆನ್ನಲ್ಲೇ ಸಾಕ್ಷ್ಯ ನಾಶ ಎಂಬ ಎರಡನೇ ವಿಡಿಯೋವನ್ನು ಸಮೀರ್‌ ಬಿಡುಗಡೆ ಮಾಡಿದ್ದರು.

ಈ ವಿಡಿಯೋದಲ್ಲೂ ಕೊಲೆಗಡುಕರ, ಅತ್ಯಾಚಾರಿಗಳ ಹೆಸರುಗಳನ್ನು ಸಮೀರ್‌ ಉಲ್ಲೇಖಿಸಿರಲಿಲ್ಲ. ಆದರೆ ಡಿ.ಹರ್ಷೇಂದ್ರ ಕುಮಾರ್‌, ನಿಶ್ಚಲ್‌ ಡಿ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿರುವುದು ಅಚ್ಚರಿ ಮೂಡಿಸಿದೆ.

ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆಯನ್ನು ನೀಡಿದ್ದು, ವಿಡಿಯೋವನ್ನು ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶರಾದ ಎಸ್. ನಟರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಉಲ್ಲಂಘನೆ ನಂತರ 400,000 ಪ್ಯಾಲೆಸ್ಟೀನಿಯನ್ನರ  ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...