Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...