Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...