Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...