Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...