Homeಮುಖಪುಟತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

ತಮಿಳುನಾಡು: ಗುಂಪು ದಾಳಿ; ದಲಿತ ಸಮುದಾಯದ 10 ಮಂದಿಗೆ ಗಾಯ

- Advertisement -
- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೊಕ್ಕಡಿ ಗ್ರಾಮದಲ್ಲಿ ಎಐಎಡಿಎಂಕೆಯ ಪಂಚಾಯತ್ ಸದಸ್ಯೆ ಮತ್ತು ಆಕೆಯ ಪತಿ ಸೇರಿದಂತೆ ಜನರ ಗುಂಪು ನಡೆಸಿದ ದಾಳಿಯಲ್ಲಿ ದಲಿತ ಸಮುದಾಯದ  10 ಮಂದಿ ಗಾಯಗೊಂಡಿದ್ದಾರೆ.

ದಲಿತ ಸಮುದಾಯದ ಜನರು ತಮ್ಮ ವಸತಿ ಪ್ರದೇಶದ ಬಳಿ ಕಲ್ಲು ಪಾಲಿಶ್ ಮಾಡುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿದ ಬಳಿಕ ಸಂಘರ್ಷಗಳು ನಡೆದಿದೆ. ಎಐಎಡಿಎಂಕೆಯ ಕೃಷ್ಣಗಿರಿ ವೆಸ್ಟ್ ಯೂನಿಯನ್ ಕಾರ್ಯದರ್ಶಿ ಸೊಕ್ಕಡಿ ರಾಜನ್, ಪಂಚಾಯತ್ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರು ಜಾತಿ ನಿಂದನೆಗಳನ್ನು ಮಾಡಿದ್ದು, ಬಳಿಕ ದಲಿತರ ಮೇಲೆ ಕಲ್ಲು ತೂರಾಟ ಮಾಡಲು ಜನರನ್ನು ಪ್ರೇರೇಪಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೊಕ್ಕಡಿ ರಾಜನ್ ಮತ್ತು ರಾಮಲಿಂಗಂ ವಿರುದ್ಧ ಪೊಲೀಸರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

120ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುವ ಗ್ರಾಮದಲ್ಲಿ ಕಲ್ಲು ಪಾಲಿಶ್ ಮಾಡುವುದನ್ನು ಸ್ಥಳೀಯರು ವಿರೋಧಿಸಿದ್ದಾರೆ. ಇದರಿಂದ ಆರೋಗ್ಯ ಸಂಬಂಧಿತ ಸಮಸ್ಯೆಯಾಗುತ್ತದೆ ಎಂದು ಹೇಳಿದ್ದರು. ಇದರಿಂದ ಕೋಪಗೊಂಡು ದಲಿತರು ವಾಸಿಸುತ್ತಿದ್ದ ವಸತಿ ಪ್ರದೇಶದಲ್ಲಿ ಕಲ್ಲು ತೂರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸೊಕ್ಕಾಡಿಯ ದಲಿತ ನಿವಾಸಿಯೊಬ್ಬರು ಮಾತನಾಡಿ, ಅ.29ರಂದು ಕೆಲವು ಯುವಕರು ತಮ್ಮ ಮನೆಗೆ ಕಲ್ಲಿನ ಧೂಳು ಬಂದು ಆರೋಗ್ಯ ಸಮಸ್ಯೆಯಾಗುತ್ತದೆ. ಇದರಿಂದ  ಕಲ್ಲು ಪಾಲಿಶ್ ನಿಲ್ಲಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಿದ್ದರು. ಇದಾದ ಕೆಲವೇ ಸಮಯದಲ್ಲಿ ಸ್ಥಳಕ್ಕೆ ಬಂದ ಸೊಕ್ಕಾಡಿ ರಾಜನ್ ಅಲ್ಲಿದ್ದ ಜನರಿಗೆ ಜಾತಿ ನಿಂದನೆ ಮಾಡಿದ್ದರು. ಆ ಬಳಿಕ ವಾಗ್ವಾದ ನಡೆದು ಗ್ರಾಮದಲ್ಲಿ 30 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಆದರೆ ತಡರಾತ್ರಿ ಸೊಕ್ಕಡಿ ರಾಜನ್‌, ಪಂಚಾಯತ್‌ ನಾಯಕಿ ಕೋಡಿಲ ರಾಮಲಿಂಗಂ ಮತ್ತು ಅವರ ಪತಿ ರಾಮಲಿಂಗಂ ಅವರೊಂದಿಗೆ ವೆಲ್ಲಾಲ ಗೌಂಡರ್‌ ಜನರು ಬಂದು ದಲಿತರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಎರಡೂ ಕಡೆಯ 23 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರಲ್ಲಿ 13 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಗ್ರಾಮದ ಇನ್ನೋರ್ವ ವ್ಯಕ್ತಿ ಮಾತನಾಡಿದ್ದು, ಮೂರು ತಿಂಗಳ ಹಿಂದೆ ಗ್ರಾಮದಲ್ಲಿ ಕಲ್ಲಿನ ಪಾಲಿಶ್ ಮಾಡುವ ಕೆಲಸ ಪ್ರಾರಂಭಿಸಿದ್ದರು. ಹಲವು ಬಾರಿ ನಾವು ಮನೆಗಳಿಗೆ ಧೂಳು ಹರಡದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೆವು. ಮನೆಯ ಆಹಾರ, ನೀರು ಎಲ್ಲಾ ದೂಳಲ್ಲಿ ಮುಳುಗುತ್ತದೆ. ನಮ್ಮ ಮನವಿಯನ್ನು ಅವರು ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ.

ಹರೂರಿನ ಸಿಪಿಐ(ಎಂ) ಮಾಜಿ ಶಾಸಕ ಡಿಲ್ಲಿ ಬಾಬು ಈ ಕುರಿತು ಮಾತನಾಡಿದ್ದು, ಈ ಸಮಸ್ಯೆ ಉಲ್ಬಣಗೊಂಡಾಗ ಪೊಲೀಸರು ದಲಿತರಿಗೆ ಯಾವುದೇ ರಕ್ಷಣೆ ನೀಡಲಿಲ್ಲ. ಇದು ಪೊಲೀಸರ ಸಮ್ಮುಖದಲ್ಲಿ ನಡೆದಿರುವುದು ಆಶ್ಚರ್ಯಕರವಾಗಿದೆ ಮತ್ತು ಈಗ ಪೊಲೀಸರು ದಾಳಿಕೋರರು ಮತ್ತು ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರೂ ಪರಿಸ್ಥಿತಿ ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...