Homeಕರೋನಾ ತಲ್ಲಣದೇಶದ ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ 10 ಜಿಲ್ಲೆಗಳಲ್ಲಿ 8 ಮಹಾರಾಷ್ಟ್ರಕ್ಕೆ ಸೇರಿದವು- ಆರೋಗ್ಯ ಇಲಾಖೆ

ದೇಶದ ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ 10 ಜಿಲ್ಲೆಗಳಲ್ಲಿ 8 ಮಹಾರಾಷ್ಟ್ರಕ್ಕೆ ಸೇರಿದವು- ಆರೋಗ್ಯ ಇಲಾಖೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ದಿನೇ ದಿನೇ ಅಧಿಕಗೊಳ್ಳುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ 8 ಜಿಲ್ಲೆಗಳು ಮಹಾರಾಷ್ಟ್ರದಲ್ಲಿಯೇ ಇವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ. ದೇಶದ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಹೆಚ್ಚು ಪಾಲು ಹೊಂದಿದೆ ಎಂದಿದ್ದಾರೆ.

“ದೇಶಾದ್ಯಂತ ಪುಣೆ, ಮುಂಬೈ, ನಾಗ್ಪುರ, ಥಾಣೆ, ನಾಸಿಕ್, ಔರಂಗಾಬಾದ್, ಬೆಂಗಳೂರು ನಗರ, ನಾಂದೇಡ್, ದೆಹಲಿ ಮತ್ತು ಅಹ್ಮದ್‌ನಗರಗಳು ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಾಗಿವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

RT-PCR ಪರೀಕ್ಷೆಗಳನ್ನು ಹೆಚ್ಚಿಸಲು, ಸೋಂಕಿತರನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಪ್ರತ್ಯೇಕಿಸಲು, ಅವರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಲು ಅವಶ್ಯಕ ಕ್ರಮಗಳನ್ನು ರಾಜ್ಯ ಸರ್ಕಾರಗಳು ಮಾಡಬೇಕು ಎಂದಿದೆ. ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ಸಾರ್ವಜನಿಕರಿಗೆ ತಿಳಿಸುವುದು ಮತ್ತು ಲಸಿಕೆ ವಿತರಣೆಯನ್ನು ಸಮರ್ಪಕವಾಗಿ ಮಾಡಲು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಆದರೆ, ಇಲ್ಲಿಯವರೆಗೆ ನಾವು ಮಹಾರಾಷ್ಟ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಮನವಿ ಸ್ವೀಕರಿಸಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಜನ ಸೇರುವುದನ್ನು ತಡೆಯಲಾಗಿದೆ. ಕೊರೊನಾ ನಿಯಮಗಳ ಪಾಲನೆ ಕಡ್ಡಾಯ ಮಾಡಲಾಗಿದೆ.

ಜನರು ಕೊರೊನಾ ನಿಯಮಾವಳಿಗಳನ್ನು ಅನುಸರಿಸದ ಕಾರಣ ಲಾಕ್‌ಡೌನ್ ವಿಧಿಸುವ ಯೋಜನೆಯನ್ನು ಸಿದ್ಧಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಭಾನುವಾರ ಸಿಎಂ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...