Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...