Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...