Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...