Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...