Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...