Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...