Homeಮುಖಪುಟ45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ "ಅಸ್ಪೃಶ್ಯತಾ ಗೋಡೆ"

45 ದಲಿತ ಕುಟುಂಬ ಮತ್ತು ಶೌಚಾಲಯದ ನಡುವೆ 10 ಅಡಿ ಎತ್ತರದ “ಅಸ್ಪೃಶ್ಯತಾ ಗೋಡೆ”

- Advertisement -
- Advertisement -

ವಿರುಧುನಗರ: ಚೆಯ್ಯಕೋಡಿ ಎಂಬ ಮಹಿಳೆ ಶೌಚಾಲಯಕ್ಕಾಗಿ ಪ್ರತಿದಿನ ಬೆಳಿಗ್ಗೆ 10 ನಿಮಿಷಗಳಿಗೂ ಹೆಚ್ಚು ಕಾಲ ಬಂಜರು ಭೂಮಿಗೆ ನಡೆದುಕೊಂಡು ಹೋಗುತ್ತಾಳೆ. ಒಂದು ಕಲ್ಲು ಎಸೆಯುವಷ್ಟು ದೂರದಲ್ಲಿರುವ ಶೌಚಾಲಯಕ್ಕೆ ಹೋಗುವುದಕ್ಕಾಗಿ ಇಷ್ಟು ಸಮಯ ಬೇಕಾಗಿರುವುದಕ್ಕೆ “ಅಸ್ಪೃಶ್ಯತಾ ಗೋಡೆ”  ಕಾರಣವಾಗಿದೆ.

ಇಷ್ಟು ಮಾತ್ರವಲ್ಲ ಹತ್ತಿರದ ಕೊಳಕ್ಕೆ ಹೋಗಿ ಒಂದು ಚೊಂಬು ನೀರು ತರಬೇಕಿದೆ. ಈ ಸಾರ್ವಜನಿಕ ಶೌಚಾಲಯವು ಅವಳ ಮನೆಯಿಂದ ಸ್ವಲ್ಪ ದೂರದಲ್ಲಿದೆ, ಆದರೆ ಅದು ಸುಮಾರು ಐದು ಮೀಟರ್ ಉದ್ದದ 10 ಅಡಿ ಎತ್ತರದ ಗೋಡೆಯ ಹಿಂದೆ ಇದೆ. ಈ ಗೋಡೆ ಇಡೀ ಹಳ್ಳಿಯನ್ನೇ ಮರೆಮಾಡುತ್ತದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಡಬ್ಲ್ಯೂ ಪುದುಪಟ್ಟಿ ಗ್ರಾಮದ ಗ್ರಾಮಸ್ಥರು ಇದನ್ನು ಕರೆಯುವಂತೆ ಇದು “ಅಸ್ಪೃಶ್ಯತಾ ಗೋಡೆ” ಯಾಗಿದೆ ಮತ್ತು ದೇಶದಲ್ಲಿ ಜಾತಿ ತಾರತಮ್ಯದ ನಿಷೇಧದ ಹೊರತಾಗಿಯೂ ಮುಂದುವರಿದಿರುವ ಆಳವಾಗಿ ಬೇರೂರಿರುವ ಜಾತಿ ಪ್ರತ್ಯೇಕತೆಯ ಸಂಕೇತವು ಆಗಿದೆ.

2010ರಲ್ಲಿ ಗ್ರಾಮದ ಮೇಲ್ಜಾತಿಯ ಸಾಲಿಯಾರ್ ಸಮುದಾಯದಿಂದ ನಿರ್ಮಿಸಲ್ಪಟ್ಟ ಈ ಗೋಡೆಯು, ಹಳ್ಳಿಯ ಸಾಲಿಯಾರ್ ಬದಿಯಲ್ಲಿರುವ ಸುಮಾರು 45 ದಲಿತ ಕ್ರಿಶ್ಚಿಯನ್ ಕುಟುಂಬಗಳು ಈ ಸಾರ್ವಜನಿಕ ಶೌಚಾಲಯ ಬಳಕೆ ಮಾಡಿದಾಗ ಸ್ಥಳೀಯ ಅನುದಾನಿತ ಶಾಲೆ ಅಥವಾ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಬಳಸುವುದನ್ನು ತಡೆಯುತ್ತದೆ.

“ಇದು ನಿಜವಾಗಿಯೂ ನೋವಿನ ಸಂಗತಿ, ಆದರೆ ನಮಗೆ ಏನು ಮಾಡಲು ಸಾಧ್ಯ? ನಮ್ಮ ನೆರೆಹೊರೆಯಲ್ಲಿ ನಡೆಯುವುದನ್ನು ನಾನು ಹೇಳಲು ಇಷ್ಟಪಡುವುದಿಲ್ಲ” ಎಂದು ಚೆಯ್ಯಕೋಡಿ ಎಂಬ ಮಹಿಳೆ ತನ್ನ ಹೆಂಚಿನ ಹುಲ್ಲಿನ ಮನೆಯ ಹೊರಗಿನ ಡಾಂಬರು ಹಾಕದ ಬೀದಿಯಲ್ಲಿ ಕುಳಿತು, ತನ್ನ ಇಬ್ಬರು ನೆರೆಹೊರೆಯವರೊಂದಿಗೆ  ಕಾಗದದಲ್ಲಿ ಬತ್ತಿಗಳನ್ನು ಉರುಳಿಸುತ್ತಾ ತನ್ನ ಅಳಲನ್ನು ತೋಡಿಕೊಂಡರು.

ಈ ಸಂಬಂಧ ದಲಿತ ಕುಟುಂಬಗಳು ಹಲವಾರು ದೂರುಗಳನ್ನು ದಾಖಲಿಸಿವೆ ಮತ್ತು ಸಾರ್ವಜನಿಕ ಆಸ್ತಿಯ ಮೇಲೆ ನಿರ್ಮಿಸಿರುವ ಈ “ಅಸ್ಪೃಶ್ಯತಾ ಗೋಡೆ”ಯನ್ನು ಕೆಡವಲು ಅಧಿಕಾರಿಗಳನ್ನು ಒತ್ತಾಯಿಸಲು ಪ್ರತಿಭಟನೆಗಳನ್ನು ನಡೆಸಿವೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಜೂನ್ 2023ರಲ್ಲಿ ಈ ಗ್ರಾಮದ ವ್ಯಾಪ್ತಿಗೆ ಬರುವ ವಾಟ್ರಾಪ್ ತಾಲ್ಲೂಕಿನ ಅಂದಿನ ತಹಶೀಲ್ದಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗೆ (VAO) ನಿರ್ದೇಶನ ನೀಡಿದ್ದರು. ಆದಾಗ್ಯೂ ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ದಲಿತರು ಇಲ್ಲಿಯವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಹೇಳುತ್ತಾರೆ.

ಡಬ್ಲ್ಯೂ ಪುದುಪಟ್ಟಿಯ ಗ್ರಾಮದ ಆಡಳಿತ ಅಧಿಕಾರಿ ಆರ್.ನಾರಾಯಣಕುಮಾರ್, ಈ ವಿಷಯವು ನ್ಯಾಯಾಲಯದಲ್ಲಿದೆ ಎಂದು ಹೇಳಿ ಈ ಕುರಿತು ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ, ಆದ್ದರಿಂದ ನಾನು ಅದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಲು ಸಾಧ್ಯವಿಲ್ಲ” ಎಂದು ಅವರು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾರಾಯಣಕುಮಾರ್ ಉಲ್ಲೇಖಿಸುತ್ತಿರುವ ನ್ಯಾಯಾಲಯದ ಪ್ರಕರಣವು ಮದ್ರಾಸ್ ಹೈಕೋರ್ಟ್‌ನಲ್ಲಿ ಗ್ರಾಮದ ನಿವಾಸಿ ಮತ್ತು ಸರ್ಕಾರಿ ಸ್ವಾಮ್ಯದ ಭಾರತಿಯಾರ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ಎ. ಪ್ರಕಾಶ್ ಸಲ್ಲಿಸಿದ ಅರ್ಜಿಯಾಗಿದೆ.

32 ವರ್ಷದ ಇವರನ್ನು ಜೂನ್ 2023ರಲ್ಲಿ ಗೋಡೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಲಾಯಿತು ಮತ್ತು ಜುಲೈ 2023ರಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಷಯದ ಬಗ್ಗೆ ತಮಗೆ ತಿಳಿದಿಲ್ಲ, ಕಾನೂನಿನ ಅಡಿಯಲ್ಲಿ ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಲಾಗಿದೆ. ಈ ವಿಷಯದ ಬಗ್ಗೆ ನನಗೆ ಇನ್ನೂ ದೂರು ಬಂದಿಲ್ಲ ಅಥವಾ ನನಗೆ ಅದರ ಬಗ್ಗೆ ತಿಳಿದಿಲ್ಲ ಎಂದು ವಿರುಧುನಗರ ಜಿಲ್ಲಾಧಿಕಾರಿ ಡಾ. ವಿ.ಪಿ.ಜಯಶೀಲನ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಗೋಡೆಯ ಇನ್ನೊಂದು ಬದಿಯಲ್ಲಿರುವ ಸಾಲಿಯಾರ್ ಸಮುದಾಯವು  ಹೆಚ್ಚಾಗಿ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿದೆ. ಸರ್ಕಾರಿ ಅನುದಾನಿತ ಬಾಲಸುಬ್ರಮಣಿಯರ್ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮದೇ ಆದ ಆಸ್ತಿಯ ಮೇಲೆ ಗೋಡೆಯನ್ನು ನಿರ್ಮಿಸಲಾಗಿರುವುದರಿಂದ ಅದರ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದು ಹೇಳಿದೆ.

ಯಾರಾದರೂ ಅಥವಾ ಯಾವುದಾದರೂ ಪ್ರಾಣಿ ಇನ್ನೊಂದು ಕಡೆಯಿಂದ ಬಂದರೆ ಏನು ಮಾಡುವುದು. ಸಮುದಾಯವು ತಮ್ಮ ಶಾಲೆ ಮತ್ತು ಜಮೀನಿನಲ್ಲಿ ಗೋಡೆಯನ್ನು ನಿರ್ಮಿಸಿದೆ. ಸರ್ಕಾರವು ಶಿಕ್ಷಕರಿಗೆ ಸಂಬಳವನ್ನು ಮಾತ್ರ ಪಾವತಿಸುತ್ತಿದೆ ಎಂದು ಸಾಲಿಯಾರ್ ಸಮುದಾಯದ 55 ವರ್ಷದ ಸುಂದರಾನಂದಮ್ ಹೇಳುತ್ತಾರೆ.

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...