Homeಕರ್ನಾಟಕ10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

“ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ‘ಅನ್ನಭಾಗ್ಯ’ದ ಪ್ರಭಾವ ಕಂಡು ಮಾತಿನ ವರಸೆ ಬದಲಿಸಿಕೊಂಡಿದ್ದುಂಟು.

- Advertisement -
- Advertisement -

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಉಳಿದೆಲ್ಲ ಗ್ಯಾರಂಟಿಗಳಿಗಿಂತ ‘ಅನ್ನಭಾಗ್ಯ’ ಯೋಜನೆಯ ಪ್ರಸ್ತಾಪ ಬಿಜೆಪಿಯ ನಿದ್ದೆಗೆಡಿಸಿರುವಂತೆ ಕಾಣುತ್ತಿದೆ. ‘ಅನ್ನಭಾಗ್ಯ’ದ ಅಕ್ಕಿಯನ್ನು ಮೋದಿ ಸರ್ಕಾರ ಕೊಡುತ್ತಿದೆ ಎಂದು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ.

ಮೇ 13, 2013ರಂದು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭವರಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಅಂದೇ ಘೋಷಣೆ ಮಾಡಿದರು. ಹಸಿವು ಮುಕ್ತ ರಾಜ್ಯ ಮಾಡುವ ಕನಸಿನ ಕುರಿತು ಸಿದ್ದರಾಮಯ್ಯನವರು ಅನೇಕ ಸಲ ಹೇಳಿಕೊಂಡಿದ್ದಾರೆ.

ಹಸಿರು ಕಾಂತ್ರಿಯ ಹರಿಕಾರರೆಂದೇ ಪ್ರಖ್ಯಾತರಾಗಿರುವ ಬಾಬು ಜಗಜೀವನರಾಮ್‌ ಅವರು ಕೃಷಿ ಮತ್ತು ಆಹಾರ ಸಚಿವರಾಗಿದ್ದ ಸಮಯದಲ್ಲಿ, “ನನ್ನ ಆಡಳಿತದಲ್ಲಿ ಅನ್ನಕ್ಕಾಗಿ ಕಳ್ಳತನ ನಡೆಸಿದರೆ ಶಿಕ್ಷೆ ಇಲ್ಲ. ಯಾಕೆಂದರೆ ಅನ್ನ ಕೊಡಲು ಸರ್ಕಾರ ವಿಫಲವಾಗಿದೆ ಎಂದರೆ ಅನ್ನಕ್ಕಾಗಿ ಕಳ್ಳತನ ನಡೆಸಿದವರಿಗೆ ಶಿಕ್ಷೆ ನೀಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ” ಎಂದಿದ್ದರು. ಹಸಿವು ಮನುಷ್ಯನ ಮೂಲಭೂತ ಸಮಸ್ಯೆ. ಹೀಗಾಗಿ ಸಿದ್ದರಾಮಯ್ಯನವರ ಜಾರಿಗೆ ತಂದ ‘ಅನ್ನಭಾಗ್ಯ’ ಭಾರೀ ಜನಪ್ರಿಯತೆಯನ್ನು ಗಳಿಸಿತು.

ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆ ಚಾಲ್ತಿಗೆ ಬಂದು. ಈ ಯೋಜನೆಯ ಜಾರಿಯಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸಲಾಗುವ ಪಡಿತರ ಪ್ರಮಾಣವನ್ನು ಹೆಚ್ಚಿಸಲಾಯಿತು. ಈ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಿಸಲಾಗುತಿತ್ತು. ಹೊಸ ಯೋಜನೆಯಡಿ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರಧಾನ್ಯವನ್ನು ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ಹಂಚಿಕೆ ಮಾಡಲಾಯಿತು. 7 ಮತ್ತು ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಅನ್ವಯವಾಗುವಂತೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 05 ಕೆ.ಜಿ ಆಹಾರಧಾನ್ಯವನ್ನು ನವೆಂಬರ್-1, 2013 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಯಿತು.

ಒಂದು ಮಾಹಿತಿಯ ಪ್ರಕಾರ, “ಬಡತನರೇಖೆಗಿಂತ ಕೆಳಗಿರುವ 1.08 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಈ ಯೋಜನೆಯನ್ನು ಎಪಿಎಲ್ ಪಡಿತರ ಚೀಟಿದಾರರಿಗೂ ವಿಸ್ತರಿಸಿದ್ದರಿಂದ ಒಟ್ಟು 3.85 ಮಂದಿ ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ”.

ಈಗ ಅನ್ನಭಾಗ್ಯ ಮತ್ತೆ ಸುದ್ದಿಯಲ್ಲಿದೆ. ಆಡಳಿತರೂಢ ಬಿಜೆಪಿ ಸರ್ಕಾರ ಪಡಿತರ ಅಕ್ಕಿಯನ್ನು ಕಡಿತ ಮಾಡಿದೆ ಎಂಬ ಆರೋಪಗಳು ಬಂದಿವೆ. ಹತ್ತು ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ.ಯನ್ನು ನೀಡುತ್ತಿದ್ದಾರೆಂದು ಬಡ ಜನರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗ್ಯಾರಂಟಿಯಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮಹತ್ವ ಪಡೆದಿದೆ.

ಆರೋಗ್ಯ ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಅಂದು ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯನವರು, “ರೂ.2,65,000 ಕೋಟಿ ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?” ಎಂದು ಪ್ರಶ್ನಿಸಿದ್ದರು.

ಆದರೆ ಅನ್ನಭಾಗ್ಯದ ಜನಪ್ರಿಯತೆ ಮಾತ್ರ ಕುಂದಿಲ್ಲ. “ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ಆನಂತರದಲ್ಲಿ ‘ಅನ್ನಭಾಗ್ಯ’ದ ಪ್ರಭಾವವನ್ನು ಕಂಡು ತಮ್ಮ ಮಾತಿನ ವರಸೆ ಬದಲಿಸಿಕೊಂಡಿದ್ದುಂಟು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇತ್ತೀಚಿಗೆ ಮಾಡಿರುವ ಟ್ವೀಟ್‌ ಈ ಹಿನ್ನೆಲೆಯಲ್ಲಿ ಗಮನಿಸಬಹುದು.

“ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ತನ್ನ ಹೆಸರನ್ನು ಹಾಕಿ ನಾನು ಅಕ್ಕಿ ಕೊಟ್ಟೆ ಅಂತ ಎಲ್ಲಾ ಕಡೆ ಪ್ರಚಾರ ಮಾಡಿ ತಿರುಗಾಡಿತು. ಆದರೆ ಕರುನಾಡ ಜನತೆ ಅನ್ನ ಕೊಟ್ಟವರನ್ನು ಎಂದಿಗೂ ಮರೆಯುವುದಿಲ್ಲ. ಅನ್ನ ಕೊಟ್ಟ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಮತ್ತೆ ಗೆಲ್ಲಿಸಲು ಜನರು ಕಟಿಬ‌ದ್ಧರಾಗಿದ್ದಾರೆ” ಎಂಬ ಟಿಪ್ಪಣಿಯೊಂದಿಗೆ ಬಿಜೆಪಿಯ ಜಾಹೀರಾತನ್ನು ಟ್ವಿಟರ್‌ನಲ್ಲಿ ಸಿ.ಟಿ.ರವಿ ಹಂಚಿಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಕಟುವಾದ ಪದಗಳಿಂದ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಸಿ.ಟಿ.ರವಿ ಅವರಿಗೆ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ದಿನ ಬೆಳಗಾದರೆ ಇನ್ನೊಬ್ಬರ ಬಗ್ಗೆ ಕೀಳಾಗಿ ಮತ್ತು ಪ್ರಚೋದನಾತ್ಮಕವಾಗಿ ಮಾತನಾಡುವ ಪ್ರವೃತ್ತಿ ಇರುವ ಸಿ.ಟಿ.ರವಿಯವರು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ. ಆದರೆ 2013ರಲ್ಲಿ ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನ್ಯಾಷನಲ್ ಫುಡ್‌ ಸೆಕ್ಯುರಿಟಿ ಆಕ್ಟ್ ಜಾರಿಗೆ ತಂದಿತು. ಸೋನಿಯಾ ಗಾಂಧಿಯವರು ಹಠ ಹಿಡಿದು ಈ ಕಾಯ್ದೆ ಜಾರಿಗೊಳಿಸಿದ್ದರು. ಇದರ ಅಡಿಯಲ್ಲಿ ಅಕ್ಕಿ ಹಂಚಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿತು. ಅನ್ನಭಾಗ್ಯದ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನಾವೇ ಅನ್ನಭಾಗ್ಯ ತಂದಿದ್ದು ಎನ್ನುತ್ತಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಜಾರಿಗೊಳಿಸಿದ ಜನಪ್ರಿಯ ಕಾರ್ಯಕ್ರಮ ಎಂಬುದನ್ನು ನಾಡಿನ ಪ್ರಜ್ಞಾವಂತರೆಲ್ಲರೂ ಒಪ್ಪುತ್ತಾರೆ. ಹೀಗಾಗಿ ಹತ್ತು ಕೆ.ಜಿ. ಅಕ್ಕಿ ಗ್ಯಾರಂಟಿಯು ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...