Homeಕರ್ನಾಟಕ10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

“ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ‘ಅನ್ನಭಾಗ್ಯ’ದ ಪ್ರಭಾವ ಕಂಡು ಮಾತಿನ ವರಸೆ ಬದಲಿಸಿಕೊಂಡಿದ್ದುಂಟು.

- Advertisement -
- Advertisement -

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಉಳಿದೆಲ್ಲ ಗ್ಯಾರಂಟಿಗಳಿಗಿಂತ ‘ಅನ್ನಭಾಗ್ಯ’ ಯೋಜನೆಯ ಪ್ರಸ್ತಾಪ ಬಿಜೆಪಿಯ ನಿದ್ದೆಗೆಡಿಸಿರುವಂತೆ ಕಾಣುತ್ತಿದೆ. ‘ಅನ್ನಭಾಗ್ಯ’ದ ಅಕ್ಕಿಯನ್ನು ಮೋದಿ ಸರ್ಕಾರ ಕೊಡುತ್ತಿದೆ ಎಂದು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ.

ಮೇ 13, 2013ರಂದು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭವರಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಅಂದೇ ಘೋಷಣೆ ಮಾಡಿದರು. ಹಸಿವು ಮುಕ್ತ ರಾಜ್ಯ ಮಾಡುವ ಕನಸಿನ ಕುರಿತು ಸಿದ್ದರಾಮಯ್ಯನವರು ಅನೇಕ ಸಲ ಹೇಳಿಕೊಂಡಿದ್ದಾರೆ.

ಹಸಿರು ಕಾಂತ್ರಿಯ ಹರಿಕಾರರೆಂದೇ ಪ್ರಖ್ಯಾತರಾಗಿರುವ ಬಾಬು ಜಗಜೀವನರಾಮ್‌ ಅವರು ಕೃಷಿ ಮತ್ತು ಆಹಾರ ಸಚಿವರಾಗಿದ್ದ ಸಮಯದಲ್ಲಿ, “ನನ್ನ ಆಡಳಿತದಲ್ಲಿ ಅನ್ನಕ್ಕಾಗಿ ಕಳ್ಳತನ ನಡೆಸಿದರೆ ಶಿಕ್ಷೆ ಇಲ್ಲ. ಯಾಕೆಂದರೆ ಅನ್ನ ಕೊಡಲು ಸರ್ಕಾರ ವಿಫಲವಾಗಿದೆ ಎಂದರೆ ಅನ್ನಕ್ಕಾಗಿ ಕಳ್ಳತನ ನಡೆಸಿದವರಿಗೆ ಶಿಕ್ಷೆ ನೀಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ” ಎಂದಿದ್ದರು. ಹಸಿವು ಮನುಷ್ಯನ ಮೂಲಭೂತ ಸಮಸ್ಯೆ. ಹೀಗಾಗಿ ಸಿದ್ದರಾಮಯ್ಯನವರ ಜಾರಿಗೆ ತಂದ ‘ಅನ್ನಭಾಗ್ಯ’ ಭಾರೀ ಜನಪ್ರಿಯತೆಯನ್ನು ಗಳಿಸಿತು.

ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆ ಚಾಲ್ತಿಗೆ ಬಂದು. ಈ ಯೋಜನೆಯ ಜಾರಿಯಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸಲಾಗುವ ಪಡಿತರ ಪ್ರಮಾಣವನ್ನು ಹೆಚ್ಚಿಸಲಾಯಿತು. ಈ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಿಸಲಾಗುತಿತ್ತು. ಹೊಸ ಯೋಜನೆಯಡಿ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರಧಾನ್ಯವನ್ನು ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ಹಂಚಿಕೆ ಮಾಡಲಾಯಿತು. 7 ಮತ್ತು ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಅನ್ವಯವಾಗುವಂತೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 05 ಕೆ.ಜಿ ಆಹಾರಧಾನ್ಯವನ್ನು ನವೆಂಬರ್-1, 2013 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಯಿತು.

ಒಂದು ಮಾಹಿತಿಯ ಪ್ರಕಾರ, “ಬಡತನರೇಖೆಗಿಂತ ಕೆಳಗಿರುವ 1.08 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಈ ಯೋಜನೆಯನ್ನು ಎಪಿಎಲ್ ಪಡಿತರ ಚೀಟಿದಾರರಿಗೂ ವಿಸ್ತರಿಸಿದ್ದರಿಂದ ಒಟ್ಟು 3.85 ಮಂದಿ ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ”.

ಈಗ ಅನ್ನಭಾಗ್ಯ ಮತ್ತೆ ಸುದ್ದಿಯಲ್ಲಿದೆ. ಆಡಳಿತರೂಢ ಬಿಜೆಪಿ ಸರ್ಕಾರ ಪಡಿತರ ಅಕ್ಕಿಯನ್ನು ಕಡಿತ ಮಾಡಿದೆ ಎಂಬ ಆರೋಪಗಳು ಬಂದಿವೆ. ಹತ್ತು ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ.ಯನ್ನು ನೀಡುತ್ತಿದ್ದಾರೆಂದು ಬಡ ಜನರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗ್ಯಾರಂಟಿಯಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮಹತ್ವ ಪಡೆದಿದೆ.

ಆರೋಗ್ಯ ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಅಂದು ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯನವರು, “ರೂ.2,65,000 ಕೋಟಿ ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?” ಎಂದು ಪ್ರಶ್ನಿಸಿದ್ದರು.

ಆದರೆ ಅನ್ನಭಾಗ್ಯದ ಜನಪ್ರಿಯತೆ ಮಾತ್ರ ಕುಂದಿಲ್ಲ. “ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ಆನಂತರದಲ್ಲಿ ‘ಅನ್ನಭಾಗ್ಯ’ದ ಪ್ರಭಾವವನ್ನು ಕಂಡು ತಮ್ಮ ಮಾತಿನ ವರಸೆ ಬದಲಿಸಿಕೊಂಡಿದ್ದುಂಟು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇತ್ತೀಚಿಗೆ ಮಾಡಿರುವ ಟ್ವೀಟ್‌ ಈ ಹಿನ್ನೆಲೆಯಲ್ಲಿ ಗಮನಿಸಬಹುದು.

“ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ತನ್ನ ಹೆಸರನ್ನು ಹಾಕಿ ನಾನು ಅಕ್ಕಿ ಕೊಟ್ಟೆ ಅಂತ ಎಲ್ಲಾ ಕಡೆ ಪ್ರಚಾರ ಮಾಡಿ ತಿರುಗಾಡಿತು. ಆದರೆ ಕರುನಾಡ ಜನತೆ ಅನ್ನ ಕೊಟ್ಟವರನ್ನು ಎಂದಿಗೂ ಮರೆಯುವುದಿಲ್ಲ. ಅನ್ನ ಕೊಟ್ಟ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಮತ್ತೆ ಗೆಲ್ಲಿಸಲು ಜನರು ಕಟಿಬ‌ದ್ಧರಾಗಿದ್ದಾರೆ” ಎಂಬ ಟಿಪ್ಪಣಿಯೊಂದಿಗೆ ಬಿಜೆಪಿಯ ಜಾಹೀರಾತನ್ನು ಟ್ವಿಟರ್‌ನಲ್ಲಿ ಸಿ.ಟಿ.ರವಿ ಹಂಚಿಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಕಟುವಾದ ಪದಗಳಿಂದ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಸಿ.ಟಿ.ರವಿ ಅವರಿಗೆ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ದಿನ ಬೆಳಗಾದರೆ ಇನ್ನೊಬ್ಬರ ಬಗ್ಗೆ ಕೀಳಾಗಿ ಮತ್ತು ಪ್ರಚೋದನಾತ್ಮಕವಾಗಿ ಮಾತನಾಡುವ ಪ್ರವೃತ್ತಿ ಇರುವ ಸಿ.ಟಿ.ರವಿಯವರು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ. ಆದರೆ 2013ರಲ್ಲಿ ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನ್ಯಾಷನಲ್ ಫುಡ್‌ ಸೆಕ್ಯುರಿಟಿ ಆಕ್ಟ್ ಜಾರಿಗೆ ತಂದಿತು. ಸೋನಿಯಾ ಗಾಂಧಿಯವರು ಹಠ ಹಿಡಿದು ಈ ಕಾಯ್ದೆ ಜಾರಿಗೊಳಿಸಿದ್ದರು. ಇದರ ಅಡಿಯಲ್ಲಿ ಅಕ್ಕಿ ಹಂಚಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿತು. ಅನ್ನಭಾಗ್ಯದ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನಾವೇ ಅನ್ನಭಾಗ್ಯ ತಂದಿದ್ದು ಎನ್ನುತ್ತಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಜಾರಿಗೊಳಿಸಿದ ಜನಪ್ರಿಯ ಕಾರ್ಯಕ್ರಮ ಎಂಬುದನ್ನು ನಾಡಿನ ಪ್ರಜ್ಞಾವಂತರೆಲ್ಲರೂ ಒಪ್ಪುತ್ತಾರೆ. ಹೀಗಾಗಿ ಹತ್ತು ಕೆ.ಜಿ. ಅಕ್ಕಿ ಗ್ಯಾರಂಟಿಯು ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...