Homeಕರ್ನಾಟಕ10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

“ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ‘ಅನ್ನಭಾಗ್ಯ’ದ ಪ್ರಭಾವ ಕಂಡು ಮಾತಿನ ವರಸೆ ಬದಲಿಸಿಕೊಂಡಿದ್ದುಂಟು.

- Advertisement -
- Advertisement -

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಉಳಿದೆಲ್ಲ ಗ್ಯಾರಂಟಿಗಳಿಗಿಂತ ‘ಅನ್ನಭಾಗ್ಯ’ ಯೋಜನೆಯ ಪ್ರಸ್ತಾಪ ಬಿಜೆಪಿಯ ನಿದ್ದೆಗೆಡಿಸಿರುವಂತೆ ಕಾಣುತ್ತಿದೆ. ‘ಅನ್ನಭಾಗ್ಯ’ದ ಅಕ್ಕಿಯನ್ನು ಮೋದಿ ಸರ್ಕಾರ ಕೊಡುತ್ತಿದೆ ಎಂದು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ.

ಮೇ 13, 2013ರಂದು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭವರಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಅಂದೇ ಘೋಷಣೆ ಮಾಡಿದರು. ಹಸಿವು ಮುಕ್ತ ರಾಜ್ಯ ಮಾಡುವ ಕನಸಿನ ಕುರಿತು ಸಿದ್ದರಾಮಯ್ಯನವರು ಅನೇಕ ಸಲ ಹೇಳಿಕೊಂಡಿದ್ದಾರೆ.

ಹಸಿರು ಕಾಂತ್ರಿಯ ಹರಿಕಾರರೆಂದೇ ಪ್ರಖ್ಯಾತರಾಗಿರುವ ಬಾಬು ಜಗಜೀವನರಾಮ್‌ ಅವರು ಕೃಷಿ ಮತ್ತು ಆಹಾರ ಸಚಿವರಾಗಿದ್ದ ಸಮಯದಲ್ಲಿ, “ನನ್ನ ಆಡಳಿತದಲ್ಲಿ ಅನ್ನಕ್ಕಾಗಿ ಕಳ್ಳತನ ನಡೆಸಿದರೆ ಶಿಕ್ಷೆ ಇಲ್ಲ. ಯಾಕೆಂದರೆ ಅನ್ನ ಕೊಡಲು ಸರ್ಕಾರ ವಿಫಲವಾಗಿದೆ ಎಂದರೆ ಅನ್ನಕ್ಕಾಗಿ ಕಳ್ಳತನ ನಡೆಸಿದವರಿಗೆ ಶಿಕ್ಷೆ ನೀಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ” ಎಂದಿದ್ದರು. ಹಸಿವು ಮನುಷ್ಯನ ಮೂಲಭೂತ ಸಮಸ್ಯೆ. ಹೀಗಾಗಿ ಸಿದ್ದರಾಮಯ್ಯನವರ ಜಾರಿಗೆ ತಂದ ‘ಅನ್ನಭಾಗ್ಯ’ ಭಾರೀ ಜನಪ್ರಿಯತೆಯನ್ನು ಗಳಿಸಿತು.

ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆ ಚಾಲ್ತಿಗೆ ಬಂದು. ಈ ಯೋಜನೆಯ ಜಾರಿಯಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸಲಾಗುವ ಪಡಿತರ ಪ್ರಮಾಣವನ್ನು ಹೆಚ್ಚಿಸಲಾಯಿತು. ಈ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಿಸಲಾಗುತಿತ್ತು. ಹೊಸ ಯೋಜನೆಯಡಿ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರಧಾನ್ಯವನ್ನು ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ಹಂಚಿಕೆ ಮಾಡಲಾಯಿತು. 7 ಮತ್ತು ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಅನ್ವಯವಾಗುವಂತೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 05 ಕೆ.ಜಿ ಆಹಾರಧಾನ್ಯವನ್ನು ನವೆಂಬರ್-1, 2013 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಯಿತು.

ಒಂದು ಮಾಹಿತಿಯ ಪ್ರಕಾರ, “ಬಡತನರೇಖೆಗಿಂತ ಕೆಳಗಿರುವ 1.08 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಈ ಯೋಜನೆಯನ್ನು ಎಪಿಎಲ್ ಪಡಿತರ ಚೀಟಿದಾರರಿಗೂ ವಿಸ್ತರಿಸಿದ್ದರಿಂದ ಒಟ್ಟು 3.85 ಮಂದಿ ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ”.

ಈಗ ಅನ್ನಭಾಗ್ಯ ಮತ್ತೆ ಸುದ್ದಿಯಲ್ಲಿದೆ. ಆಡಳಿತರೂಢ ಬಿಜೆಪಿ ಸರ್ಕಾರ ಪಡಿತರ ಅಕ್ಕಿಯನ್ನು ಕಡಿತ ಮಾಡಿದೆ ಎಂಬ ಆರೋಪಗಳು ಬಂದಿವೆ. ಹತ್ತು ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ.ಯನ್ನು ನೀಡುತ್ತಿದ್ದಾರೆಂದು ಬಡ ಜನರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗ್ಯಾರಂಟಿಯಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮಹತ್ವ ಪಡೆದಿದೆ.

ಆರೋಗ್ಯ ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಅಂದು ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯನವರು, “ರೂ.2,65,000 ಕೋಟಿ ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?” ಎಂದು ಪ್ರಶ್ನಿಸಿದ್ದರು.

ಆದರೆ ಅನ್ನಭಾಗ್ಯದ ಜನಪ್ರಿಯತೆ ಮಾತ್ರ ಕುಂದಿಲ್ಲ. “ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ಆನಂತರದಲ್ಲಿ ‘ಅನ್ನಭಾಗ್ಯ’ದ ಪ್ರಭಾವವನ್ನು ಕಂಡು ತಮ್ಮ ಮಾತಿನ ವರಸೆ ಬದಲಿಸಿಕೊಂಡಿದ್ದುಂಟು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇತ್ತೀಚಿಗೆ ಮಾಡಿರುವ ಟ್ವೀಟ್‌ ಈ ಹಿನ್ನೆಲೆಯಲ್ಲಿ ಗಮನಿಸಬಹುದು.

“ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ತನ್ನ ಹೆಸರನ್ನು ಹಾಕಿ ನಾನು ಅಕ್ಕಿ ಕೊಟ್ಟೆ ಅಂತ ಎಲ್ಲಾ ಕಡೆ ಪ್ರಚಾರ ಮಾಡಿ ತಿರುಗಾಡಿತು. ಆದರೆ ಕರುನಾಡ ಜನತೆ ಅನ್ನ ಕೊಟ್ಟವರನ್ನು ಎಂದಿಗೂ ಮರೆಯುವುದಿಲ್ಲ. ಅನ್ನ ಕೊಟ್ಟ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಮತ್ತೆ ಗೆಲ್ಲಿಸಲು ಜನರು ಕಟಿಬ‌ದ್ಧರಾಗಿದ್ದಾರೆ” ಎಂಬ ಟಿಪ್ಪಣಿಯೊಂದಿಗೆ ಬಿಜೆಪಿಯ ಜಾಹೀರಾತನ್ನು ಟ್ವಿಟರ್‌ನಲ್ಲಿ ಸಿ.ಟಿ.ರವಿ ಹಂಚಿಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಕಟುವಾದ ಪದಗಳಿಂದ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಸಿ.ಟಿ.ರವಿ ಅವರಿಗೆ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ದಿನ ಬೆಳಗಾದರೆ ಇನ್ನೊಬ್ಬರ ಬಗ್ಗೆ ಕೀಳಾಗಿ ಮತ್ತು ಪ್ರಚೋದನಾತ್ಮಕವಾಗಿ ಮಾತನಾಡುವ ಪ್ರವೃತ್ತಿ ಇರುವ ಸಿ.ಟಿ.ರವಿಯವರು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ. ಆದರೆ 2013ರಲ್ಲಿ ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನ್ಯಾಷನಲ್ ಫುಡ್‌ ಸೆಕ್ಯುರಿಟಿ ಆಕ್ಟ್ ಜಾರಿಗೆ ತಂದಿತು. ಸೋನಿಯಾ ಗಾಂಧಿಯವರು ಹಠ ಹಿಡಿದು ಈ ಕಾಯ್ದೆ ಜಾರಿಗೊಳಿಸಿದ್ದರು. ಇದರ ಅಡಿಯಲ್ಲಿ ಅಕ್ಕಿ ಹಂಚಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿತು. ಅನ್ನಭಾಗ್ಯದ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನಾವೇ ಅನ್ನಭಾಗ್ಯ ತಂದಿದ್ದು ಎನ್ನುತ್ತಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಜಾರಿಗೊಳಿಸಿದ ಜನಪ್ರಿಯ ಕಾರ್ಯಕ್ರಮ ಎಂಬುದನ್ನು ನಾಡಿನ ಪ್ರಜ್ಞಾವಂತರೆಲ್ಲರೂ ಒಪ್ಪುತ್ತಾರೆ. ಹೀಗಾಗಿ ಹತ್ತು ಕೆ.ಜಿ. ಅಕ್ಕಿ ಗ್ಯಾರಂಟಿಯು ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...