Homeಕರ್ನಾಟಕ10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

“ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ‘ಅನ್ನಭಾಗ್ಯ’ದ ಪ್ರಭಾವ ಕಂಡು ಮಾತಿನ ವರಸೆ ಬದಲಿಸಿಕೊಂಡಿದ್ದುಂಟು.

- Advertisement -
- Advertisement -

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಉಳಿದೆಲ್ಲ ಗ್ಯಾರಂಟಿಗಳಿಗಿಂತ ‘ಅನ್ನಭಾಗ್ಯ’ ಯೋಜನೆಯ ಪ್ರಸ್ತಾಪ ಬಿಜೆಪಿಯ ನಿದ್ದೆಗೆಡಿಸಿರುವಂತೆ ಕಾಣುತ್ತಿದೆ. ‘ಅನ್ನಭಾಗ್ಯ’ದ ಅಕ್ಕಿಯನ್ನು ಮೋದಿ ಸರ್ಕಾರ ಕೊಡುತ್ತಿದೆ ಎಂದು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ.

ಮೇ 13, 2013ರಂದು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭವರಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಅಂದೇ ಘೋಷಣೆ ಮಾಡಿದರು. ಹಸಿವು ಮುಕ್ತ ರಾಜ್ಯ ಮಾಡುವ ಕನಸಿನ ಕುರಿತು ಸಿದ್ದರಾಮಯ್ಯನವರು ಅನೇಕ ಸಲ ಹೇಳಿಕೊಂಡಿದ್ದಾರೆ.

ಹಸಿರು ಕಾಂತ್ರಿಯ ಹರಿಕಾರರೆಂದೇ ಪ್ರಖ್ಯಾತರಾಗಿರುವ ಬಾಬು ಜಗಜೀವನರಾಮ್‌ ಅವರು ಕೃಷಿ ಮತ್ತು ಆಹಾರ ಸಚಿವರಾಗಿದ್ದ ಸಮಯದಲ್ಲಿ, “ನನ್ನ ಆಡಳಿತದಲ್ಲಿ ಅನ್ನಕ್ಕಾಗಿ ಕಳ್ಳತನ ನಡೆಸಿದರೆ ಶಿಕ್ಷೆ ಇಲ್ಲ. ಯಾಕೆಂದರೆ ಅನ್ನ ಕೊಡಲು ಸರ್ಕಾರ ವಿಫಲವಾಗಿದೆ ಎಂದರೆ ಅನ್ನಕ್ಕಾಗಿ ಕಳ್ಳತನ ನಡೆಸಿದವರಿಗೆ ಶಿಕ್ಷೆ ನೀಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ” ಎಂದಿದ್ದರು. ಹಸಿವು ಮನುಷ್ಯನ ಮೂಲಭೂತ ಸಮಸ್ಯೆ. ಹೀಗಾಗಿ ಸಿದ್ದರಾಮಯ್ಯನವರ ಜಾರಿಗೆ ತಂದ ‘ಅನ್ನಭಾಗ್ಯ’ ಭಾರೀ ಜನಪ್ರಿಯತೆಯನ್ನು ಗಳಿಸಿತು.

ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆ ಚಾಲ್ತಿಗೆ ಬಂದು. ಈ ಯೋಜನೆಯ ಜಾರಿಯಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸಲಾಗುವ ಪಡಿತರ ಪ್ರಮಾಣವನ್ನು ಹೆಚ್ಚಿಸಲಾಯಿತು. ಈ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಿಸಲಾಗುತಿತ್ತು. ಹೊಸ ಯೋಜನೆಯಡಿ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರಧಾನ್ಯವನ್ನು ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ಹಂಚಿಕೆ ಮಾಡಲಾಯಿತು. 7 ಮತ್ತು ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಅನ್ವಯವಾಗುವಂತೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 05 ಕೆ.ಜಿ ಆಹಾರಧಾನ್ಯವನ್ನು ನವೆಂಬರ್-1, 2013 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಯಿತು.

ಒಂದು ಮಾಹಿತಿಯ ಪ್ರಕಾರ, “ಬಡತನರೇಖೆಗಿಂತ ಕೆಳಗಿರುವ 1.08 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಈ ಯೋಜನೆಯನ್ನು ಎಪಿಎಲ್ ಪಡಿತರ ಚೀಟಿದಾರರಿಗೂ ವಿಸ್ತರಿಸಿದ್ದರಿಂದ ಒಟ್ಟು 3.85 ಮಂದಿ ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ”.

ಈಗ ಅನ್ನಭಾಗ್ಯ ಮತ್ತೆ ಸುದ್ದಿಯಲ್ಲಿದೆ. ಆಡಳಿತರೂಢ ಬಿಜೆಪಿ ಸರ್ಕಾರ ಪಡಿತರ ಅಕ್ಕಿಯನ್ನು ಕಡಿತ ಮಾಡಿದೆ ಎಂಬ ಆರೋಪಗಳು ಬಂದಿವೆ. ಹತ್ತು ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ.ಯನ್ನು ನೀಡುತ್ತಿದ್ದಾರೆಂದು ಬಡ ಜನರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗ್ಯಾರಂಟಿಯಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮಹತ್ವ ಪಡೆದಿದೆ.

ಆರೋಗ್ಯ ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಅಂದು ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯನವರು, “ರೂ.2,65,000 ಕೋಟಿ ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?” ಎಂದು ಪ್ರಶ್ನಿಸಿದ್ದರು.

ಆದರೆ ಅನ್ನಭಾಗ್ಯದ ಜನಪ್ರಿಯತೆ ಮಾತ್ರ ಕುಂದಿಲ್ಲ. “ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ಆನಂತರದಲ್ಲಿ ‘ಅನ್ನಭಾಗ್ಯ’ದ ಪ್ರಭಾವವನ್ನು ಕಂಡು ತಮ್ಮ ಮಾತಿನ ವರಸೆ ಬದಲಿಸಿಕೊಂಡಿದ್ದುಂಟು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇತ್ತೀಚಿಗೆ ಮಾಡಿರುವ ಟ್ವೀಟ್‌ ಈ ಹಿನ್ನೆಲೆಯಲ್ಲಿ ಗಮನಿಸಬಹುದು.

“ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ತನ್ನ ಹೆಸರನ್ನು ಹಾಕಿ ನಾನು ಅಕ್ಕಿ ಕೊಟ್ಟೆ ಅಂತ ಎಲ್ಲಾ ಕಡೆ ಪ್ರಚಾರ ಮಾಡಿ ತಿರುಗಾಡಿತು. ಆದರೆ ಕರುನಾಡ ಜನತೆ ಅನ್ನ ಕೊಟ್ಟವರನ್ನು ಎಂದಿಗೂ ಮರೆಯುವುದಿಲ್ಲ. ಅನ್ನ ಕೊಟ್ಟ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಮತ್ತೆ ಗೆಲ್ಲಿಸಲು ಜನರು ಕಟಿಬ‌ದ್ಧರಾಗಿದ್ದಾರೆ” ಎಂಬ ಟಿಪ್ಪಣಿಯೊಂದಿಗೆ ಬಿಜೆಪಿಯ ಜಾಹೀರಾತನ್ನು ಟ್ವಿಟರ್‌ನಲ್ಲಿ ಸಿ.ಟಿ.ರವಿ ಹಂಚಿಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಕಟುವಾದ ಪದಗಳಿಂದ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಸಿ.ಟಿ.ರವಿ ಅವರಿಗೆ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ದಿನ ಬೆಳಗಾದರೆ ಇನ್ನೊಬ್ಬರ ಬಗ್ಗೆ ಕೀಳಾಗಿ ಮತ್ತು ಪ್ರಚೋದನಾತ್ಮಕವಾಗಿ ಮಾತನಾಡುವ ಪ್ರವೃತ್ತಿ ಇರುವ ಸಿ.ಟಿ.ರವಿಯವರು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ. ಆದರೆ 2013ರಲ್ಲಿ ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನ್ಯಾಷನಲ್ ಫುಡ್‌ ಸೆಕ್ಯುರಿಟಿ ಆಕ್ಟ್ ಜಾರಿಗೆ ತಂದಿತು. ಸೋನಿಯಾ ಗಾಂಧಿಯವರು ಹಠ ಹಿಡಿದು ಈ ಕಾಯ್ದೆ ಜಾರಿಗೊಳಿಸಿದ್ದರು. ಇದರ ಅಡಿಯಲ್ಲಿ ಅಕ್ಕಿ ಹಂಚಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿತು. ಅನ್ನಭಾಗ್ಯದ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನಾವೇ ಅನ್ನಭಾಗ್ಯ ತಂದಿದ್ದು ಎನ್ನುತ್ತಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಜಾರಿಗೊಳಿಸಿದ ಜನಪ್ರಿಯ ಕಾರ್ಯಕ್ರಮ ಎಂಬುದನ್ನು ನಾಡಿನ ಪ್ರಜ್ಞಾವಂತರೆಲ್ಲರೂ ಒಪ್ಪುತ್ತಾರೆ. ಹೀಗಾಗಿ ಹತ್ತು ಕೆ.ಜಿ. ಅಕ್ಕಿ ಗ್ಯಾರಂಟಿಯು ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...