Homeಕರ್ನಾಟಕ10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

“ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ‘ಅನ್ನಭಾಗ್ಯ’ದ ಪ್ರಭಾವ ಕಂಡು ಮಾತಿನ ವರಸೆ ಬದಲಿಸಿಕೊಂಡಿದ್ದುಂಟು.

- Advertisement -
- Advertisement -

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿದೆ. ಉಳಿದೆಲ್ಲ ಗ್ಯಾರಂಟಿಗಳಿಗಿಂತ ‘ಅನ್ನಭಾಗ್ಯ’ ಯೋಜನೆಯ ಪ್ರಸ್ತಾಪ ಬಿಜೆಪಿಯ ನಿದ್ದೆಗೆಡಿಸಿರುವಂತೆ ಕಾಣುತ್ತಿದೆ. ‘ಅನ್ನಭಾಗ್ಯ’ದ ಅಕ್ಕಿಯನ್ನು ಮೋದಿ ಸರ್ಕಾರ ಕೊಡುತ್ತಿದೆ ಎಂದು ಪ್ರತಿಪಾದಿಸಲು ಬಿಜೆಪಿ ಮುಂದಾಗಿದೆ.

ಮೇ 13, 2013ರಂದು ರಾಜ್ಯದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭವರಸೆಯಂತೆ ಅನ್ನಭಾಗ್ಯ ಯೋಜನೆಯನ್ನು ಅಂದೇ ಘೋಷಣೆ ಮಾಡಿದರು. ಹಸಿವು ಮುಕ್ತ ರಾಜ್ಯ ಮಾಡುವ ಕನಸಿನ ಕುರಿತು ಸಿದ್ದರಾಮಯ್ಯನವರು ಅನೇಕ ಸಲ ಹೇಳಿಕೊಂಡಿದ್ದಾರೆ.

ಹಸಿರು ಕಾಂತ್ರಿಯ ಹರಿಕಾರರೆಂದೇ ಪ್ರಖ್ಯಾತರಾಗಿರುವ ಬಾಬು ಜಗಜೀವನರಾಮ್‌ ಅವರು ಕೃಷಿ ಮತ್ತು ಆಹಾರ ಸಚಿವರಾಗಿದ್ದ ಸಮಯದಲ್ಲಿ, “ನನ್ನ ಆಡಳಿತದಲ್ಲಿ ಅನ್ನಕ್ಕಾಗಿ ಕಳ್ಳತನ ನಡೆಸಿದರೆ ಶಿಕ್ಷೆ ಇಲ್ಲ. ಯಾಕೆಂದರೆ ಅನ್ನ ಕೊಡಲು ಸರ್ಕಾರ ವಿಫಲವಾಗಿದೆ ಎಂದರೆ ಅನ್ನಕ್ಕಾಗಿ ಕಳ್ಳತನ ನಡೆಸಿದವರಿಗೆ ಶಿಕ್ಷೆ ನೀಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ” ಎಂದಿದ್ದರು. ಹಸಿವು ಮನುಷ್ಯನ ಮೂಲಭೂತ ಸಮಸ್ಯೆ. ಹೀಗಾಗಿ ಸಿದ್ದರಾಮಯ್ಯನವರ ಜಾರಿಗೆ ತಂದ ‘ಅನ್ನಭಾಗ್ಯ’ ಭಾರೀ ಜನಪ್ರಿಯತೆಯನ್ನು ಗಳಿಸಿತು.

ಜುಲೈ 2013 ರಿಂದ ‘ಅನ್ನಭಾಗ್ಯ’ ಯೋಜನೆ ಚಾಲ್ತಿಗೆ ಬಂದು. ಈ ಯೋಜನೆಯ ಜಾರಿಯಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಿಸಲಾಗುವ ಪಡಿತರ ಪ್ರಮಾಣವನ್ನು ಹೆಚ್ಚಿಸಲಾಯಿತು. ಈ ಮೊದಲು ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ಕನಿಷ್ಟ 4 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಗೋಧಿಯಂತೆ ಒಂದು ಕುಟುಂಬಕ್ಕೆ ಗರಿಷ್ಟ 20 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಗೋಧಿಯನ್ನು ವಿತರಿಸಲಾಗುತಿತ್ತು. ಹೊಸ ಯೋಜನೆಯಡಿ ಅರ್ಹ ಬಿಪಿಎಲ್ ಏಕ ಸದಸ್ಯ ಕುಟುಂಬಗಳಿಗೆ 10 ಕೆ.ಜಿ, ದ್ವಿ ಸದಸ್ಯ ಕುಟುಂಬಗಳಿಗೆ 20 ಕೆ.ಜಿ, 3 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 30 ಕೆ.ಜಿ ಆಹಾರಧಾನ್ಯವನ್ನು ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ಹಂಚಿಕೆ ಮಾಡಲಾಯಿತು. 7 ಮತ್ತು ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಅನ್ವಯವಾಗುವಂತೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 05 ಕೆ.ಜಿ ಆಹಾರಧಾನ್ಯವನ್ನು ನವೆಂಬರ್-1, 2013 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಯಿತು.

ಒಂದು ಮಾಹಿತಿಯ ಪ್ರಕಾರ, “ಬಡತನರೇಖೆಗಿಂತ ಕೆಳಗಿರುವ 1.08 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭ ಪಡೆದಿವೆ. ಈ ಯೋಜನೆಯನ್ನು ಎಪಿಎಲ್ ಪಡಿತರ ಚೀಟಿದಾರರಿಗೂ ವಿಸ್ತರಿಸಿದ್ದರಿಂದ ಒಟ್ಟು 3.85 ಮಂದಿ ಅನ್ನಭಾಗ್ಯದ ಫಲಾನುಭವಿಗಳಾಗಿದ್ದಾರೆ”.

ಈಗ ಅನ್ನಭಾಗ್ಯ ಮತ್ತೆ ಸುದ್ದಿಯಲ್ಲಿದೆ. ಆಡಳಿತರೂಢ ಬಿಜೆಪಿ ಸರ್ಕಾರ ಪಡಿತರ ಅಕ್ಕಿಯನ್ನು ಕಡಿತ ಮಾಡಿದೆ ಎಂಬ ಆರೋಪಗಳು ಬಂದಿವೆ. ಹತ್ತು ಕೆ.ಜಿ. ಅಕ್ಕಿಯ ಬದಲಿಗೆ 5 ಕೆ.ಜಿ.ಯನ್ನು ನೀಡುತ್ತಿದ್ದಾರೆಂದು ಬಡ ಜನರು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಗ್ಯಾರಂಟಿಯಲ್ಲಿ ಪ್ರತಿ ವ್ಯಕ್ತಿಗೆ 10 ಅಕ್ಕಿ ನೀಡುವುದಾಗಿ ಘೋಷಿಸಿರುವುದು ಮಹತ್ವ ಪಡೆದಿದೆ.

ಆರೋಗ್ಯ ಸಚಿವರಾಗಿದ್ದ ದಿವಂಗತ ಉಮೇಶ್ ಕತ್ತಿಯವರು ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಅಂದು ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯನವರು, “ರೂ.2,65,000 ಕೋಟಿ ಗಾತ್ರದ ಬಜೆಟ್‌ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ  ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು?” ಎಂದು ಪ್ರಶ್ನಿಸಿದ್ದರು.

ಆದರೆ ಅನ್ನಭಾಗ್ಯದ ಜನಪ್ರಿಯತೆ ಮಾತ್ರ ಕುಂದಿಲ್ಲ. “ಅಕ್ಕಿಕೊಟ್ಟು ಜನರನ್ನು ಸೋಮಾರಿಗಳನ್ನಾಗಿ ಮಾಡಲಾಗುತ್ತಿದೆ” ಎಂದೆಲ್ಲ ಟೀಕೆ ಮಾಡಿದವರೂ ಆನಂತರದಲ್ಲಿ ‘ಅನ್ನಭಾಗ್ಯ’ದ ಪ್ರಭಾವವನ್ನು ಕಂಡು ತಮ್ಮ ಮಾತಿನ ವರಸೆ ಬದಲಿಸಿಕೊಂಡಿದ್ದುಂಟು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇತ್ತೀಚಿಗೆ ಮಾಡಿರುವ ಟ್ವೀಟ್‌ ಈ ಹಿನ್ನೆಲೆಯಲ್ಲಿ ಗಮನಿಸಬಹುದು.

“ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ನೀಡಿದ ಅಕ್ಕಿಯನ್ನು ಕಾಂಗ್ರೆಸ್ ತನ್ನ ಹೆಸರನ್ನು ಹಾಕಿ ನಾನು ಅಕ್ಕಿ ಕೊಟ್ಟೆ ಅಂತ ಎಲ್ಲಾ ಕಡೆ ಪ್ರಚಾರ ಮಾಡಿ ತಿರುಗಾಡಿತು. ಆದರೆ ಕರುನಾಡ ಜನತೆ ಅನ್ನ ಕೊಟ್ಟವರನ್ನು ಎಂದಿಗೂ ಮರೆಯುವುದಿಲ್ಲ. ಅನ್ನ ಕೊಟ್ಟ ಡಬಲ್ ಎಂಜಿನ್ ಬಿಜೆಪಿ ಸರ್ಕಾರವನ್ನು ಮತ್ತೆ ಗೆಲ್ಲಿಸಲು ಜನರು ಕಟಿಬ‌ದ್ಧರಾಗಿದ್ದಾರೆ” ಎಂಬ ಟಿಪ್ಪಣಿಯೊಂದಿಗೆ ಬಿಜೆಪಿಯ ಜಾಹೀರಾತನ್ನು ಟ್ವಿಟರ್‌ನಲ್ಲಿ ಸಿ.ಟಿ.ರವಿ ಹಂಚಿಕೊಂಡಿದ್ದಾರೆ. ಇವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಕಟುವಾದ ಪದಗಳಿಂದ ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರು ಸಿ.ಟಿ.ರವಿ ಅವರಿಗೆ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ದಿನ ಬೆಳಗಾದರೆ ಇನ್ನೊಬ್ಬರ ಬಗ್ಗೆ ಕೀಳಾಗಿ ಮತ್ತು ಪ್ರಚೋದನಾತ್ಮಕವಾಗಿ ಮಾತನಾಡುವ ಪ್ರವೃತ್ತಿ ಇರುವ ಸಿ.ಟಿ.ರವಿಯವರು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆ. ಆದರೆ 2013ರಲ್ಲಿ ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನ್ಯಾಷನಲ್ ಫುಡ್‌ ಸೆಕ್ಯುರಿಟಿ ಆಕ್ಟ್ ಜಾರಿಗೆ ತಂದಿತು. ಸೋನಿಯಾ ಗಾಂಧಿಯವರು ಹಠ ಹಿಡಿದು ಈ ಕಾಯ್ದೆ ಜಾರಿಗೊಳಿಸಿದ್ದರು. ಇದರ ಅಡಿಯಲ್ಲಿ ಅಕ್ಕಿ ಹಂಚಿಕೆಯಾಗುತ್ತಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿತು. ಅನ್ನಭಾಗ್ಯದ ಮೂಲಕ ಜನರನ್ನು ಆಲಸಿಗಳನ್ನಾಗಿ ಮಾಡುತ್ತಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನಾವೇ ಅನ್ನಭಾಗ್ಯ ತಂದಿದ್ದು ಎನ್ನುತ್ತಿದ್ದಾರೆ. ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕುಟುಕಿದ್ದಾರೆ.

ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಜಾರಿಗೊಳಿಸಿದ ಜನಪ್ರಿಯ ಕಾರ್ಯಕ್ರಮ ಎಂಬುದನ್ನು ನಾಡಿನ ಪ್ರಜ್ಞಾವಂತರೆಲ್ಲರೂ ಒಪ್ಪುತ್ತಾರೆ. ಹೀಗಾಗಿ ಹತ್ತು ಕೆ.ಜಿ. ಅಕ್ಕಿ ಗ್ಯಾರಂಟಿಯು ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುತ್ತದೆಯೇ ಎಂಬ ಕುತೂಹಲ ಹೆಚ್ಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...