Homeಮುಖಪುಟವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ

- Advertisement -
- Advertisement -

ಬಿಹಾರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಿವೆ. ಚುನಾವಣಾ ಪ್ರಚಾರದಲ್ಲಿ ಜನರಿಗೆ ನೀಡುತ್ತಿರುವ ಭರವಸೆ, ಪ್ರಣಾಳಿಕೆಗಳ ಬಗ್ಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.

ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ವರ್ಷಕ್ಕೆ 10 ಲಕ್ಷ ಉದ್ಯೋಗಗಳ ಭರವಸೆಯನ್ನು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಅಸಾಧ್ಯ, ಇದನ್ನೂ ಯಾವ ನಾಯಕರು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

’ಅಷ್ಟು ಉದ್ಯೋಗಿಗಳಿಗೆ ಎಲ್ಲಿಂದ ಸಂಬಳ ನೀಡುತ್ತೀರಿ..? ನೀವು ನಕಲಿ ಹಣವನ್ನು ಮುದ್ರಿಸುತ್ತೀರಾ ಅಥವಾ ಯಾವ ಹಗರಣದಿಂದ ಜೈಲಿಗೆ ಹೋಗಬೇಕಾಯಿತೋ ಅಂತಹದ್ದೇ ಕೆಲಸ ಮಾಡುತ್ತೀರಾ..?’ ಎಂದು ಗೋಪಾಲಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ತೇಜಶ್ವಿ ಯಾದವ್ ಅವರ ತಂದೆ ಲಾಲು ಯಾದವ್ ಹೆಸರು ಹೇಳದೆ ಮೇವು ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ತೇಜಶ್ವಿ ಯಾದವ್ ಅನಾನುಭವಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. “ಉದ್ಯೋಗಗಳ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಈಡೇರಿಸಲು ಜ್ಞಾನ ಅಥವಾ ಅನುಭವ ಅವರಿಗಿಲ್ಲ ಎಂದಿದ್ದಾರೆ. ಉದ್ಯೋಗ ಕೊಡುವುದಾದರೆ, ಕೇವಲ 10 ಲಕ್ಷ ಏಕೆ? ಎಲ್ಲರಿಗೂ ಉದ್ಯೋಗ ನೀಡಿ ಎಂದು ಉಚಿತ ಸಲಹೆಯನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಮಾತಿಗೆ ತಿರುಗೇಟು ನೀಡಿರುವ ತೇಜಸ್ವಿ ಯಾದವ್, ’ನಾನು ಅಷ್ಟು ಅನಾನುಭವಿಯಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ. ನಾನು ಅಷ್ಟು ಅನಾನುಭವಿ ಮತ್ತು ಅಪಕ್ವವಾಗಿದ್ದರೆ, ಬಿಜೆಪಿ ನಾಯಕರು ನನ್ನನ್ನು 20 ಹೆಲಿಕಾಪ್ಟರ್‌ಗಳೊಂದಿಗೆ ಏಕೆ ಬೆನ್ನಟ್ಟುತ್ತಿದ್ದಾರೆ..? ಎಂದು ಚಾಟಿ ಬೀಸಿದ್ದಾರೆ.

“ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಅವರು ಜಲ-ಜೀವನ್-ಹರಿಯಾಲಿ ನೀತಿಗೆ, ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಇವುಗಳ ನಂತರ ಅವರು ಉದ್ಯೋಗ ನೀಡಲು ಹಣ ಎಲ್ಲಿದೆ ಎಂಬ ವ್ಯಂಗ್ಯದ ಕಾಮೆಂಟ್ ಮಾಡುತ್ತಾರೆ” ಎಂದು ತೇಜಶ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

“4.5 ಲಕ್ಷ ಉದ್ಯೋಗಗಳಿಗೆ ರಾಜ್ಯದ ಬಜೆಟ್‌ನಲ್ಲಿ ಅವಕಾಶವಿದೆ. ನೀತಿ ಆಯೋಗದ ಪ್ರಕಾರ ಬಿಹಾರದ ಪ್ರಗತಿಗೆ ಇನ್ನೂ 5.5 ಲಕ್ಷಕ್ಕಿಂತಲೂ ಅಧಿಕ ಉದ್ಯೋಗಗಳ ಅಗತ್ಯವಿದೆ. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ತೇಜಸ್ವಿ ಯಾದವ್ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತ ತೇಜಶ್ವಿ ಯಾದವ್ ಅವರ “10 ಲಕ್ಷ ಉದ್ಯೋಗಗಳು” ಎಂಬ ಭರವಸೆ ಬಗ್ಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ ಅಪಹಾಸ್ಯ ಮಾಡಿದ್ದಾರೆ.

ಆದರೆ ತೇಜಸ್ವಿ ಯಾದವ್ ಅವರ ಈ ಭರವಸೆ ಯುವಜನತೆಯಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಹೊಸ ವಿಶ್ವಾಸ ಹುಟ್ಟಿಸಿದೆ. ಇದರಿಂದ ಕಂಗಾಲಾಗಿರುವ ನಿತೀಶ್ ಕುಮಾರ್‌ ತಮ್ಮ ರ್‍ಯಾಲಿಗಳಲ್ಲಿ ಇದೇ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಸಾಧ್ಯವೆಂಬುದಿಲ್ಲ, ಚುನಾವಣೆಯಲ್ಲಿ ಗೆದ್ದರೆ ವರ್ಷಕ್ಕೆ 10 ಲಕ್ಷ ಉದ್ಯೋಗ ನೀಡುವುದಾಗಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಹೊಸ 243 ಸದಸ್ಯರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...