Homeಮುಖಪುಟವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ವರ್ಷಕ್ಕೆ 10 ಲಕ್ಷ ಉದ್ಯೋಗ ಸೃಷ್ಟಿ: ತೇಜಸ್ವಿ ಯಾದವ್ ಭರವಸೆ; ನಿತೀಶ್ ಕಂಗಾಲು!

ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ

- Advertisement -
- Advertisement -

ಬಿಹಾರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಿವೆ. ಚುನಾವಣಾ ಪ್ರಚಾರದಲ್ಲಿ ಜನರಿಗೆ ನೀಡುತ್ತಿರುವ ಭರವಸೆ, ಪ್ರಣಾಳಿಕೆಗಳ ಬಗ್ಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ.

ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ ಯಾದವ್ ವರ್ಷಕ್ಕೆ 10 ಲಕ್ಷ ಉದ್ಯೋಗಗಳ ಭರವಸೆಯನ್ನು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, ಇದು ಅಸಾಧ್ಯ, ಇದನ್ನೂ ಯಾವ ನಾಯಕರು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

’ಅಷ್ಟು ಉದ್ಯೋಗಿಗಳಿಗೆ ಎಲ್ಲಿಂದ ಸಂಬಳ ನೀಡುತ್ತೀರಿ..? ನೀವು ನಕಲಿ ಹಣವನ್ನು ಮುದ್ರಿಸುತ್ತೀರಾ ಅಥವಾ ಯಾವ ಹಗರಣದಿಂದ ಜೈಲಿಗೆ ಹೋಗಬೇಕಾಯಿತೋ ಅಂತಹದ್ದೇ ಕೆಲಸ ಮಾಡುತ್ತೀರಾ..?’ ಎಂದು ಗೋಪಾಲಗಂಜ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ನಿತೀಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ತೇಜಶ್ವಿ ಯಾದವ್ ಅವರ ತಂದೆ ಲಾಲು ಯಾದವ್ ಹೆಸರು ಹೇಳದೆ ಮೇವು ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ತೇಜಶ್ವಿ ಯಾದವ್ ಅನಾನುಭವಿ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. “ಉದ್ಯೋಗಗಳ ಬಗ್ಗೆ ಭರವಸೆ ನೀಡಿದ್ದಾರೆ. ಆದರೆ ಈ ಭರವಸೆ ಈಡೇರಿಸಲು ಜ್ಞಾನ ಅಥವಾ ಅನುಭವ ಅವರಿಗಿಲ್ಲ ಎಂದಿದ್ದಾರೆ. ಉದ್ಯೋಗ ಕೊಡುವುದಾದರೆ, ಕೇವಲ 10 ಲಕ್ಷ ಏಕೆ? ಎಲ್ಲರಿಗೂ ಉದ್ಯೋಗ ನೀಡಿ ಎಂದು ಉಚಿತ ಸಲಹೆಯನ್ನು ನೀಡಿದ್ದಾರೆ.

ನಿತೀಶ್ ಕುಮಾರ್ ಮಾತಿಗೆ ತಿರುಗೇಟು ನೀಡಿರುವ ತೇಜಸ್ವಿ ಯಾದವ್, ’ನಾನು ಅಷ್ಟು ಅನಾನುಭವಿಯಲ್ಲ. ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ. ನಾನು ಅಷ್ಟು ಅನಾನುಭವಿ ಮತ್ತು ಅಪಕ್ವವಾಗಿದ್ದರೆ, ಬಿಜೆಪಿ ನಾಯಕರು ನನ್ನನ್ನು 20 ಹೆಲಿಕಾಪ್ಟರ್‌ಗಳೊಂದಿಗೆ ಏಕೆ ಬೆನ್ನಟ್ಟುತ್ತಿದ್ದಾರೆ..? ಎಂದು ಚಾಟಿ ಬೀಸಿದ್ದಾರೆ.

“ಮುಖ್ಯಮಂತ್ರಿ ನಿತೀಶ್ ಕುಮಾರ್‌ ದೈಹಿಕವಾಗಿ ಮತ್ತು ಮಾನಸಿಕವಾಗಿ ದಣಿದಿದ್ದಾರೆ. ಅವರು 15 ವರ್ಷಗಳು ಆಡಳಿತ ನಡೆಸಿದ ನಂತರವೂ, ಉದ್ಯೋಗ ಸೃಷ್ಟಿಸಲು ಹಣ ಎಲ್ಲಿದೆ ಎಂದು ಕೇಳುತ್ತಿದ್ದಾರೆ. ಬಿಹಾರದ ಬಜೆಟ್ 30,000 ಕೋಟಿ ರೂಪಾಯಿ. ಈ ಹಣ ಎಲ್ಲಿದೆ..? ಎಲ್ಲವೂ ಅವರ ಹಗರಣಗಳಲ್ಲಿ ಕಳೆದು ಹೋಗಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಅವರು ಜಲ-ಜೀವನ್-ಹರಿಯಾಲಿ ನೀತಿಗೆ, ಜಾಹೀರಾತುಗಳಿಗೆ ಕೋಟಿ ಕೋಟಿ ಹಣ ಖರ್ಚು ಮಾಡಿದ್ದಾರೆ. ಇವುಗಳ ನಂತರ ಅವರು ಉದ್ಯೋಗ ನೀಡಲು ಹಣ ಎಲ್ಲಿದೆ ಎಂಬ ವ್ಯಂಗ್ಯದ ಕಾಮೆಂಟ್ ಮಾಡುತ್ತಾರೆ” ಎಂದು ತೇಜಶ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

“4.5 ಲಕ್ಷ ಉದ್ಯೋಗಗಳಿಗೆ ರಾಜ್ಯದ ಬಜೆಟ್‌ನಲ್ಲಿ ಅವಕಾಶವಿದೆ. ನೀತಿ ಆಯೋಗದ ಪ್ರಕಾರ ಬಿಹಾರದ ಪ್ರಗತಿಗೆ ಇನ್ನೂ 5.5 ಲಕ್ಷಕ್ಕಿಂತಲೂ ಅಧಿಕ ಉದ್ಯೋಗಗಳ ಅಗತ್ಯವಿದೆ. ಇಚ್ಛಾಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ತೇಜಸ್ವಿ ಯಾದವ್ ತೀಕ್ಷ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತ ತೇಜಶ್ವಿ ಯಾದವ್ ಅವರ “10 ಲಕ್ಷ ಉದ್ಯೋಗಗಳು” ಎಂಬ ಭರವಸೆ ಬಗ್ಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಕೂಡ ಅಪಹಾಸ್ಯ ಮಾಡಿದ್ದಾರೆ.

ಆದರೆ ತೇಜಸ್ವಿ ಯಾದವ್ ಅವರ ಈ ಭರವಸೆ ಯುವಜನತೆಯಲ್ಲಿ ಉದ್ಯೋಗ ಸೃಷ್ಟಿಯ ಬಗ್ಗೆ ಹೊಸ ವಿಶ್ವಾಸ ಹುಟ್ಟಿಸಿದೆ. ಇದರಿಂದ ಕಂಗಾಲಾಗಿರುವ ನಿತೀಶ್ ಕುಮಾರ್‌ ತಮ್ಮ ರ್‍ಯಾಲಿಗಳಲ್ಲಿ ಇದೇ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಸಾಧ್ಯವೆಂಬುದಿಲ್ಲ, ಚುನಾವಣೆಯಲ್ಲಿ ಗೆದ್ದರೆ ವರ್ಷಕ್ಕೆ 10 ಲಕ್ಷ ಉದ್ಯೋಗ ನೀಡುವುದಾಗಿ ತೇಜಸ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಹೊಸ 243 ಸದಸ್ಯರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.


ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...