Homeಮುಖಪುಟಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಭರವಸೆ ನೀಡಿದ್ದ ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಪ್ರಶ್ನಿಸಿದ ಯುವ ಜನರು

- Advertisement -
- Advertisement -

ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಹಿಂದಿನ ಯಾವುದೇ ಸರ್ಕಾರಿ ಉದ್ಯೋಗಗಳನ್ನು ಇಂತಹ “ಮಿಷನ್ ಮೋಡ್”ನಲ್ಲಿ ಹಿಂದೆಂದೂ ನೀಡಲಾಗಿಲ್ಲ ಎಂದು ಮೋದಿ ಹೇಳಿದ್ದು, ತಮ್ಮ ಸರ್ಕಾರದಲ್ಲಿ ಯುವಜನರನ್ನು ಕೇಂದ್ರವಾಗಿಟ್ಟು ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ದೇಶವು ಎಲ್ಲಾ ಕ್ಷೇತ್ರಗಳಲ್ಲಿ ನಿಜವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ‘ಯುವ ಪ್ರತಿಭೆ’ಯನ್ನು ಅನ್ವೇಷಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ. ಬಾಹ್ಯಾಕಾಶದಿಂದ ರಕ್ಷಣೆವರೆಗೆ, ಪ್ರವಾಸೋದ್ಯಮದಿಂದ ಆರೋಗ್ಯ ಕ್ಷೇತ್ರದವರೆಗೆ, ಇಂದು ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲುಗಲ್ಲು ಮುಟ್ಟಿತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರೋಜ್‌ಗಾರ್ ಮೇಳದಲ್ಲಿ ನೇಮಕಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವುದನ್ನು ಎತ್ತಿತೋರಿಸಿದ ಮೋದಿ, ಅವರ ಸಾಧನೆಗಳು ಇತರ ಮಹಿಳೆಯರಿಗೆ ಸ್ಫೂರ್ತಿಯಾಗಲಿವೆ ಎಂದು ಹೇಳಿದ್ದಾರೆ. “ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬಿಯಾಗಲು ಸಬಲೀಕರಣಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನಕ್ಕೆ ಸಾಕಷ್ಟು ಸಹಾಯ ಮಾಡಿದ್ದು, ‘ಪ್ರಧಾನಿ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುತೇಕ ಮಾಲೀಕರಾಗಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವ ಮೂಲಕ ಯುವಜನರ ಅಭಿವೃದ್ಧಿಗೆ ರಾಷ್ಟ್ರೀಯ ಶಿಕ್ಷಣ ನೀತಿಯು ಸಹಾಯ ಮಾಡಿದೆ ಎಂದು ಸಮರ್ಥಿಸಿಕೊಂಡ ಪ್ರಧಾನಿ ಮೋದಿ,”ಯುವಕರು 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದೆಂದು ಖಚಿತಪಡಿಸಿಕೊಳ್ಳುವ ಮೂಲಕ ಉದ್ಯೋಗಕ್ಕೆ ಭಾಷೆಯು ಅಡ್ಡಿಯಾಗುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿದೆ” ಎಂದು ಹೇಳಿದ್ದಾರೆ.

ಅದಾಗ್ಯೂ, ಪ್ರಧಾನಿ ಮೋದಿ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದ್ದು, “ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದವರು ಒಂದುವರೆ ವರ್ಷಗಳಿಗೆ 10 ಲಕ್ಷ ಉದ್ಯೋಗ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, 2 ಕೋಟಿ ಉದ್ಯೋಗ ಎಲ್ಲಿ ಹೋಯಿತು?” ಎಂದು ಯುವ ಪತ್ರಕರ್ತ ಹಾರಿಸ್ ಅವರು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

ಯುವ ಹೋರಾಟಗಾರ ಕೃಷ್ಣ ಪ್ರತಿಕ್ರಿಯಿಸಿ, “ತನ್ನ ಭರವಸೆಗಳನ್ನು ಉಳಿಸಿಕೊಳ್ಳಲು ಆಗದೆ ದೇಶದ ಯುವಜನರಿಗೆ ಮೋಸ ಮಾಡಿದ ಪ್ರಧಾನಿ ಮೋದಿ ನಾಚಿಕೆ ಪಟ್ಟಕೊಳ್ಳಬೇಕಿತ್ತು. ಆದರೆ ಇವರು 10 ಲಕ್ಷ ಉದ್ಯೋಗ ನೀಡಿದ್ದೇವೆ ಎಂದು ಹೆಮ್ಮಪಟ್ಟುಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...