Homeಮುಖಪುಟಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!

ಭರವಸೆ ನೀಡಿದ್ದ ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಪ್ರಶ್ನಿಸಿದ ಯುವ ಜನರು

- Advertisement -
- Advertisement -

ಕಳೆದ ಒಂದೂವರೆ ವರ್ಷಗಳಲ್ಲಿ ತಮ್ಮ ಸರ್ಕಾರ ಸುಮಾರು 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗಗಳನ್ನು ಯುವಕರಿಗೆ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವರ್ಷಕ್ಕೆ 2 ಕೋಟಿ ಉದ್ಯೋಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

‘ರೋಜ್‌ಗಾರ್ ಮೇಳ’ ಕಾರ್ಯಕ್ರಮದ ಅಡಿಯಲ್ಲಿ ನೇಮಕಾತಿಯಾದವರನ್ನು ಉದ್ದೇಶಿಸಿ ಆನ್‌ಲೈನ್‌ ಮೂಲಕ ಮಾತನಾಡಿದ ಅವರು, ಮೇಳದಲ್ಲಿ 71,000 ಕ್ಕೂ ಹೆಚ್ಚು ಜನರಿಗೆ ಹಲವಾರು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಹಿಂದಿನ ಯಾವುದೇ ಸರ್ಕಾರಿ ಉದ್ಯೋಗಗಳನ್ನು ಇಂತಹ “ಮಿಷನ್ ಮೋಡ್”ನಲ್ಲಿ ಹಿಂದೆಂದೂ ನೀಡಲಾಗಿಲ್ಲ ಎಂದು ಮೋದಿ ಹೇಳಿದ್ದು, ತಮ್ಮ ಸರ್ಕಾರದಲ್ಲಿ ಯುವಜನರನ್ನು ಕೇಂದ್ರವಾಗಿಟ್ಟು ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ದೇಶವು ಎಲ್ಲಾ ಕ್ಷೇತ್ರಗಳಲ್ಲಿ ನಿಜವಾದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ‘ಯುವ ಪ್ರತಿಭೆ’ಯನ್ನು ಅನ್ವೇಷಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ. ಬಾಹ್ಯಾಕಾಶದಿಂದ ರಕ್ಷಣೆವರೆಗೆ, ಪ್ರವಾಸೋದ್ಯಮದಿಂದ ಆರೋಗ್ಯ ಕ್ಷೇತ್ರದವರೆಗೆ, ಇಂದು ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಹೊಸ ಮೈಲುಗಲ್ಲು ಮುಟ್ಟಿತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರೋಜ್‌ಗಾರ್ ಮೇಳದಲ್ಲಿ ನೇಮಕಗೊಂಡವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವುದನ್ನು ಎತ್ತಿತೋರಿಸಿದ ಮೋದಿ, ಅವರ ಸಾಧನೆಗಳು ಇತರ ಮಹಿಳೆಯರಿಗೆ ಸ್ಫೂರ್ತಿಯಾಗಲಿವೆ ಎಂದು ಹೇಳಿದ್ದಾರೆ. “ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಸ್ವಾವಲಂಬಿಯಾಗಲು ಸಬಲೀಕರಣಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ನೀಡುವ ಸರ್ಕಾರದ ನಿರ್ಧಾರವು ಅವರ ವೃತ್ತಿಜೀವನಕ್ಕೆ ಸಾಕಷ್ಟು ಸಹಾಯ ಮಾಡಿದ್ದು, ‘ಪ್ರಧಾನಿ ಆವಾಸ್ ಯೋಜನೆ’ ಅಡಿಯಲ್ಲಿ ನಿರ್ಮಿಸಲಾದ ಮನೆಯ ಬಹುತೇಕ ಮಾಲೀಕರಾಗಿರುವುದು ಮಹಿಳೆಯರೇ ಆಗಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಒತ್ತು ನೀಡುವ ಮೂಲಕ ಯುವಜನರ ಅಭಿವೃದ್ಧಿಗೆ ರಾಷ್ಟ್ರೀಯ ಶಿಕ್ಷಣ ನೀತಿಯು ಸಹಾಯ ಮಾಡಿದೆ ಎಂದು ಸಮರ್ಥಿಸಿಕೊಂಡ ಪ್ರಧಾನಿ ಮೋದಿ,”ಯುವಕರು 13 ಭಾರತೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ಬರೆಯಬಹುದೆಂದು ಖಚಿತಪಡಿಸಿಕೊಳ್ಳುವ ಮೂಲಕ ಉದ್ಯೋಗಕ್ಕೆ ಭಾಷೆಯು ಅಡ್ಡಿಯಾಗುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿದೆ” ಎಂದು ಹೇಳಿದ್ದಾರೆ.

ಅದಾಗ್ಯೂ, ಪ್ರಧಾನಿ ಮೋದಿ ಅವರ ಹೇಳಿಕೆಗೆ ಟೀಕೆ ವ್ಯಕ್ತವಾಗಿದ್ದು, “ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಅಧಿಕಾರಕ್ಕೆ ಬಂದವರು ಒಂದುವರೆ ವರ್ಷಗಳಿಗೆ 10 ಲಕ್ಷ ಉದ್ಯೋಗ ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, 2 ಕೋಟಿ ಉದ್ಯೋಗ ಎಲ್ಲಿ ಹೋಯಿತು?” ಎಂದು ಯುವ ಪತ್ರಕರ್ತ ಹಾರಿಸ್ ಅವರು ಪ್ರಶ್ನಿಸಿದ್ದಾರೆ. ಒಂದೂವರೆ ವರ್ಷದಲ್ಲಿ

ಯುವ ಹೋರಾಟಗಾರ ಕೃಷ್ಣ ಪ್ರತಿಕ್ರಿಯಿಸಿ, “ತನ್ನ ಭರವಸೆಗಳನ್ನು ಉಳಿಸಿಕೊಳ್ಳಲು ಆಗದೆ ದೇಶದ ಯುವಜನರಿಗೆ ಮೋಸ ಮಾಡಿದ ಪ್ರಧಾನಿ ಮೋದಿ ನಾಚಿಕೆ ಪಟ್ಟಕೊಳ್ಳಬೇಕಿತ್ತು. ಆದರೆ ಇವರು 10 ಲಕ್ಷ ಉದ್ಯೋಗ ನೀಡಿದ್ದೇವೆ ಎಂದು ಹೆಮ್ಮಪಟ್ಟುಕೊಳ್ಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...