Homeಮುಖಪುಟ'ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ' - ಪ.ಬಂಗಾಳದ ಎಡಪಕ್ಷಗಳ ಬೃಹತ್ ರ್‍ಯಾಲಿಯಲ್ಲಿ 10 ಲಕ್ಷ ಜನ!

‘ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ’ – ಪ.ಬಂಗಾಳದ ಎಡಪಕ್ಷಗಳ ಬೃಹತ್ ರ್‍ಯಾಲಿಯಲ್ಲಿ 10 ಲಕ್ಷ ಜನ!

ಎಡ-ಕಾಂಗ್ರೆಸ್ ಪಕ್ಷಗಳು ಮತ್ತು ಇತರ ಜಾತ್ಯತೀತ ಶಕ್ತಿಗಳ ಮಹಾ ಮೈತ್ರಿಕೂಟವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಕೇವಲ ಎರಡು ಆಯ್ಕೆಗಳ ಸ್ಪರ್ಧೆಯಾಗಲು ಬಿಡುವುದಿಲ್ಲ- ಅಧಿರ್ ರಂಜನ್ ಚೌಧರಿ

- Advertisement -
- Advertisement -

ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪಕ್ಷಗಳೂ ಸಹ ತಮ್ಮ ಶಕ್ತಿ ಮೀರಿ ಪ್ರಚಾರ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಲ್ಕತ್ತಾದಲ್ಲಿ ಫೆ.28ರಂದು ನಡೆದ ಎಡ ಪಕ್ಷಗಳ ಮೈತ್ರಿಯ ಬೃಹತ್ ಚುನಾವಣಾ ರ್‍ಯಾಲಿ ದೇಶದ ಗಮನ ಸೆಳೆದಿದೆ. “ಬಿಜೆಪಿ ತ್ಯಜಿಸಿ-ಟಿಎಂಸಿ ಸೋಲಿಸಿ” ಎನ್ನುವ ಘೋಷಣೆಗಳು ರ್‍ಯಾಲಿಯಲ್ಲಿ ಮೊಳಗಿದವು.

ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡು 10 ವರ್ಷದ ನಂತರ ಎಡ ಪಕ್ಷವು ಕಾಂಗ್ರೆಸ್ ಹಾಗೂ ಹೊಸತಾಗಿ ರಚನೆಯಾಗಿರುವ ಮೈತ್ರಿಕೂಟ ಇಂಡಿಯನ್ ಸೆಕ್ಯುಲರ್ ಫ್ರಂಟ್( ಐಎಸ್ಎಫ್)ನೊಂದಿಗೆ ಭಾನುವಾರ ಬೃಹತ್ ರ್‍ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿಯ ನಂತರ ಮೂರನೇ ಶಕ್ತಿಯಾಗಿ ಹೊರಹೊಮ್ಮುವುದಾಗಿ ವಿಶ್ವಾಸ ವ್ಯಕ್ತಪಡಿಸಿದೆ.

ಇದಕ್ಕೆ ಸಾಕ್ಷಿಯಾಗಿ ಇಲ್ಲಿನ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮೆಗಾ ರ್‍ಯಾಲಿ ನಡೆಸುವ ಮೂಲಕ ಎಡಪಕ್ಷ-ಕಾಂಗ್ರೆಸ್-ಐಎಸ್‌ಎಫ್ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಪ್ರಚಾರ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಲ್ಲಿ ಬಹುಶಃ 10 ಲಕ್ಷಕ್ಕೂ ಹೆಚ್ಚು ಜನ ಇರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ರ್‍ಯಾಲಿಯಲ್ಲಿ ಸಿಪಿಎಂ ನಾಯಕರು ತೃಣಮೂಲ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಜನಹಿತ ಸರಕಾರಕ್ಕಾಗಿ ಮೂರನೇ ಪರ್ಯಾಯ ಶಕ್ತಿಯ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಎಡ ಪಕ್ಷಗಳನ್ನು ಹಾಗೂ ಜನತಾ ಬ್ರಿಗೇಡ್ ಗೆ ಮತ ನೀಡಿ ಗೆಲ್ಲಿಸಲು ಕಾಮ್ರೇಡ್ ಸೀತಾರಾಂ ಯೆಚೂರಿ, ಕಾಮ್ರೇಡ್ ಡಿ.ರಾಜಾ ಕರೆ ನೀಡಿದ್ದಾರೆ.

“ಎಡ-ಕಾಂಗ್ರೆಸ್ ಪಕ್ಷಗಳು ಮತ್ತು ಇತರ ಜಾತ್ಯತೀತ ಶಕ್ತಿಗಳ ಮಹಾ ಮೈತ್ರಿಕೂಟವು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಕೇವಲ ಎರಡು ಆಯ್ಕೆಗಳ ಸ್ಪರ್ಧೆಯಾಗಲು ಬಿಡುವುದಿಲ್ಲ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಎರಡನ್ನೂ ಸೋಲಿಸುತ್ತೇವೆ” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಹೇಳಿದ್ದಾರೆ.

ರ್‍ಯಾಲಿಯಲ್ಲಿ ಸಿಪಿಐ(ಎಂ) ನಾಯಕರು ಮಾತನಾಡಿ ಕೋಮುವಾದದ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಸೋಲಿಸುವಂತೆ ಕರೆ ನೀಡಿದ್ದಾರೆ. ಜೊತೆಗೆ ಜನಹಿತ ಸರ್ಕಾರಕ್ಕಾಗಿ ಪರ್ಯಾಯವಾಗಿ ಮೂರನೇ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ


ಇದನ್ನೂ ಓದಿ: “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...